ಬಿತ್ತನೆ ಶೇಂಗಾ ಬೆಲೆ ಹೆಚ್ಚಳಕ್ಕೆ ಆಕ್ರೋಶ

30 ಕೆಜಿ ಪ್ಯಾಕೆಟ್‌ಗೆ ಏಕಾಏಕಿ ದರ ಏರಿಕೆ ಮಾಡಿದ್ದಕ್ಕೆ ಕಿಡಿ •ರಸ್ತೆ ತಡೆ ನಡೆಸಿ ಅಸಮಾಧಾನ

Team Udayavani, Jul 3, 2019, 3:43 PM IST

3-July-28

ಪರಶುರಾಂಪುರ: ಬಿತ್ತನೆ ಶೇಂಗಾ ಬೀಜ ದರ ಹೆಚ್ಚಿಸಿದ್ದನ್ನು ವಿರೋಧಿಸಿ ರೈತರು ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಪರಶುರಾಂಪುರ: ಬಿತ್ತನೆ ಶೇಂಗಾ ಬೀಜದ ಮಾರಾಟ ದರ ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿ ಪರಶುರಾಂಪುರ ಹೋಬಳಿ ವ್ಯಾಪ್ತಿಯ ಗ್ರಾಮಗಳ ರೈತರು ಮಂಗಳವಾರ ಇಲ್ಲಿನ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪಾವಗಡ-ಚಳ್ಳಕೆರೆ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ರೈತ ಸಂಪರ್ಕ ಕೇಂದ್ರದಲ್ಲಿ ಸರ್ಕಾರ ಸಣ್ಣ, ಅತಿ ಸಣ್ಣ ಹಾಗೂ ಐದು ಎಕರೆಯೊಳಗಿನ ರೈತರಿಗೆ ತಲಾ ಐದು ಪ್ಯಾಕೆಟ್ ಬಿತ್ತನೆ ಶೇಂಗಾ ಬೀಜ ವಿತರಣೆ ಮಾಡಲಾಗುತ್ತಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಈ ಹಿಂದೆ 30 ಕೆಜಿಯ ಪ್ಯಾಕೆಟ್ ಒಂದಕ್ಕೆ 1380 ರೂ., ಸಾಮಾನ್ಯ ವರ್ಗದವರಿಗೆ 1590 ರೂ.ಗಳನ್ನು ಪಡೆಯಲಾಗುತ್ತಿತ್ತು. ಆದರೆ ಮಂಗಳವಾರ ದಿಢೀರನೇ ಹೊಸ ದರ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 30 ಕೆಜಿ ಪ್ಯಾಕೆಟ್‌ಗೆ 1680 ರೂ. ಹಾಗೂ ಇತರೆಯವರಿಗೆ 1890 ರೂ.ಗಳನ್ನು ನಿಗದಿಪಡಿಸಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಆಕ್ರೋಶಗೊಂಡ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಜಡಿದರಲ್ಲದೆ ರಸ್ತೆ ತಡೆ ನಡೆಸಿದರು.

ದಿಢೀರನೆ 30 ಕೆಜಿ ಪ್ಯಾಕೆಟ್‌ಗೆ 300 ರೂ. ಗಳನ್ನು ಹೆಚ್ಚಿಸಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದ ರೈತರು ವಾಹನಗಳನ್ನು ತಡೆಗಟ್ಟಿ ರಸ್ತೆ ತಡೆ ಮಾಡಿದರು. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯುಂಟಾಯಿತು.

ಪ್ರತಿಭಟನಾ ಸ್ಥಳಕ್ಕೆ ಚಳ್ಳಕೆರೆ ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ ಹಾಗೂ ಸಹಾಯಕ ಕೃಷಿ ನಿರ್ದೇಶಕ ಮಾರುತಿ ಭೇಟಿ ನೀಡಿ ಪ್ರತಿಭಟನಾನಿರತರೊಂದಿಗೆ ಚರ್ಚಿಸಿದರು. ಸರ್ಕಾರದ ನಿರ್ದೇಶನದನ್ವಯ ಹೊಸ ದರದಂತೆ ಬಿತ್ತನೆ ಶೇಂಗಾ ಬೀಜವನ್ನು ವಿತರಿಸಲಾಗುತ್ತಿದೆ. ರೈತರ ಮನವಿಯ ಹಿನ್ನೆಲೆಯಲ್ಲಿ ಕೂಡಲೇ ದರ ಕಡಿತಗೊಳಿಸುವ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಇನ್ನೆರಡು ದಿನಗಳ ಕಾಲ ಬಿತ್ತನೆ ಶೇಂಗಾ ಬೀಜ ಮಾರಾಟವನ್ನು ಸ್ಥಗಿತಗೊಳಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯ ಸಮರ್ಥರಾಯ, ಮುಖಂಡರಾದ ಚನ್ನಕೇಶವ, ಕೃಷಿ ಅಧಿಕಾರಿ ಗಿರೀಶ, ಪಿಎಸ್‌ಐ ಶಿವಕುಮಾರ, ರೈತರಾದ ಜಂಪಣ್ಣ, ಭಾಷಾ, ಕರಿಯಣ್ಣ, ಈರಣ್ಣ, ರಘು ಡಿ.ಎಚ್., ಅನಿಲ್ಕುಮಾರ್‌, ನಾಗರಾಜ್‌, ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನೋರಾರು ರೈತರು ಇದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.