ಕೃಷಿ ವಿವಿಯಲ್ಲಿ ನಾಳೆಯಿಂದ ಕೃಷಿ ಮೇಳ 

ಆರು ಜನರಿಗೆ ಶೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ ಮೂರು ದಿನ ವಿಚಾರಗೋಷ್ಠಿ, ವಸ್ತು ಪ್ರದರ್ಶನ

Team Udayavani, Dec 13, 2019, 10:56 AM IST

13-December-3′

ರಾಯಚೂರು: ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಡಿ.14ರಿಂದ 16ರವರೆಗೆ ನೆಲ-ಜಲ ಉಳಿಸಿ ಆದಾಯ ಹೆಚ್ಚಿಸಿ ಎಂಬ ಶೀರ್ಷಿಕೆಯಡಿ ಕೃಷಿಮೇಳ-2019 ಆಯೋಜಿಸಲಾಗಿದೆ ಎಂದು ವಿವಿ ಕುಲಪತಿ ಡಾ|
ಕೆ.ಎನ್‌.ಕಟ್ಟಿಮನಿ ತಿಳಿಸಿದರು.

ನಗರದ ಕೃಷಿ ವಿವಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಬರದ ಹಿನ್ನೆಲೆಯಲ್ಲಿ ಮೇಳ ಕೈಬಿಡಲಾಗಿತ್ತು. ಹೊಸ ತಂತ್ರಜ್ಞಾನಗಳು, ಸಂಶೋಧನೆ, ಲಾಭದಾಯಕ ಕೃಷಿಗೆ ಸಂಬಂಧಿ ಸಿದ ವಿಚಾರಗಳನ್ನು ರೈತರೊಂದಿಗೆ ಹಂಚಿಕೊಳ್ಳಲು, ಅವರಿಗೆ ಮಾಹಿತಿ ನೀಡುವ ಉದ್ದೇಶದಿಂದ ಮೇಳ ಹಮ್ಮಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ಕೃಷಿ ಮೇಳ ನಡೆಸಲಾಗುತ್ತಿದೆ ಎಂದು ಹೇಳಿದರು.

14ರಂದು ಬೆಳಗ್ಗೆ ಕೃಷಿ ವಿವಿ ಆವರಣದಲ್ಲಿ ನಾಲವಾರದ ಕೋರಿಸಿದ್ಧೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಡಾ| ಸಿದ್ಧತೋಟೇಂದ್ರ ಶಿವಾಚಾರ್ಯ ಸ್ವಾಮೀಜಿ ಗೋ ಪೂಜೆ ನೆರವೇರಿಸುವ ಮೂಲಕ ಕೃಷಿ ಮೇಳಕ್ಕೆ ಚಾಲನೆ ನೀಡುವರು. 15ರಂದು ಬೆಳಗ್ಗೆ 11:30ಕ್ಕೆ ಕೃಷಿಮೇಳವನ್ನು ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟಿಸುವರು.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು, ಪಶು ಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ ಆಗಮಿಸುವರು. ನಗರ ಶಾಸಕ ಡಾ| ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.

ಈ ಬಾರಿ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಿಂದ ಒಬ್ಬೊಬ್ಬ ರೈತರನ್ನು ಆಯ್ಕೆ ಮಾಡಿದ್ದು, ಆರು ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೃಷಿ ಮೇಳದ ನಿಮಿತ್ತ ಕೃಷಿ ವಿಜ್ಞಾನಗಳ ವಿವಿ ಆವರಣದಲ್ಲಿ 300 ಮಳಿಗೆಗಳನ್ನು ಸ್ಥಾಪಿಸಿದ್ದು, ಅದರಲ್ಲಿ 60
ಹೈಟೆಕ್‌ ಮಳಿಗೆಗಳಿವೆ. ಈಗಾಗಲೇ 90 ಮಳಿಗೆ ಬುಕ್‌ ಆಗಿದ್ದು, ಇನ್ನೆರಡು ದಿನಗಳಲ್ಲಿ ಹೆಚ್ಚು ಬರುವ ಸಾಧ್ಯತೆ ಇದೆ ಎಂದರು.

ಮೂರು ದಿನಗಳ ಕಾಲ ನಡೆಯುವ ಕೃಷಿಮೇಳದಲ್ಲಿ ರೈತರಿಂದ ರೈತರಿಗೆ ಕಾರ್ಯಕ್ರಮದಲ್ಲಿ ಸಂವಾದ, ಕೃಷಿ ಸವಾಲುಗಳು ಕುರಿತು ವಿಚಾರ ಸಂಕಿರಣಗಳು ನಡೆಯಲಿವೆ. 30 ಜನ ವಿಜ್ಞಾನಿಗಳ ತಂಡ ರೈತರಿಗೆ ಸಮಗ್ರ ಕೃಷಿ ಪದ್ಧತಿ ಅಳವಡಿಕೆ ಕುರಿತು ಪ್ರಾತ್ಯಕ್ಷಿತೆ ಮೂಲಕ ಮಾಹಿತಿ ನೀಡಲಿದೆ ಎಂದು ತಿಳಿಸಿದರು.

ಹನಿ ನೀರಾವರಿ, ಮಣ್ಣು ಪ್ರಾತ್ಯಕ್ಷಿತೆ, ಸಮಗ್ರ ನೀರಾವರಿ, ಅರಣ್ಯ ಕೃಷಿ, ಹತ್ತಿ ಪ್ರಯೋಗ, ಡ್ರೋನ್‌ ತಂತ್ರಜ್ಞಾನ ಬಳಕೆ, ಫಲಪುಷ್ಪ ಪ್ರದರ್ಶನ, ಆಹಾರ ಸಂಸ್ಕರಣೆ, ಕುರಿ, ಕೋಳಿ, ಮೊಲ ಸಾಕಣೆ ಕುರಿತು ಮಾಹಿತಿ ನೀಡಲಾಗುತ್ತಿದೆ. ಮೇಳಕ್ಕೆ ಆಗಮಿಸುವ ರೈತರಿಗೆ ರಿಯಾಯಿತಿ ದರದಲ್ಲಿ ಊಟ ಹಾಗೂ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ರೈತರ ಪರಿಸ್ಥಿತಿ ಮತ್ತು ವಾತಾವರಣ ವೈಪರೀತ್ಯಕ್ಕೆ ಅನುಗುಣವಾಗಿ ಪ್ರದೇಶ ಬೆಳಗಳ ಮೇಲೆ ಸಂಶೋಧನೆ ಕೈಗೊಳ್ಳಲಾಗುತ್ತಿದೆ. ವಿಶ್ವ ಬ್ಯಾಂಕ್‌ ನೆರವಿನಿಂದ ಜಲಾನಯನ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಮಳೆಯಾಶ್ರಿತ ಆಯ್ದ ಕಿರು ಜಲಾನಯನ, ನೆರಳು ಮನೆ ಪರದೆಯಲ್ಲಿ ಕರಬೂಜ ಹಾಗೂ ಸುಗಂಧರಾಜ ಬೆಳೆ ನಿರ್ವಹಣೆ ಕುರಿತು ಸಂಶೊಧನೆ ಪ್ರಗತಿಯಲ್ಲಿದೆ. ರಾಯಚೂರು ಕೃಷಿ ವಿವಿಯಲ್ಲಿ ಬೋಧನೆ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ ಎಂದರು.

ವಿವಿಯಲ್ಲಿ ಸುಧಾರಿತ ಸಿಬ್ಬಂದಿ ತರಬೇತಿ ಕೇಂದ್ರ ಸ್ಥಾಪಿಸುವುದು. ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೀದರ ಜಿಲ್ಲೆಯ ಔರಾದ್‌, ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಕೃಷಿ ಅರಣ್ಯ ಮಹಾವಿದ್ಯಾಲಯ ಸ್ಥಾಪನೆ, ಕೃಷಿ ಪಂಡಿತರು ಮತ್ತು ಪ್ರಗತಿಪರ ರೈತರು ಒಳಗೊಂಡ ರೈತ ಪೀಠ ಸ್ಥಾಪನೆಗೆ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಸಮಾರೋಪ ಸಮಾರಂಭದ ಬಳಿಕ ಸಂಜೆ ಹಾಸ್ಯ ಭಾಷಣಕಾರ ಗಂಗಾವತಿ ಬಿ. ಪ್ರಾಣೇಶ ಅವರಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೃಷಿ ವಿವಿ ಕುಲಸಚಿವ ಡಾ| ಎಂ.ಜಿ.ಪಾಟೀಲ, ಶಿಕ್ಷಣ ನಿರ್ದೆಶಕ ಡಾ| ಎಸ್‌.ಕೆ.ಮೇಟಿ, ಸಂಶೋಧನಾ ನಿರ್ದೇಶಕ ಡಾ| ಬಿ.ಕೆ.ದೇಸಾಯಿ, ನಿರ್ದೇಶಕ ಡಾ| ಬಿ.ಎಂ.ಚಿತ್ತಾಪುರ ಇತರರು ಇದ್ದರು.

ಅಕ್ಕಿಯಲ್ಲಿ ವಿಷಕಾರಕ ಅಂಶ
ಈ ಭಾಗದ ಭತ್ತದ ಅಕ್ಕಿಯನ್ನು ಪರೀಕ್ಷೆಗೊಳಪಡಿಸಿದ್ದು, ಅಲ್ಪಮಟ್ಟಿನ ವಿಷಕಾರಕ ಅಂಶ ಪತ್ತೆಯಾಗಿದೆ. ಆದರೆ, ಅದರ ಪ್ರಮಾಣ ಎಷ್ಟಿದೆ ಎಂದರೆ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ. ಇದೇ ಕಾರಣಕ್ಕೆ ವರ್ತಕರು ಕೂಡ ತಮ್ಮ ಅಕ್ಕಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮುನ್ನ ಪರೀಕ್ಷಿಸಿಕೊಳ್ಳುತ್ತಿದ್ದಾರೆ. ವಿದೇಶಗಳಿಗೆ ಕಳುಹಿಸುವ ಅಕ್ಕಿಯನ್ನು ಪರೀಕ್ಷಿಸಿಯೇ ಕಳಿಸಲಾಗುತ್ತಿದೆ ಎಂದು ಕೃಷಿ ವಿವಿ ಸಂಶೋಧನಾ ವಿಭಾಗದ ಸಿಬ್ಬಂದಿ ತಿಳಿಸಿದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.