ಪಪಂಗೆ ಮಹಿಳೆಯರಿಂದ ಬೀಗ

ಕುಡಿವ ನೀರಿನ ಸಮಸ್ಯೆ ಪರಿಹರಿಸದ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ

Team Udayavani, Apr 27, 2019, 3:39 PM IST

27-April-25

ನಾಲತವಾಡ: ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸ್ಪಂದಿಸದ ಪಪಂ ಅಧಿಕಾರಿಯನ್ನು ಮಹಿಳೆಯರು ತರಾಟೆಗೆ ತಗೆದುಕೊಂಡರು.

ನಾಲತವಾಡ: ಕಳೆದ ಒಂದು ತಿಂಗಳಿಂದಲೂ ಕುಡಿಯುವ ಹನಿ ನೀರಿಗಾಗಿ ಅಲೆದಾಡುತ್ತೀದ್ದೇವೆ. ಪಪಂ ಅಧಿಕಾರಿ ನಮ್ಮ ವಾರ್ಡಿನತ್ತ ಗಮನ ಹರಿಸದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಸ್ಥಳೀಯ 13ನೇ ವಾರ್ಡಿನ ಮಹಿಳೆಯರು ಪಪಂ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಶುಕ್ರವಾರ ನಡೆಯಿತು.

ಪಪಂ ಮೇಲ್ದರ್ಜೆಗೇರಿಸಿ ನಮಗೇನು ಸುಖವಾಗಿಲ್ಲ, ಮೊದಲಿನ ಗ್ರಾಪಂ ಮೂಲಕ ನೀರಿನ ಕೊರತೆ ಎಂದೂ ಕಂಡು ಬಂದಿಲ್ಲ ಎಂದು ಪಪಂ ದುರಾಡಳಿತ ಖಂಡಿಸಿದ ಪುರುಷರು-ಮಹಿಳೆಯರು ಸತತ 4 ವರ್ಷಗಳಿಂದ ನಮ್ಮ ಓಣಿಯಲ್ಲಿ ಕುಡಿವ ನೀರಿನ ಕೊರತೆ ನೀಗಿಸಿಲ್ಲ ಎಂದು ದೂರಿದರು.

ಅಧಿಕಾರಿ ತರಾಟೆಗೆ: ಕಚೇರಿ ಕೆಲಸದ ವೇಳೆ ಬೆಳಿಗ್ಗೆ 8 ಗಂಟೆ ಎಂದು ಬದಲಿಸಿದರೂ 11 ಗಂಟೆಯಾದರೂ ಬಾರದ ಪಪಂ ಸಿಒ ಅವರ ವರ್ತನೆಗೆ ಮುತ್ತಿಗೆ ಹಾಕಿದ ಸಾರ್ವಜನಿಕರ ಪೈಕಿ ಈಶ್ವರ್‌ ಡಿಗ್ಗಿ ಫೋನ್‌ ಮೂಲಕ ತರಾಟೆಗೆ ತಗೆದುಕೊಂಡರು. ಸರಕಾರದ ಸಮಯ ಪಾಲನೆ ಗೊತ್ತಿಲ್ಲ, ಪಪಂ ಸಮಸ್ಯೆ ಗಮನಕ್ಕೆ ತಂದವರೊಂದಿಗೆ ವರ್ತನೆ ಸರಿಯಾಗಿರಲಿ, ಮೊದಲು ಕಚೇರಿ ಬರಬೇಕು. ಒಂದು ವೇಳೆ ಫೋನ್‌ ಕರೆಗೆ ಸ್ಪಂದಿಸದೇ ಹೋದಲ್ಲಿ ಬೇರೆ ಪರಿಣಾಮವಾಗುತ್ತದೆ ಎಂದು ಬೆವರಿಳಿಸಿದರು.

ನಮ್ಮ ವಾರ್ಡಿನಲ್ಲಿ ಉಂಟಾದ ನೀರಿನ ಹಾಹಾಕಾರ ನೀಗಿಸುವವರೆಗೂ ಮತ್ತು ಅಧಿಕಾರಿ ಬರುವವರೆಗೂ ಕಾಲ್ಕಿತ್ತಲ್ಲ ಎಂದು ರೊಚ್ಚಿಗೆದ್ದ ಮಹಿಳೆಯರು ಸ್ಥಳದಲ್ಲೇ ಬಿಡಾರ ಹೂಡಿದರು. ವಿಷಯ ಅರಿತ ಪಪಂ ಸಿಒ ಮಾರುತಿ ನಡುವಿನಕೇರಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಸುತ್ತುವರಿದ ಮಹಿಳೆ ಹಾಗೂ ಪುರುಷರು ಕುಡಿವ ನೀರಿನ ಸಮಸ್ಯೆ ಗಮನಕ್ಕೆ ತಂದರು.

ಈ ವೇಳೆ ಮಾತನಾಡಿದ ಅಧಿಕಾರಿಗಳು, ಕುಡಿವ ನೀರಿನ ಸಮಸ್ಯೆ ನೀಗಿಸಲೆಂದೇ ಟೆಂಡರ್‌ ಕರೆಯಲಾಗಿದೆ. ಯಾರೂ ಟೆಂಡರ್‌ ಹಾಕಲು ಬರುತ್ತಿಲ್ಲ, ಶೀಘ್ರವೇ ನಿಮ್ಮ ವಾರ್ಡಿನ ಕುಡಿಯುವ ನೀರಿನ ಸಮಸ್ಯೆ ಬರದಂತೆ ಇಂದೇ ಸ್ಥಳಕ್ಕೆ ಸಿಬ್ಬಂದಿಗಳನ್ನು ಕಳುಹಿಸಿ ಮಾಹಿತಿ ಪಡೆಯುತ್ತೇನೆ.ಗುಮ್ಮಿಗಳಿಗೆ ಸಂಪರ್ಕ ಕೊಡಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಮಹಿಳೆಯರು ಸ್ಥಳದಿಂದ ನಿರ್ಗಮಿಸಿದರು.

ಸಂಜು ಜೋಶಿ, ಈರಮ್ಮ ಹುಲಗಬಾಳ, ಅಂಬ್ರಮ್ಮ ತಾಳಿಕೋಟ, ಗೌರಮ್ಮ ಬಾಗೇವಾಡಿ, ಭಾರತಿ ಕುಲಕರ್ಣಿ, ರೇಣುಕಾ ಹೊಸೂರ, ಯಲ್ಲಮ್ಮ ಕ್ಷತ್ರಿ, ಮಮತಾ ಮುಲ್ಲಾ, ಪ್ರಭಾವತಿ ಹಾವರಗಿ ಇದ್ದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.