ನನಸಾಗದ ನಿವೇಶನ ರಹಿತರ ಕನಸು!

ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿ ವರ್ಷ ಕಳೆದರೂ ಇನ್ನೂ ಕಾರ್ಯರೂಪಕ್ಕೆ ಬಾರದ ಯೋಜನೆ

Team Udayavani, Oct 31, 2019, 6:26 PM IST

31-October-30

„ಪ್ರಶಾಂತ್‌ ಶೆಟ್ಟಿ
ಎನ್‌.ಆರ್‌.ಪುರ: ತಾಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರುವ ನಿವೇಶನ ರಹಿತರಿಗೆ ನಿವೇಶನ ವಿತರಿಸಲು ಜಾಗ ಕಾಯ್ದಿರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿ ಒಂದು ವರ್ಷ ಕಳೆದರೂ ಇನ್ನೂ ಕಾರ್ಯಗತವಾಗಿಲ್ಲ ಎಂಬ ಕೂಗು ನಿವೇಶನ ರಹಿತರಿಂದ ಕೇಳಿಬರುತ್ತಿದೆ.

ತಾಲೂಕಿನ ಕಸಬಾ ಹೋಬಳಿಯ ನಾಗಲಾಪುರ ಗ್ರಾಮದ ಸರ್ವೆ ನಂ.179ರಲ್ಲಿ 5.20 ಎಕರೆ ಜಮೀನನ್ನು ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಗೆ ಹಾಗೂ 1ಎಕರೆ ಜಮೀನನ್ನು ಹಿಂದೂ ಸ್ಮಶಾನಕ್ಕಾಗಿ ಕಾಯ್ದಿರಿಸುಸುವಂತೆ ತಾಲೂಕು ಆಡಳಿತದಿಂದ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಈ ಸರ್ವೆ ನಂ. ವ್ಯಾಪ್ತಿಯಲ್ಲಿ ಸಾಕಷ್ಟು ಗೋಮಾಳ ಜಮೀನು ಲಭ್ಯವಿದೆ. ಡೀಮ್ಡ್ ಫಾರೆಸ್ಟ್‌ ಜಿಲ್ಲಾ ಅರಣ್ಯ, ಸೆಕ್ಷನ್‌ 4ರ ಅರಣ್ಯ ಮೀಸಲು ಅರಣ್ಯವಾಗದೇ ಇರುವುದನ್ನು ಪರಿಗಣಿಸಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಭೂ ಕಂದಾಯ ನಿಯಮ 1966ರ 67(4) ಮತ್ತು ಭೂ ಮಂಜೂರಿ ನಿಯಮ 1969ರ 18-ಎ ಪ್ರಕಾರ ನಾಗಲಾಪುರ ಗ್ರಾಮದಲ್ಲಿ 6.20 ಎಕರೆ ಕಂದಾಯ ಜಮೀನನ್ನು 29ರ ಸೆಪ್ಟೆಂಬರ್‌ 2018ರಂದು ಗ್ರಾಮ ಪಂಚಾಯಿತಿಯ ನಿವೇಶನ ರಹಿತರಿಗಾಗಿ ಆಶ್ರಯ ನಿವೇಶನ ಹಾಗೂ ಸ್ಮಶಾನ ಜಾಗಕ್ಕೆ ಕಾಯ್ದಿರಿಸಿ ಆದೇಶಿಸಿದ್ದರು.

ಒಂದು ವರ್ಷದ ಹಿಂದೆ ತಾಲೂಕಿನ ಸೀಗುವಾನಿ ಗ್ರಾಮದಿಂದ ಜ್ಯೋತಿಷಿಯೊಬ್ಬರ ಮಾತು ಕೇಳಿ ಗ್ರಾಮವನ್ನೇ ತೊರೆದಿದ್ದ ಪ್ರಸ್ತುತ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗಕ್ಕೂ ಇದೇ ಗ್ರಾಮದಲ್ಲಿ ಆಶ್ರಯ ನಿವೇಶನ ನೀಡಿ ಮನೆ ನಿರ್ಮಿಸಿಕೊಡಲು ತಾಲೂಕು ಆಡಳಿತ ನಿರ್ಧರಿಸಿತ್ತು.

ನಿವೇಶನ ಹಂಚಿಕೆ ಪ್ರಕ್ರಿಯೆಗೆ ಕಾರ್ಯ ಪ್ರವೃತ್ತರಾಗಿದ್ದ ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಅರಣ್ಯ ಇಲಾಖೆಯಿಂದ ಬೆಳೆಸಿರುವ ಅಕೇಶಿಯಾ ಮರಗಳನ್ನು ತೆರವುಗೊಳಿಸಿ, ಕಂದಾಯ ಇಲಾಖೆಯಿಂದ ದಾಖಲೆ ಸಮೇತ ಪಂಚಾಯಿತಿಗೆ ಹಸ್ತಾಂತರಿಸಿ ಬಡಾವಣೆ ನಿರ್ಮಾಣ ಮಾಡಲು ಅವಕಾಶ ಮಾಡಿಕೊಡುವಂತೆ ಪತ್ರ ಬರೆದಿದ್ದರು.

ಆಶ್ರಯ ನಿವೇಶನಕ್ಕೆ ಮೀಸಲಿರಿಸಿದ್ದ ಜಾಗವನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಆಡಳಿತ ಮಂಡಳಿ ಮುಂಜಾಗ್ರತೆಯಿಂದ ಸ್ಥಳೀಯರ ಸಹಕಾರ ಪಡೆದು ಕಂದಕ ನಿರ್ಮಿಸಿ ಅತಿಕ್ರಮ ಪ್ರವೇಶ ಮಾಡದಂತೆ ಎಚ್ಚರಿಕೆಯ ನಾಮಫಲಕವನ್ನು ಅಳವಡಿಸಿತ್ತು.

ಅರಣ್ಯ ಇಲಾಖೆಯ ವಿಳಂಬ ನೀತಿಯಿಂದಾಗಿ ಜಿಲ್ಲಾಧಿಕಾರಿಗಳು ಆದೇಶ ಮಾಡಿ ಒಂದು ವರ್ಷಗಳು ಸಂದರೂ ನಿವೇಶನ ಹಂಚಿಕೆ ಸಾಧ್ಯವಾಗಿಲ್ಲ. ಅಲ್ಲದೇ, ಅಲೆಮಾರಿ ಜನಾಂಗದವರು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗದೆ ಇಂದಿಗೂ ಬಾಳೆಕೊಪ್ಪ ಗ್ರಾಮದ ಸರ್ಕಾರಿ ಶಾಲೆಯ ನಿವೇಶನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಟೆಂಟ್‌ಗಳಲ್ಲಿ ವಾಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.