ನೀರಿನ ಸಮಸ್ಯೆಗೆ ಸಿಕ್ಕಿಲ್ಲ ಸ್ಪಂದನೆ

ಸರ್ಕಾರ-ಜಿಲ್ಲಾಡಳಿತಕ್ಕೆ ಶಾಸಕ ಚವ್ಹಾಣ ಎಂಟು ಬಾರಿ ಪತ್ರ

Team Udayavani, May 3, 2019, 10:36 AM IST

3-May-5

ಔರಾದ: ಶಾಸಕ ಪ್ರಭು ಚವ್ಹಾಣ ಕಲಬುರಗಿ ಪ್ರಾದೇಶಿಕ ಆಯುಕ್ತರಿಗೆ ಬರೆದ ಪತ್ರ.

ಔರಾದ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕರ್ತವ್ಯ ನಿರ್ವಹಿಸಿ ಎಂದು ಶಾಸಕ ಪ್ರಭು ಚವ್ಹಾಣ ಎಂಟು ಬಾರಿ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಪತ್ರ ಬರೆದರೂ ಸ್ಪಂದನೆ ಮಾತ್ರ ಸಿಗದೇ ಉಲ್ಬಣವಾಗಿದೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ವಾಡಿಕೆಯಂತೆ ಆಗದೆ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲಬಣವಾಗುತ್ತಿದೆ.ಅಲ್ಲದೆ ತಾಲೂಕಿನಲ್ಲಿನ ಬಹುತೇಕ ಜಲಮೂಲಗಳು ಬತ್ತಿ ಹೋಗಿವೆ ಎಂದು ಶಾಸಕ ಚವ್ಹಾಣ ಪತ್ರದ ಮೂಲಕ ಗಮನ ಸೆಳೆದಿದ್ದರು. ಆದರೂ ಯಾವುದೇ ಪರಿಹಾರ ಸಿಕ್ಕಿಲ್ಲ.

ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬರುತ್ತದೆ ಎಂದು ಶಾಸಕ ಪ್ರಭು ಚವ್ಹಾಣ ಕಳೆದ ನಾಲ್ಕು ತಿಂಗಳಲ್ಲಿ ಸರ್ಕಾರ, ಜಿಲ್ಲಾಡಳಿತ, ಪ್ರದೇಶಿಕ ಆಯುಕ್ತರು ಮತ್ತು ತಹಶೀಲ್ದಾರ್‌ಗೆ ಪತ್ರ ಬರೆದಿದ್ದಾರೆ. ಆದರೂ ಕೂಡ ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ಕಾರಂಜಾ ಜಲಾಶಯದಿಂದ ಗಡಿ ತಾಲೂಕಿನ ಮಾಂಜ್ರಾ ನದಿಗೆ ನೀರು ಬಿಡದಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ನಿತ್ಯವೂ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೇ ನೀರಿನ ಕೊರತೆ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಸಹ ಸ್ಥಗಿತಗೊಂಡಿದೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ.

ತಾಲೂಕಿನ ರೈತರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ತಾಲೂಕಿನ ಕೌಠಾ(ಬಿ) ಹಾಗೂ ಕಂದಗೂಳ ಸೇತುವೆ ಮೇಲೆ ಪ್ರತಿಭಟನೆ ನಡೆಸಿದ್ದರು.ಅಲ್ಲದೆ ಬೀದರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದಾಗ ಜಿಲ್ಲಾಧಿಕಾರಿಗಳು ವಾರದಲ್ಲಿ ಕಾರಂಜಾ ಜಲಾಶಯದಿಂದ ಮಾಜ್ರಾನದಿಗೆ ನೀರು ಬಿಡಲಾಗುವುದು ಎಂದು ಪ್ರತಿಭಟನೆಯಲ್ಲಿ ನಿರತರಾಗಿದ್ದ ರೈತರಿಗೆ ತಿಳಿಸಿದ್ದರು. ಆದರೆ ನಾಲ್ಕು ತಿಂಗಳು ಕಳೆದರೂ ನಮ್ಮ ತಾಲೂಕಿಗೆ ಹನಿ ನೀರು ಸಹ ಬಂದಿಲ್ಲ ಎಂದು ಮಾಂಜ್ರಾ ನದಿ ದಡದಲ್ಲಿರುವ ಗ್ರಾಮಸ್ಥರ ಹಾಗೂ ರೈತ ಸಂಘದ ಸದಸ್ಯರು ಆರೋಪಿಸಿದ್ದಾರೆ. ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಜಿಲ್ಲಾಡಳಿತ ಸಬ್ಬಂಧಿಸಿದ ಗ್ರಾಪಂ ಹಾಗೂ ಪಪಂ ಅಧಿಕಾರಿಗಳಿಗೆ ಆದೇಶ ನೀಡಲು ಮುಂದಾಗಬೇಕು.ಇಲ್ಲವಾದಲ್ಲಿ ನಮ್ಮ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಮಂತ ಬಿರಾದರ ತಿಳಿಸಿದ್ದಾರೆ.

ಪಟ್ಟಣಕ್ಕೆ ಸರಬರಾಜು ಮಾಡುವ ಬಾವಿಗಳು ಬತ್ತಿವೆ. ಆದರೆ ಪಟ್ಟಣ ಸೇರಿದಂತೆ ಬಹುತೇಕ ಗ್ರಾಮದ ಖಾಸಗಿ ವ್ಯಕ್ತಿಗಳ ತೆರೆದ ಬಾವಿಯಲ್ಲಿ ನೀರು ಇದೆ. ವ್ಯಾಪಾರಿಗಳು ಮತ್ತು ಟ್ಯಾಂಕರ್‌ ಮಾಲೀಕರು ಖಾಸಗಿ ವ್ಯಕ್ತಿಗಳ ಹೊಲದ ಬಾವಿ ನೀರು ತಂದು ಪಟ್ಟಣದಲ್ಲಿ ಮಾರಾಟ ಮಾಡುತ್ತಿದ್ದಾರೆ. ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಕೂಡಲೇ ಖಾಸಗಿ ವ್ಯಕ್ತಿಗಳ ತೆರೆದ ಬಾವಿ ಮತ್ತು ಕೊಳವೆ ಬಾವಿ ವಶಕ್ಕೆ ಪಡೆದು ನೀರು ಪೂರೈಸಲು ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ಪುರಾತನ ಬಾವಿಗಳಲ್ಲಿ ನೀರು ಇದೆ. ಬಾವಿಯಲ್ಲಿನ ಹೂಳು ತೆಗೆದರೆ ಕನಿಷ್ಠ ಕುಡಿಯಲು ನೀರು ಸಿಗುತ್ತದೆ. ಅಧಿಕಾರಿಗಳು ಬೇಸಿಗೆ ಮುಗಿಯುವ ತನಕ ಸೋಮಾರಿಗಳಾಗದೆ ಜನರಿಗೆ ಉತ್ತಮ ಆಡಳಿತ ನೀಡಲು ಮುಂದಾಗಬೇಕು.
ಬಸವಣಪ್ಪ ಅಲ್ಮಾಜೆ,
ಹಿರಿಯ ಮುಖಂಡರು ಔರಾದ

ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.