ಉಳ್ಳವರ ಜೇಬಲ್ಲಿ ಬಡವರ ಪಡಿತರ ಚೀಟಿ!

ನಕಲಿ ಪಡಿತರ ಚೀಟಿ ಪತ್ತೆಯದ್ದೇ ಸವಾಲು „ 6 ಸಾವಿರ ನಕಲಿ ಪಡಿತರ ಚೀಟಿ ರದ್ದು „ ಗಡುವು ನೀಡಿದರೂ ಸ್ವ-ಇಚ್ಛೆಯಿಂದ ಸಲ್ಲಿಸದ ಗ್ರಾಹಕರು

Team Udayavani, Oct 14, 2019, 11:54 AM IST

Udayavani Kannada Newspaper

ರಾಯಚೂರು: ಪಡಿತರ ಚೀಟಿ ದುರ್ಬಳಕೆ ತಡೆಗೆ ಮುಂದಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಾಕಷ್ಟು ಸವಾಲುಗಳು ಎದುರಾಗಿದ್ದು, ಗ್ರಾಹಕರಿಂದ ಅಸಹಕಾರ ಹೆಚ್ಚಾಗಿದೆ.

ಈವರೆಗೆ ಜಿಲ್ಲೆಯಲ್ಲಿ 6 ಸಾವಿರ ಪಡಿತರ ಚೀಟಿಗಳನ್ನು ರದ್ದು ಮಾಡಿದ್ದು, ಸಾಕಷ್ಟು ಜನ ಸ್ವ ಇಚ್ಛೆಯಿಂದ ಸಲ್ಲಿಸುತ್ತಿಲ್ಲ. ಉಳ್ಳವರು, ಶ್ರೀಮಂತರು ಕೂಡ ಬಿಪಿಎಲ್‌ ಕಾರ್ಡ್‌ಗಳನ್ನು ಪಡೆಯುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥ ಅಕ್ರಮ ತಡೆಯಲು ಮುಂದಾದ ಉಳ್ಳವರಿಗೆ ತಾವಾಗಿಯೇ ಬಂದು ಪಡಿತರ ಚೀಟಿ ಸಲ್ಲಿಸುವಂತೆ ತಿಳಿಸಿತ್ತು. ಆದರೆ, ಇಲಾಖೆ ಸೂಚನೆಗೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ.

ಕಾರ್ಡ್‌ಗಳನ್ನು ಸಲ್ಲಿಸುತ್ತಿಲ್ಲ. ಕೊನೆಗೆ ಇಲಾಖೆ ಅಧಿಕಾರಿಗಳೇ ಶೋಧ ಕಾರ್ಯಕ್ಕೆ ಮುಂದಾಗಿದ್ದು, ಕಂದಾಯ, ಆರ್‌ಟಿಒ ಇಲಾಖೆಗಳ ಸಹಾಯದೊಂದಿಗೆ ಈವರೆಗೆ 6 ಸಾವಿರ ಅಕ್ರಮ ಪಡಿತರ ಚೀಟಿಗಳನ್ನು ರದ್ದುಗೊಳಿಸಿದ್ದಾರೆ.

ಆದಾಯ ತೆರಿಗೆ ಪಾವತಿಸುವವರು, ಐಷಾರಾಮಿ ವಾಹನ ಹೊಂದಿದವರು, ಹೆಚ್ಚು ಜಮೀನು ಹೊಂದಿದವರು, ಸರ್ಕಾರಿ ಹುದ್ದೆಯಲ್ಲಿರುವವರು ಬಿಪಿಎಲ್‌ ಕಾರ್ಡ್‌ ಪಡೆಯಲು ಅನರ್ಹರು. ಹಾಗೆ ಪಡೆದಲ್ಲಿ ಕೂಡಲೇ ಸಲ್ಲಿಸುವಂತೆ ಗಡುವು ನೀಡಲಾಗಿತ್ತು. ಅಂಥ ಸಾಕಷ್ಟು ಪ್ರಕರಣಗಳಿದ್ದರೂ ಯಾರು ಕೂಡ ಸ್ವ ಇಚ್ಛೆಯಿಂದ ಬಂದು ಪಡಿತರ ಚೀಟಿ ಸಲ್ಲಿಸಿಲ್ಲ.

ಅಂಕಿ-ಸಂಖ್ಯೆ ಗೊಂದಲ: ಜಿಲ್ಲೆಯಲ್ಲಿ 4,01,217 ಬಿಪಿಎಲ್‌ ಕಾರ್ಡ್ದಾರರು, 44,982 ಅಂತ್ಯೋದಯ ಕಾರ್ಡ್‌ದಾರರಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದರೆ, ರಾಜ್ಯ ಸರ್ಕಾರ ಇನ್ನೆರಡು ಕೆಜಿ ಸೇರಿಸಿ ಒಟ್ಟು ಏಳು ಕೆಜಿ ಅಕ್ಕಿ ವಿತರಣೆ ಮಾಡುತ್ತಿದೆ.

ಆದರೆ, ಈ ಅಂಕಿ ಅಂಶಗಳು 2011ರ ಜನಗಣತಿ ಪ್ರಕಾರವಾಗಿದ್ದು, ಈಗ ಸಾಕಷ್ಟು ಹೊಸ ಕಾರ್ಡ್‌ದಾರರು ಹುಟ್ಟಿಕೊಂಡಿದ್ದಾರೆ. ಇನ್ನು
ಮನೆ ಮಾಲೀಕರಿಗೆ ಮಾತ್ರ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಆದರೆ, ಗ್ರಾಮೀಣ ಭಾಗದಲ್ಲಿ ಇಂದಿಗೂ ಸಾಕಷ್ಟು ಜನ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದು, ಅದಕ್ಕೆ ಸೂಕ್ತ ದಾಖಲೆಗಳೇ ಇಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ದಾಖಲೆಗಳೇ ಸಿಗುತ್ತಿಲ್ಲ ಎನ್ನುವುದು ಅಧಿಕಾರಿಗಳ ವಿವರಣೆ.

ಆಧಾರ್‌ ಲಿಂಕ್‌ ಕಡ್ಡಾಯ: ಈ ಸಮಸ್ಯೆ ಅರಿತ ಇಲಾಖೆ ಈಗ ಕಡ್ಡಾಯವಾಗಿ ಕುಟುಂಬ ಸದಸ್ಯರೆಲ್ಲರ ಆಧಾರ್‌ ಕಾರ್ಡ್‌ ಪಡೆಯುತ್ತಿದ್ದು, ಪಡಿತರ ಚೀಟಿಗೆ ಲಿಂಕ್‌ ಮಾಡುತ್ತಿದೆ. ಇದರಿಂದ ಯಾರ ಹೆಸರಿನಲ್ಲಿ ಏನೇನು ದಾಖಲೆಗಳಿವೆ ಎಂಬುದು ಗೊತ್ತಾಗಲಿದೆ. ಅಲ್ಲದೇ, ಬ್ಯಾಂಕ್‌ ಖಾತೆಗಳಿಗೂ ಆಧಾರ್‌ ಲಿಂಕ್‌ ಇರುವ ಕಾರಣ ಆದಾಯ ತೆರಿಗೆ ಪಾವತಿಸುವವರು ಸುಲಭಕ್ಕೆ ಸಿಕ್ಕಿ ಬೀಳಲಿದ್ದು, ಅಂಥವರ ಕಾರ್ಡ್‌ಗಳನ್ನು ರದ್ದು ಮಾಡಲು ಅನುಕೂಲವಾಗಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.