ನೀರಿಲ್ಲದೇ ಸಾರ್ವಜನಿಕ ಶೌಚಾಲಯಕ್ಕೆ ಬೀಗ

ಔರಾದ ಪಟ್ಟಣದಲ್ಲಿ ನೀರಿನ ಸಮಸ್ಯೆ ತೀವ್ರ •ಟ್ಯಾಂಕರ್‌ನಿಂದ ಸರಬರಾಜಿಗೆ ಒತ್ತಾಯ

Team Udayavani, May 1, 2019, 3:43 PM IST

1-MAY-25

ಔರಾದ: ನೀರಿಲ್ಲದಕ್ಕೆ ಜನತಾ ಬಡಾವಣೆ ಶೌಚಾಲಯಕ್ಕೆ ಬೀಗ ಹಾಕಲಾಗಿದೆ.

ಔರಾದ: ನೀರಿನ ಸಮಸ್ಯೆ ಪಟ್ಟಣದ ಜನರಿಗಷ್ಟೇ ಅಲ್ಲ ಸಾರ್ವಜನಿಕ ಶೌಚಾಲಯಕ್ಕೂ ತಟ್ಟಿದೆ. ನೀರಿಲ್ಲದ ಕಾರಣ ಪಟ್ಟಣದ ಎರಡು ಶೌಚಾಲಗಳಿಗೆ ಬೀಗ ಹಾಕಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಮಳೆ ಕಡಿಮೆ ಪ್ರಮಾಣದಲ್ಲಿ ಆಗಿಸುವುದರಿಂದ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಪಟ್ಟಣದ ನಿವಾಸಿಗಳು ನಿತ್ಯ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದರೆ, ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಎರಡು ಶೌಚಾಲಯಗಳ‌ಲ್ಲಿ ಬಳಸಲು ನೀರು ಇಲ್ಲದೆ ಮುಚ್ಚಲಾಗಿದೆ. ಗಣೇಶ ಮಾರ್ಕೇಟ್ ಹಾಗೂ ಜನತಾ ಬಡಾವಣೆಯ ಶೌಚಾಲಯಗಳಿಗೂ ಬೀಗ ಹಾಕಲಾಗಿದೆ.

ಸರ್ಕಾರಿ ಕಚೇರಿ ಕೆಲಸಗಳಿಗಾಗಿ ಪಟ್ಟಣಕ್ಕೆ ಬರುವ ಜನರು ಹಾಗೂ ಪಟ್ಟಣದ ನಿವಾಸಿಗಳು ಬಸ್‌ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋಗುವಂತಹ ಅನಿವಾರ್ಯತೆ ಬಂದಿದೆ. ಸಾರಿಗೆ ಸಂಸ್ಥೆ ಅಧೀನದಲ್ಲಿರುವ ಬಸ್‌ ನಿಲ್ದಾಣದ ಶೌಚಾಲಯ ನಿರ್ವಹಣೆಕಾರರು, ಖಾಸಗಿ ವ್ಯಕ್ತಿಗಳಿಂದ ಅಧಿಕ ಹಣ ನೀಡಿ ಟ್ಯಾಂಕರ್‌ ಮೂಲಕ ನೀರು ತರಿಸಿಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಅಲ್ಲದೆ ಈ ಹಿಂದೆ ಶೌಚಾಲಯಕ್ಕೆ ಬರುವ ವ್ಯಕ್ತಿಗಳಿಂದ 6 ರೂ. ಪಡೆಯಲಾಗುತ್ತಿತ್ತು. ಈಗ ಶೌಚಾಲಯ ನಿರ್ವಹಣೆ ಮಾಡುವ ವ್ಯಕ್ತಿಗಳು ಪ್ರತಿಯೊಬ್ಬರಿಂದ 10 ರೂ. ಪಡೆದುಕೊಳ್ಳುತ್ತಿದ್ದಾರೆ.

ಪಟ್ಟಣದ ಪಂಚಾಯತ, ತಾಲೂಕು ಆಡಳಿತಾಧಿಕಾರಿಗಳು ಮತ್ತು ಜಿಲ್ಲಾಡಳಿತಗಳು ಕೂಡಲೆ ಪಟ್ಟಣದಲ್ಲಿ ಉಲ್ಭಣವಾದ ನೀರಿನ ಸಮಸ್ಯೆ ಬಗೆ ಹರಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಪಟ್ಟಣದ ನಿವಾಸಿಗಳು ನೀರಿಗಾಗಿ ಜೀವ ಬಿಡುವ ಸ್ಥಿತಿ ಕೂಡ ಕೆಲವೇ ದಿನಗಳಲ್ಲಿ ಬಹುವುದು.

ಟೆಂಡರ್‌ ಪ್ರಗತಿಯಲ್ಲಿದೆ: ಈಗಾಗಲೇ ಪಟ್ಟಣದಲ್ಲಿ ಉದ್ಭವಾದ ನೀರಿನ ಸಮಸ್ಯೆ ಬಗೆ ಹರಿಸಲು ಖಾಸಗಿ ವ್ಯಕ್ತಿಗಳಿಂದ ಟ್ಯಾಂಕರ್‌ ನೀರು ಪೂರೈಸಲು ಟೆಂಡರ್‌ ಕರೆಯಲಾಗಿದೆ. ಟೆಂಡರ್‌ನಲ್ಲಿ 20ರಿಂದ 30 ಜನ ಖಾಸಗಿ ಟ್ಯಾಂಕರ್‌ ಮಾಲೀಕರು ನೀರು ಸರಬರಾಜು ಮಾಡಲು ಒಪ್ಪಿಗೆ ನೀಡಿದ್ದಾರೆ. ಮಂಗಳವಾರ ಖಾಸಗಿ ಟ್ಯಾಂಕರ್‌ ಮಾಲೀಕರಿಗೆ ಆದೇಶ ಪ್ರತಿ ನೀಡಿ ಪ್ರತಿಯೊಂದು ವಾರ್ಡ್‌ಗೂ ಅಲ್ಲಿನ ಜನಸಂಖ್ಯೆ ಅನುಗುಣವಾಗಿ ನೀರು ಸರಬರಾಜು ಮಾಡಲಾಗುತ್ತದೆ ಎಂದು ಪಪಂ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. ಅದಲ್ಲದೆ ತಾಲೂಕಿನ ತೇಗಂಪೂರ ಹಾಗೂ ಬೋರಾಳ ಗ್ರಾಮದಲ್ಲಿ ಮೂರು ದಿನಗಳಲ್ಲಿ ಕೊಳವೆ ಬಾವಿ ಕೊರೆಸಿ ನೀರು ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಪಟ್ಟಣದ ನಿವಾಸಿಗಳು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಜನರ ಕಷ್ಟ ಬಗೆ ಹರಿಸಲು ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರವಾಗಿ ಜನರೊಂದಿಗೆ ಇದ್ದಾರೆ. ನಾಳೆಯಿಂದ ಪ್ರತಿವಾರ್ಡ್‌ಗೂ ಟ್ಯಾಂಕರ್‌ ಮೂಲಕ ನೀರು ಸರಬರಾಜು ಆಗಲಿದೆ. ಸಾರ್ವಜನಿಕ ಶೌಚಾಲಯಕ್ಕೂ ಟ್ಯಾಂಕರ್‌ ಮೂಲಕ ನೀರು ಪೂರೈಸಿ ಆರಂಭಿಸಲಾಗುವುದು.
ವಿಠಲ ಹಾದಿಮನಿ,
ಪಪಂ ಮುಖ್ಯಾಧಿಕಾರಿ

ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಅಧಿಕಾರಿಗಳು ಶೀಘ್ರದಲ್ಲಿ ಜನರಿಗೆ ಕುಡಿಯುವ ನೀರು ಸಿಗುವಂತೆ ಮಾಡಬೇಕು. ಇಲ್ಲವಾದಲ್ಲಿ ಜಲಕ್ಕಾಗಿ ತಾಲೂಕಿನಲ್ಲಿ ದೊಡ್ಡ ಹೋರಾಟವೇ ಶುರುವಾಗುತ್ತದೆ.
ಪವನ ಪಂಚಾಕ್ಷರೆ, ಸ್ಥಳೀಯ ನಿವಾಸಿ

ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.