ಜನರ ಸಮಸ್ಯೆ ಆಲಿಸಿದ ಎಸಿ

ನಿಡಗುಂದಿ ತಹಶೀಲ್ದಾರ್‌ ಕಚೇರಿಗೆ ಗೆಣ್ಣೂರ ಭೇಟಿ-ಪರಿಶೀಲನೆ

Team Udayavani, Jun 15, 2019, 3:51 PM IST

15-June-28

ನಿಡಗುಂದಿ: ಕಂದಾಯ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ನಿಡಗುಂದಿ ತಹಶೀಲ್ದಾರ್‌ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಡಗುಂದಿ: ಪಟ್ಟಣದಲ್ಲಿ ವೃದ್ಧನೊಬ್ಬ ವೃದ್ದಾಪ್ಯ ವೇತನದ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಲು ಹೋದಾಗ ಮೂರ್ಛೆ ಹೋದ ಘಟನೆ ಬಗ್ಗೆ ವಿಚಾರಣೆಗಾಗಿ ಶುಕ್ರವಾರ ಕಂದಾಯ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ನಿಡಗುಂದಿ ತಹಶೀಲ್ದಾರ್‌ ಕಚೇರಿಗೆ ಭೇಟಿ ನೀಡಿದರು.

ತಾಲೂಕಿನ ಹೊಳೆಮಸೂತಿ ಗ್ರಾಮದ ಚಂದ್ರಶೇಖರ ಕಳಸಗೊಂಡ ಎಂಬ (79) ವರ್ಷದ ವಯೋವೃದ್ಧ ವ್ಯಕ್ತಿ ನಿಡಗುಂದಿಗೆ ಅರ್ಜಿ ಸಲ್ಲಿಸಲು ಬಂದಾಗ ಕಚೇರಿಗೆ ಅಲೆದಾಡಿ ಸುಸ್ತಾಗಿ ನಿತ್ರಾಣಗೊಂಡು ಮೂರ್ಛೆ ಹೋದ ಘಟನೆ ಗುರುವಾರ ನಡೆದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ಉಪ ವಿಭಾಗಾಧಿಕಾರಿ ಗೆಣ್ಣೂರ, ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಬಂದ ಪ್ರತಿಯೊಬ್ಬರ ಸಮಸ್ಯೆಯನ್ನು ಆಲಿಸಿದರು.

ನಂತರ ಚಂದ್ರಶೇಖರ ಕಳಸಗೊಂಡ ಅವರ ಪುತ್ರ ಮಲ್ಲಿಕಾರ್ಜುನನ್ನು ಕರೆಯಿಸಿ ಗುರುವಾರ ನಡೆದ ಘಟನೆ ಬಗ್ಗೆ ಹೇಳಿಕೆ ಪಡೆದರು. ನಮ್ಮ ತಂದೆಗೆ ಫೀಟ್ಸ್‌ (ಮೂರ್ಛೆ ರೋಗ) ರೋಗ ಇತ್ತು ಎಂದು ಮಲ್ಲಿಕಾರ್ಜುನ ತಿಳಿಸಿದರು.

ಕುಟುಂಬದ ಹಿನ್ನೆಲೆ, ಆರ್ಥಿಕ ಸ್ಥಿತಿಗತಿ ಬಗ್ಗೆ ಪ್ರಶ್ನಿಸಿದ ಗೆಣ್ಣೂರ, ವೃದ್ಧಾಪ್ಯ ವೇತನ ಇರುವುದು ಬಡವರಿಗೆ ಮಾತ್ರ ಎಂದರು. ಕಳಸಗೊಂಡ ಅವರಿಗೆ ಒಟ್ಟು 8 ಎಕರೆ ನೀರಾವರಿ ಜಮೀನಿದ್ದು ಕಬ್ಬು ಬೆಳೆಯುತ್ತಾರೆ. ಮೂವರು ಪುತ್ರರಿದ್ದು ಎಲ್ಲರೂ ಸ್ವಯಂ ಉದ್ಯೋಗದಲ್ಲಿ ಸ್ಥಿತಿವಂತರಾಗಿದ್ದಾರೆ. ತಂದೆ, ತಾಯಿಯನ್ನು ಸಾಕುವುದು ಮಕ್ಕಳ ಕೆಲಸ, ವೃದ್ಧಾಪ್ಯ ವೇತನ ಇರುವುದು ಬಡ ವೃದ್ಧರಿಗೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಕಂದಾಯ ನಿರೀಕ್ಷಕರ ವರದಿ ಆಧಾರದ ನಂತರ ವೇತನ ಮಂಜೂರಿ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಗೆಣ್ಣೂರ ತಿಳಿಸಿದರು.

ಘಟನೆ ಕಚೇರಿಯಲ್ಲಿ ನಡೆದಿಲ್ಲ: ಗುರುವಾರದ ಘಟನೆ ಬಗ್ಗೆ ಎಲೆಕ್ಟ್ರಾನಿಕ್‌ ಮಾಧ್ಯಮ ಸೇರಿದಂತೆ ರಾಜ್ಯಾದ್ಯಂತ ಕಚೇರಿಯಲ್ಲಿಯೇ ಮೂರ್ಛೆ ಹೋಗಿದ್ದಾರೆ, ಸಿಬ್ಬಂದಿ ಯಾರೂ ಆಸ್ಪತ್ರೆಗೆ ಸೇರಿಸಿಲ್ಲ ಎಂದು ಪ್ರಚಾರವಾಗಿದೆ. ಘಟನೆಯ ನೈಜತೆ ಅರಿಯಲು ಪರಿಶೀಲನೆ ನಡೆಸಿದ್ದು ಘಟನೆ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದಿಲ್ಲ ಎಂದು ಎ.ಸಿ. ಸೋಮಲಿಂಗ ಗೆಣ್ಣೂರ ಸ್ಪಷ್ಟಪಡಿಸಿದರು.

ತಹಶೀಲ್ದಾರ್‌ ಕಚೇರಿ ಪಕ್ಕದ ದೇವಸ್ಥಾನದಲ್ಲಿ ವೃದ್ಧ ಮೂರ್ಛೆ ಹೋಗಿದ್ದಾರೆ. ಅಲ್ಲಿಯ ಜನ ಆಸ್ಪತ್ರೆಗೆ ಸೇರಿಸಿದ್ದಾರೆ. ಕಚೇರಿಯಲ್ಲಾಗಿದ್ದರೇ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ಸೇರಿಸುತ್ತಿದ್ದರು ಎಂದು ಗೆಣ್ಣೂರ ಹೇಳಿದರು. ತಹಶೀಲ್ದಾರ್‌ ಇಸ್ಮಾಯಿಲ್ ಮುಲ್ಕಿಸಿಪಾಯಿ, ಹಿರೇಮಠ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.