ಪರಿಸರ ಯೋಜನೆಗೆ ವರದಿ ಸಲ್ಲಿಸಿ
Team Udayavani, Dec 4, 2019, 6:02 PM IST
ರಾಯಚೂರು: ಜಿಲ್ಲಾ ಮಟ್ಟದ ಪರಿಸರ ಯೋಜನೆ ರೂಪಿಸಲು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಿಸಿದ ಇಲಾಖೆಗಳು ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಪರಿಸರ ಯೋಜನೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠದ ನಿರ್ದೇಶನದನ್ವಯ ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಪರಿಸರ ಯೋಜನೆ ರೂಪಿಸಿ ಅದನ್ನು ರಾಜ್ಯಮಟ್ಟಕ್ಕೆ ಸಲ್ಲಿಸಬೇಕು. ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಪರಿಸರ ಯೋಜನೆಯ ರೂಪುರೇಷೆಗಳಿಗಾಗಿ ವರದಿ ಕಳುಹಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ, ಅಪಾಯಕಾರಿ ತ್ಯಾಜ್ಯ, ಇ-ತ್ಯಾಜ್ಯಗಳ ನಿರ್ವಹಣೆಯನ್ನು ಕ್ರಮಬದ್ದವಾಗಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಿಲೇವಾರಿ ಕುರಿತು ತರಕಾರಿ ಮಾರಾಟಗಾರರ ಸಭೆ ಕರೆದು ಅವರಿಗೆ ಸೂಚಿಸಬೇಕು. ಹಸಿ ತ್ಯಾಜ್ಯ ಹಾಗೂ ಒಣ ತ್ಯಾಜ್ಯ ಬೇರ್ಪಡಿಸಿ ನೀಡದವರಿಗೆ ದಂಡ ವಿಧಿಸಬೇಕು. ಪ್ಲಾಸ್ಟಿಕ್ ತ್ಯಾಜ್ಯದಲ್ಲಿ ಲೆಗಸಿ, ಪಾಲಿಥಿನ್ಗಳನ್ನು ಬೇರ್ಪಡಿಸಿ ಸಿಮೆಂಟ್ ಫ್ಯಾಕ್ಟರಿಗಳಿಗೆ ಕಳುಹಿಸಬೇಕು. ಪರಿಸರ ಇಂಜಿನಿಯರ್ಗಳು ಸ್ಥಳ ಪರಿಶೀಲಿಸಬೇಕು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅಧಿಕಾರಿಗಳ ವೇತನ ತಡೆ ಹಿಡಿಯಿರಿ ಎಂದು ಆದೇಶಿಸಿದರು.
ಪ್ರಾದೇಶಿಕ ಪರಿಸರ ಅಧಿಕಾರಿ ಶ್ರೀಧರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ವಿಶ್ವನಾಥ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?