ಕಾಡಾನೆ ಹಾವಳಿ: ಗ್ರಾಮಸ್ಥರ ಆತಂಕ

ಕಾಡಾನೆ ಸ್ಥಳಾಂತರಿಸಿ ಗ್ರಾಮಸ್ಥರಿಗೆ ರಕ್ಷಣೆ ನೀಡಿ: ಶಾಸಕರ ಆಗ್ರಹ

Team Udayavani, Jul 21, 2019, 3:07 PM IST

21-July-36

ಮೂಡಿಗೆರೆ: ತಾಲೂಕಿನ ಗುತ್ತಿಹಳ್ಳಿ ಮತ್ತು ಮೂಲರಹಳ್ಳಿ ಭಾಗದಲ್ಲಿ ಕಾಡಾನೆಗಳು ನಾಯಿ ಗೂಡು ಮತ್ತು ನೀರಿನ ಬ್ಯಾರಲ್ ಹಾನಿಗೊಳಿಸಿರುವುದು.

ಮೂಡಿಗೆರೆ: ತಾಲೂಕಿನ ಗುತ್ತಿಹಳ್ಳಿ ಮತ್ತು ಮೂಲರಹಳ್ಳಿ ಭಾಗಗಳಲ್ಲಿ ಕೆಲ ದಿನಗಳಿಂದ ನಾಲ್ಕು ಕಾಡಾನೆಗಳು ಬೀಡು ಬಿಟ್ಟಿದ್ದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಗ್ರಾಮದ ಮನೆಗಳ ಮೇಲೆ ದಾಳಿ ನಡೆಸಲು ಮುಂದಾಗಿರುವುದರಿಂದ ಸ್ಥಳೀಯರು ಕಂಗಾಲಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಡಾನೆಗಳನ್ನು ಕೂಡಲೇ ಇಲ್ಲಿಂದ ಸ್ಥಳಾಂತರಿಸಿ ಗ್ರಾಮಸ್ಥರಿಗೆ ರಕ್ಷಣೆ ನೀಡಬೇಕೆಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಶಾಸಕರು, ಕಳೆದ ಕೆಲವು ವರ್ಷಗಳಿಂದ ಅತಿವೃಷ್ಟಿ ಪೀಡಿತವಾದ ಈ ಭಾಗಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ. ಹಾಗಾಗಿ, ಸರಿಯಾದ ಬೆಳೆ ಪಡೆಯಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಅಲ್ಲದೇ, ಇಲ್ಲಿ ಸಂಜೆ 6ಗಂಟೆ ನಂತರ ಮನೆಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಕಳೆದ ವರ್ಷ ಕೃಷಿ ಕಾರ್ಯದಲ್ಲಿ ತೊಡಗಿದ್ದ ಇದೇ ಗ್ರಾಮದ ಯುವಕ ಸುನೀಲ್ನನ್ನು ಆನೆ ಹತ್ಯೆ ಮಾಡಿದ ಘಟನೆ ನಡೆದಿದೆ. ಹೀಗಾಗಿ, ಗ್ರಾಮಸ್ಥರು ಈ ಹಿಂದೆ ಅರಣ್ಯ ಇಲಾಖೆ ಮುಂದೆ ಆನೆ ಸ್ಥಳಾಂತರಿಸಲು ಆಗ್ರಹಿಸಿ ಧರಣಿ ನಡೆಸಿದ್ದರು ಎಂದು ತಿಳಿಸಿದರು.

ಆನೆ ಸ್ಥಳಾಂತರಿಸಬೇಕಾದ ಅರಣ್ಯ ಇಲಾಖೆಯವರು, ಧರಣಿ ನಡೆಸಲು ಬಂದಿದ್ದ ರೈತರ ಮೇಲೆ ಕೇಸು ದಾಖಲಿಸಿದ್ದರು. ನಂತರ ಕೇಸು ಹಿಂಪಡೆಯುವುದಾಗಿ ಸುಳ್ಳು ಹೇಳಿ ಕಾಲಹರಣ ಮಾಡುತ್ತಿದ್ದಾರೆ. ಈ ಮೂಲಕ ರೈತರು ಪ್ರತಿಭಟನೆ ನಡೆಸದಂತೆ ಒತ್ತಡ ಹೇರಿದ್ದಲ್ಲದೇ ಗ್ರಾಮಸ್ಥರಿಗೆ ಕಾಡು ಪ್ರಾಣಿಗಳಿಂದ ರಕ್ಷಣೆ ನೀಡುವಲ್ಲಿ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದರು.

ಕಳೆದ ಮೂರ್‍ನಾಲ್ಕು ದಿನಗಳಿಂದ ಕಾಡಾನೆಗಳು ಗ್ರಾಮಕ್ಕೆ ಬಂದು ಮನೆಗಳಿಗೆ ಲಗ್ಗೆಯಿಟ್ಟು ಊರಿಗೆ ದಿಗ್ಬಂಧನ ಹಾಕಿವೆ. ಆದ್ದರಿಂದ, ಕೂಡಲೇ ಆನೆಗಳಿಂದ ಗ್ರಾಮಸ್ಥರಿಗೆ ಮುಕ್ತಿ ನೀಡಬೇಕೆಂದು ಆಗ್ರಹಿಸಿದರು.

ಮನೆ ಧ್ವಂಸ ಮಾಡಿದ ಕಾಡಾನೆಗಳು: ಗುತ್ತಿಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ಗುರುವಾರ ಮತ್ತು ಶುಕ್ರವಾರ ರಾಮೇಗೌಡ, ಚಂದ್ರೇಗೌಡ ಮತ್ತು ಮಂಜುನಾಥ ಗೌಡರ ಮನೆಗಳಿಗೆ ನುಗ್ಗಿ, ಛಾವಣಿಗೆ ಹಾನಿ ಮಾಡಿವೆ. ಸುತ್ತಲಿನ ನಾಯಿ ಗೂಡು, ನೀರಿನ ತೊಟ್ಟಿ ಮತ್ತಿತರ ಗೃಹೋಪಯೋಗಿ ವಸ್ತುಗಳನ್ನು ನಾಶಪಡಿಸಿವೆ. ರಾತ್ರಿ ಸಮಯದಲ್ಲಿ ದೀಪ ಬೆಳಗಿಸಿದ ಕೂಡಲೇ ದಾಳಿ ಇಡುತ್ತಿದ್ದು, ಕಳೆದ ರಾತ್ರಿ ಚಂದ್ರೇಗೌಡರ ಆರ್‌ಸಿಸಿ ಮನೆಯನ್ನು ಧ್ವಂಸಗೊಳಿಸಲು ಪ್ರಯತ್ನಿಸಿವೆ. ಹಾಗಾಗಿ, ಜೀವ ಭಯದಿಂದ ಊರನ್ನೇ ತೊರೆಯಬೇಕಾದ ಪರಿಸ್ಥಿತಿ ಬಂದಿದೆ. ಕಾಫಿ, ಅಡಕೆ, ಕಾಳುಮೆಣಸು, ಭತ್ತದ ಗದ್ದೆಗಳನ್ನು ಈಗಾಗಲೇ ಸಂಪೂರ್ಣ ನಾಶಪಡಿಸಿವೆ. ಮಳೆ ಮತ್ತು ಕಾಡುಪ್ರಾಣಿಗಳಿಂದ ನಮ್ಮ ಬದುಕು ಮೂರಾಬಟ್ಟೆಯಾಗಿದೆ. ಆದ್ದರಿಂದ, ಕಾಡಾನೆಗಳನ್ನು ಸ್ಥಳಾಂತರಿಸಿ, ಸರ್ಕಾರ ಸೂಕ್ತ ನಷ್ಟ ಪರಿಹಾರ ನೀಡಬೇಕು. ಆನೆಗಳಿಂದ ಕೂಡಲೇ ಮುಕ್ತಿ ನೀಡಬೇಕೆಂದು ಗ್ರಾಮಸ್ಥರಾದ ಗಿರೀಶ್‌ ಹಳ್ಳಿಬೈಲು, ವಿನಯ್‌, ಶಿವಕುಮಾರ್‌, ಸದಾಶಿವ, ವಿಜಯ್‌ ಮತ್ತಿತರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.