ಕೃಷಿ ಮೇಳದಲ್ಲಿ ರಜಾ ಮಜಾ ಮಾಡಿದ ಜನ

ಬಟ್ಟೆ-ತಿನಿಸು-ಗೃಹೋಪಯೋಗಿ ವಸ್ತುಗಳ ವ್ಯಾಪಾರ ಜೋರುಕೃಷಿ ಆಧಾರಿತ ವಹಿವಾಟು ಮಂಕು

Team Udayavani, Dec 16, 2019, 3:24 PM IST

16-December-16

ರಾಯಚೂರು: ರಾಯಚೂರು ಕೃಷಿ ವಿವಿ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಎರಡನೇ ದಿನ ರವಿವಾದ ಕಾರಣ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ನಗರ ಸೇರಿದಂತೆ ಸುತ್ತಲಿನ ಜನ ಹೆಚ್ಚಾಗಿ ಬಂದ ಕಾರಣ ವ್ಯಾಪಾರ ವಹಿವಾಟು ತುಸು ಜೋರಾಗಿಯೇ ನಡೆಯಿತು.

ಬಹುತೇಕರು ಕುಟುಂಬ ಸಮೇತರಾಗಿ ರಜೆ ಮಜಾ ಕಳೆಯಲು ಬಂದಂತೆ ಭಾಸವಾಯಿತು. ಮಳಿಗೆಗಳಲ್ಲಿ ಅಳವಡಿಸಿರುವ ಬಟ್ಟೆ, ತಿಂಡಿ, ಗೃಹೋಪಯೋಗಿ ವಸ್ತುಗಳ ಕಡೆಯೇ ಎಲ್ಲರ ಚಿತ್ತ ಹರಿದಿತ್ತು. ಇದರಿಂದ ಕೃಷಿ ಆಧಾರಿತ ಮಳಿಗೆಗಳು ತುಸು ಮಂಕಾದಂತೆ ಕಂಡು ಬಂದವು.

ಬೆಳಗ್ಗೆ 11 ಗಂಟೆಗೆ ಶುರುವಾಗಬೇಕಿದ್ದ ಉದ್ಘಾಟನೆ ಕಾರ್ಯಕ್ರಮ 12 ಗಂಟೆಗೆ ಶುರುವಾಗಿತ್ತು. ಆದರೂ ಜನ ಕಾರ್ಯಕ್ರಮದಲ್ಲಿ ಕುಳಿತು ಆಲಿಸಿದರು. ಬಳಿಕ ಮಧ್ಯಾಹ್ನ ನಡೆದ ರೈತರೊಂದಿಗೆ ರೈತರು ಸಂವಾದ ಕಾರ್ಯಕ್ರಮಕ್ಕೆ ಜನಾಭಾವ ಕಂಡು ಬಂತು. ಜನರೆಲ್ಲ ಸುತ್ತಲಿನ ಮಳಿಗೆಗಳಲ್ಲಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದು ಕಂಡು ಬಂತು.

ಸಾವಯವ ಮರೆ: ಕೃಷಿ ಮೇಳದಲ್ಲಿ ಖಾಸಗಿ ಕಂಪನಿಗಳ ಆರ್ಭಟ ತುಸು ಹೆಚ್ಚಾಗಿ ಕಂಡು ಬರುತ್ತಿದೆ. ಸಾವಯವ ಕೃಷಿಗೆ ಉತ್ತೇಜನ ನೀಡಬೇಕು ಎಂಬ ಕಲ್ಪನೆ ಇದ್ದರೂ ವ್ಯಾಪಾರಿಗಳು ಯಾಕೋ ಈ ಬಾರಿ ಮುಖ ಮಾಡಿಲ್ಲ. ಕಳೆದ ಬಾರಿ ಸಾವಯವ ಮಳಿಗೆ ಹಾಕಿದ ವರ್ತಕರಿಗೆ ನಷ್ಟವಾಗಿತ್ತು. ಹೀಗಾಗಿ ದುಬಾರಿ ಹಣ ತೆತ್ತು ಮಳಿಗೆ ಹಾಕಿದರೆ ಲಾಭವಿಲ್ಲ ಎಂಬ ಕಾರಣಕ್ಕೆ ದೂರ ಉಳಿದಂತೆ ಕಂಡು ಬಂತು.  ಆದರೆ, ಕ್ರಿಮಿನಾಶಕ, ರಾಸಾಯನಿಕ ಗೊಬ್ಬರಗಳ ಪ್ರದರ್ಶನಕ್ಕೆ ಖಾಸಗಿ ಕಂಪನಿಗಳು ಪೈಪೋಟಿಯಲ್ಲಿ ಮಳಿಗೆ ಹಾಕಿದ್ದು ತರಹೇವಾರಿ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಜಲಾನಯನ ಮಾದರಿ: ಇನ್ನು ಕೃಷಿ ಇಲಾಖೆಯಿಂದ ರೂಪಿಸಿದ ಜಲಾನಯನ ಪರಿಕಲ್ಪನೆಯ ಮಾದರಿ ಸಾರ್ವಜನಿಕರನ್ನು ಬರ ಸೆಳೆಯುತ್ತಿದೆ. ನೀರಿನ ಇಂಗುವಿಕೆ, ಸಮಗ್ರ ಕೃಷಿ ಪದ್ಧತಿ ಹಾಗೂ ಜಲಮರುಪೂರಣ ವಿವರಿಸುವ ಪ್ರಾತ್ಯಕ್ಷಿಕೆ ರಚಿಸಿದ್ದು, ಆಕರ್ಷಣೀಯವಾಗಿದೆ. ಸುಮಾರು 20×20 ಅಳತೆಯ ದೊಡ್ಡ ಸ್ಥಳದಲ್ಲಿ ಬೃಹತ್‌ ಮಾದರಿಯನ್ನು ರಚಿಸಲಾಗಿದೆ. ಬೆಟ್ಟದ ಮೇಲಿಂದ ಹರಿಯುವ ನೀರನ್ನು ಹೇಗೆಲ್ಲ ಸಂರಕ್ಷಿಸಹುದು. ಅದರಿಂದ ಹೇಗೆ ಕೃಷಿ ಮಾಡಬೇಕು ಎನ್ನುವ ಮಾಹಿತಿ ನೀಡುವ ಪ್ರಾತ್ಯಕ್ಷಿಕೆ ಇದಾಗಿದೆ.

ಚೋಟಾ ಚಾರಮಿನಾರ್‌: ಇನ್ನು ಮೇಳದಲ್ಲಿ ಚೋಟಾ ಚಾರಮಿನಾರ್‌ ಗಮನ ಸೆಳೆಯುತ್ತಿದೆ. ಖಾಸಗಿ ಕಂಪನಿಯವರು ತಮ್ಮ ಕಂಪನಿಯ ಕ್ರಿಮಿನಾಶಕದ ಪ್ರಚಾರಾರ್ಥ ಇದನ್ನು ನಿರ್ಮಿಸಿದ್ದಾರೆ. ಕಟ್ಟಿಗೆಯಿಂದ ನಿರ್ಮಿಸಿರುವ ಈ ಕಲಾಕೃತಿ ನೋಡಲು ಆಕರ್ಷಕವಾಗಿದ್ದು, ಎಲ್ಲರನ್ನು ಬರೆ ಸೆಳೆಯುತ್ತಿದೆ. ಹೈದರಾಬಾದ್‌ನ ಚಾರ್‌ ಮಿನಾರ್‌ ನೋಡದವರು ಇದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಅಲ್ಲದೇ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.

ಕೃಷಿ ಮೇಳ ರವಿವಾರದ ರಜೆಯ ಮಜಾವನ್ನಂತೂ ಮೂಡಿಸಿದ್ದು ಸುಳ್ಳಲ್ಲ. ಸೋಮವಾರ ಸಮಾರೋಪ ಜರುಗಲಿದ್ದು, ಕೊನೆ ದಿನ ನಾನಾ ಕಾರ್ಯಗಳ ನಿಮಿತ್ತ ನಗರಕ್ಕೆ ಸಾಕಷ್ಟು ಜನ ಬರುವುದರಿಂದ ಅಂದು ಕೂಡ ಜನ ಸೇರುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.