ನೀರಿಲ್ಲದೇ ಜನರಿಗೆ ಸಂಕಟಟ್ಯಾಂಕರ್‌ನವರಿಗೆ ಚೆಲ್ಲಾಟ!

ಔರಾದನಲ್ಲಿ ಜಲಮೂಲ ಬತ್ತಿ ಪರದಾಟ•ಹೆಚ್ಚು ಹಣಕ್ಕೆ ನೀರು ಮಾರಾಟ

Team Udayavani, Apr 26, 2019, 10:29 AM IST

26-April-6

ಔರಾದ: ಪಟ್ಟಣದ ಕನಕ ಬಡಾವಣೆಯ ಕೊಳವೆ ಬಾವಿ ಬಳಿ ನೀರಿಗಾಗಿ ಸರತಿ ಸಾಲಿನಲ್ಲಿ ಇಟ್ಟಿರುವ ಕೊಡಗಳು

ಔರಾದ: ಬೇಸಿಗೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಮೂಲವಿಲ್ಲದಾಗಿ, ಟ್ಯಾಂಕರ್‌ ನೀರಿಗೂ ಕೂಡ ಬಂಗಾರದ ಬೆಲೆ ಬಂದಿದೆ. ಇದರಿಂದ ಪಟ್ಟಣದ ನಿವಾಸಿಗಳು ನಿತ್ಯ ನೀರಿಗಾಗಿ ತೀವ್ರ ಸಮಸ್ಯೆ ಎದುರಿಸುವಂತಾಗಿದೆ.

ಪಟ್ಟಣದಲ್ಲಿ ಪ್ರತಿನಿತ್ಯ ನಲ್ಲಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡದಿರುವುದರಿಂದ ಜನರು ಗೈರಾಣಾಗುತ್ತಿದ್ದಾರೆ. ಔರಾದ ಪಟ್ಟಣಕ್ಕೆ ಪ್ರತಿನಿತ್ಯ ತೇಗಂಪೂರ ಗ್ರಾಮದ ತೆರೆದ ಬಾವಿಯಿಂದ, ಬೋರಾಳ ಹಾಗೂ ಹಲ್ಲಳ್ಳಿ ಗ್ರಾಮದಿಂದ ನೀರು ಸರಬರಾಜು ಮಾಡಲಾಗುತ್ತಿತ್ತು. ಬೇಸಿಗೆ ಬಿಸಿಲು ಹೆಚ್ಚಾಗುತ್ತಿದಂತೆ ಜಲಮೂಲಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ. ಇದರಿಂದ ನಾಲ್ಕು ವಾರಗಳಿಂದ ಪಟ್ಟಣದ ಜನತೆಗೆ ಟ್ಯಾಂಕರ್‌ ನೀರೆ ಗತಿಯಾಗಿದೆ.

ಪಟ್ಟಣದ ಜನತಾ ಬಡಾವಣೆ ಹಾಗೂ ಕನಕ ಬಡಾವಣೆಯ ಕೊಳವೆ ಬಾವಿಯಲ್ಲಿ ನಿತ್ಯ ಅಲ್ಪ ಸ್ವಲ್ಪ ನೀರು ಬರುತ್ತಿವೆ. ಹೀಗಾಗಿ ಪಟ್ಟಣದ ಬಹುತೇಕ ನಿವಾಸಿಗಳು ಎರಡು ಕಡೆಗೆ ಬೆಳಗ್ಗೆಯಿಂದಲೇ ಕೊಡಗಳನ್ನು ಸರತಿ ಸಾಲಿನಲ್ಲಿ ಇಟ್ಟು ನೀರು ತರುತ್ತಾರೆ.

ನೀರಿಗೆ ಬಂಗಾರದ ಬೇಲೆ: ಜಲಮೂಲಗಳು ಸಂಪೂರ್ಣ ಬತ್ತಿರುವ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತನಿಂದ ನಿತ್ಯ ಸರಬರಾಜು ಆಗುವ ನೀರು ಸ್ಥಗಿತವಾಗಿದೆ. ಇದರಿಂದ ಖಾಸಗಿ ಕೊಳವೆ ಬಾವಿಯ ಮಾಲೀಕರು ಹಾಗೂ ಟ್ಯಾಂಕರ್‌ ನೀರು ಸರಬರಾಜು ಮಾಡುವ ವ್ಯಾಪಾರಿಗಳು ಸೇರಿ ಜನರಿಂದ ಮನ ಬಂದಂತೆ ಹಣ ಪಡೆಯುತ್ತಿದ್ದಾರೆ. ವರ್ಷಪೂರ್ತಿ ಪ್ರತಿ ಟ್ಯಾಂಕ್‌ ನೀರಿಗೆ 200 ಪಡೆಯುವ ಟ್ಯಾಂಕರ್‌ ಮಾಲೀಕರು, ಸಿಕ್ಕ ಅವಕಾಶದ ಸದುಪಯೋಗ ಪಡೆಯುವ ಉದ್ದೇಶದಿಂದ ಪ್ರತಿ ಟ್ಯಾಂಕ್‌ ನೀರಿಗೆ 600 ರೂ. ಸುಲಿಗೆ ಮಾಡುತ್ತಿದ್ದಾರೆ. ಪಟ್ಟಣದ ನಿವಾಸಿಗಳು ಅನಿವಾರ್ಯವಾಗಿ ವ್ಯಾಪಾರಿಗಳು ಹೇಳಿದಷ್ಟು ಹಣ ನೀಡಿ ನಿತ್ಯ ನೀರು ಖರಿದಿಸುತ್ತಿದ್ದಾರೆ.

ತಾಲೂಕು ಆಡಳಿತ ಮೌನ: ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಖಾಸಗಿ ಟ್ಯಾಂಕರ್‌ ಮಾಲೀಕರು ಮಾತ್ರ ಜನರಿಂದ ಮನ ಬಂದಂತೆ ಹಣ ವಸೂಲು ಮಾಡುತ್ತಿದ್ದಾರೆ. ಆದರೂ ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯತ ಅಧಿಕಾರಿಗಳು ಜನರ ಸಮಸ್ಯೆ ಆಲಿಸಿ ಬಗೆ ಹರಿಸಲು ಯತ್ನಿಸದಿರುವುದು ಸಾರ್ವಜನಿಕರಲ್ಲಿ ನೋವು ಉಂಟು ಮಾಡಿದೆ.

ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಲು ಸರ್ಕಾರ ಪ್ರತಿ ಜಿಲ್ಲೆಗೆ ಅನುದಾನ ಬಿಡುಗಡೆ ಮಾಡಿದೆ ಜನನಾಯಕರು ಎಂದು ಸಭೆ ಸಮಾರಂಭದಲ್ಲಿ ಹೇಳುತ್ತಿದ್ದಾರೆ. ಆದರೆ ಪಟ್ಟಣದ ನಿವಾಸಿಗಳು ನಿತ್ಯ ನೀರಿಗಾಗಿ ಪರದಾಡುತ್ತಿದ್ದರೂ ಸಮಸ್ಯೆ ಬಗೆ ಹರಿಸಲು ಒಬ್ಬ ಅಧಿಕಾರಿಯೂ ಮುಂದೆ ಬಾರದಿರುವುದು ಹಲವು ಸಂಶಯಗಳಿಗೆ ಎಡೆ ಮಾಡುತ್ತಿದೆ.

ಪಟ್ಟಣದಲ್ಲಿನ ನೀರಿನ ಸಮಸ್ಯೆ ಬಗೆ ಹರಿಸಲು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ತಕ್ಷಣವೇ ತಿಳಿಸುತ್ತೇನೆ. ಖಾಸಗಿ ಟ್ಯಾಂಕರ್‌ ಮಾಲೀಕರು ಸಾರ್ವಜನಿಕರಿಂದ ಕಡಿಮೆ ಹಣ ಪಡೆಯುವಂತೆ ಸೂಚನೆ ನೀಡುತ್ತೇನೆ.
ಎಂ.ಚಂದ್ರಶೇಖರ,
ತಹಶೀಲ್ದಾರ್‌

ಕೊಡ ನೀರಿಗಾಗಿ ನಿತ್ಯ ನರಳುವ ಸ್ಥಿತಿ ಬಂದಿದೆ. ನೀರಿನ ಸಮಸ್ಯೆಯನ್ನು ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
ಚಂದ್ರಶೇಖರ ಪಾಟೀಲ,
ಸ್ಥಳೀಯ ನಿವಾಸಿ

ರವೀಂದ್ರ ಮುಕ್ತೇದಾರ್‌

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.