ತಾಲೂಕಿನ ಅಭಿವೃದ್ಧಿಯಲ್ಲಿ ರಾಜಕೀಯ ಬೇಡ


Team Udayavani, Aug 24, 2019, 5:43 PM IST

24-April-44

ಪಾವಗಡ ಪಟ್ಟಣದ ತಾಪಂ ಸಭಾಂಗಣದಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯ ಎ.ನಾರಾಯಣ ಸ್ವಾಮಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು

ಪಾವಗಡ: ತಾಲೂಕಿನ ಅಭಿವೃದ್ಧಿಗೆ ಯಾರೇ ಅಗಲಿ ರಾಜಕೀಯ ಹೋರತು ಪಡಿಸಿ ಸಾಗಬೇಕಿದೆ ರಾಜಕೀಯ ಮಿಶ್ರಣವಾದರೆ ನಾನು ಸುಮ್ಮನೆ ಕೂರುವ ವ್ಯಕ್ತಿಯಲ್ಲ ಎಂದು ಚಿತ್ರದುರ್ಗ ಲೋಕಸಭಾ ಸದಸ್ಯರಾದ ಎ.ನಾರಾಯಣಸ್ವಾಮಿ ಹೇಳಿದರು. ಶುಕ್ರವಾರ ತಾಪಂ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಸಮಗ್ರ ಅಭಿವೃದ್ಧಿಗೆ ಯಾವುದೇ ರಾಜಕೀಯ ಬೇಡ ನಮ್ಮದೇ ಸರ್ಕಾರವಿದೆ ಅನುದಾನ ತಂದು ಸರ್ವತೋಮುಖ ಅಭಿವೃದ್ಧಿ ಶ್ರಮಿಸೋಣ. ರಾಜಕೀಯ ಮಾಡಿದರೆ ನಾನಂತು ಸುಮ್ಮನೆ ಕೂರುವುದಿಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಪಂ ವೆಬ್‌ಸೈಟ್ ಮೊದಲು ಸಿದ್ಧಪಡಿಸಬೇಕು ಎಲ್ಲಾ ಕಾರ್ಯಕ್ರಮಗಳು ವೆಬ್‌ಸೈಟ್‌ನಲ್ಲಿ ಲಭ್ಯ ವಿರುವಂತೆ ನೋಡೊಕೊಳ್ಳಬೇಕು. ಪ್ರತಿ ಇಲಾಖೆ ವಾರು ಕಾರ್ಯಕ್ರಮಗಳು ,ಸಮಸ್ಯೆಗಳ ಸ್ಪಷ್ಟ ಚಿತ್ರಣವನ್ನು ತಾಪಂ ವೆಬ್‌ಸೈಟ್‌ನಲ್ಲಿ ಸಿಗುವಂತೆ ಮಾಡಬೇಕು ಎಂದು ಇಒ ನರಸಿಂಹಮೂರ್ತಿಗೆ ಸೂಚಿಸಿದರು. ಈ ತಿಂಗಳು 26 ರೊಳಗೆ ತಾಲೂಕಿನ ಶಿಥಿಲ ಶಾಲಾ ಕಟ್ಟಡಗಳ ಪೋಟೊ ಸಹಿತ ಮಾಹಿತಿ ನೀಡುವಂತೆ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿ, ಯಾವುದೇ ವಿದ್ಯಾರ್ಥಿ ಭಯದ ವಾತವರಣ ದಲ್ಲಿ ಪಾಠ ಕೇಳು ವಂತಾಗುವುದು ಬೇಡ. ಸೂಕ್ತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.

ಹೋಬಳಿಗೊಂದು ಉತ್ತಮ ಶಾಲೆಗಳನ್ನು ಗುರುತಿಸಿ ಕಾರ್ಪೊರೇಟ್ ವಲಯದಿಂದ ಆ ಶಾಲೆ ಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ಚಿತಿಂಸ ಲಾಗಿದ್ದು, ಅಂತಹ ಶಾಲೆಗಳ ಪಟ್ಟಿ ನೀಡಬೇಕು, ತಾಂತ್ರಿಕ ಸಮಸ್ಯೆಯಿಂದ ಎಷ್ಟು ನೀರಿನ ಘಟಕಗಳು ಕೆಟ್ಟು ನಿಂತಿವೆ, ಕ್ರಮಕೈಗೊಂಡಿರುವ ಬಗ್ಗೆ, ಘಟಕಗಳ ಚಾಲನೆಗೆ ನಿರ್ಲಕ್ಷತೆಯ ಬಗ್ಗೆ ಸಂಸದರು ತರಾಟೆಗೆ ತೆಗೆದುಕೊಂಡರು. ಪ್ರತಿ ಶಾಲೆಯಲ್ಲಿ ಶುದ್ಧಕುಡಿವ ನೀರಿನ ಘಟಕ ನಿರ್ಮಾಣ ಮಾಡಬೇಕು. ಫ್ಲೋರೈಡ್‌ ನೀರು ಸರಬರಾಜಾಗ ದಂತೆ ಗ್ರಾಮೀಣ ಕುಡಿವ ನೀರು ಉಪವಿಭಾಗಾಧಿ ಕಾರಿ ಬಿ.ಪಿ.ನಾಗರಾಜು ಗೆ ಹೇಳಿದರು.

ತಾಲೂಕಿನ ಪ್ರತಿ ಗ್ರಾಪಂನಲ್ಲಿ ಅರ್ಹ ಪಲಾನು ಭವಿಗಳಿಗೆ ಮನೆ ಹಂಚಿಕೆಯಲ್ಲಿ 20 ರಿಂದ 30 ಸಾವಿರ ಹಣ ಪಡೆಯಲಾಗುತ್ತಿದೆ ಇದರ ಪೂರ್ಣ ಮಾಹಿತಿ ಲಭ್ಯವಿದ್ದು ಯಾವುದೇ ಮುನ್ನಸೂಚನೆ ಇಲ್ಲದೆ ಕ್ರಮ ಕೈಗೊಳ್ಳಲಾಗುವುದು. ಮನೆಗಳ ಪಟ್ಟಿ ನೀಡಿ ಎಂದು ಗ್ರಾಪಂ ಪಿಡಿಒಗಳಿಗೆ ಸೂಚಿಸಿದರು. ತಹಶೀಲ್ದಾರ್‌ ವರದರಾಜು ಅವರಿಗೆ ಅಧಾರ್‌ ಸಮಸ್ಯೆ ಮತ್ತು ಮಾಸಾಶನ ಬಗ್ಗೆ ಮಾಹಿತಿ ಪಡೆದು ಮುಂದೆ ಇಂಥ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.

ಪಟ್ಟಣದ ತಾಪಂ ನೂತನ ಸಭಾಂಗಣ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಮುಂದಾ ಗಿರುವ ಬಗ್ಗೆ ತಾಪಂ ಅಧ್ಯಕ್ಷರಾದ ಸೋಗಡು ವೆಂಕಟೇಶ್‌ ತಿಳಿಸಿದಾಗ ,ಸಂಸದರ ಕೋಟಾದಿಂದ ಹೆಚ್ಚುವರಿ ಅನುದಾನ ನೀಡಿ ಬೃಹತ್‌ ಸಭಾಂಗಣ ನಿರ್ಮಿಸೋಣ ಎಂದು ಸಂಸದರು ತಿಳಿಸಿದರು. ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಪಿಡಿಒ ಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.