ಮಕ್ಕಳ ಕೈಯಲ್ಲಿ ಅರಳಿದ ಮಣ್ಣಿನ ಗಣಪ

ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿ ಕಾರ್ಯಾಗಾರ •ಶಾಲಾ ಮಕ್ಕಳು ಭಾಗಿ

Team Udayavani, Aug 26, 2019, 11:33 AM IST

26-Agust-11

ರಾಯಚೂರು: ಮನ್ಸಲಾಪುರ ರಸ್ತೆಯಲ್ಲಿನ ಲಕ್ಷ್ಮೀ ವೆಂಕಟೇಶ್ವರ ಮಿಲ್ನಲ್ಲಿ ನಡೆದ ಕಾರ್ಯಾಗಾರದಲ್ಲಿ ಮಕ್ಕಳು ತಯಾರಿಸಿದ ಮಣ್ಣಿನ ಗಣೇಶ ಮೂರ್ತಿಗಳು.

ರಾಯಚೂರು: ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳು ಮಣ್ಣಿನಲ್ಲಿ ಚಿಕ್ಕ ಚಿಕ್ಕ ಗಣೇಶ ಮೂರ್ತಿಗಳನ್ನು ತಯಾರಿಸಿ ಗಮನ ಸೆಳೆದರು.

ಗ್ರೀನ್‌ ರಾಯಚೂರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನ‌ವೋದಯ ಶಿಕ್ಷಣ ಸಂಸ್ಥೆಗಳ ಸಮೂಹ, ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ನಗರಸಭೆ ಸಹಯೋಗಲ್ಲಿ ರವಿವಾರ ನಗರದ ಮನ್ಸಲಾಪುರ ರಸ್ತೆಯಲ್ಲಿನ ಕೊಂಡ ಕೃಷ್ಣಮೂರ್ತಿ ಅವರ ಮಿಲ್ನಲ್ಲಿ ಉಚಿತ ಮಣ್ಣಿನ ಗಣೇಶ ತಯಾರಿಸುವ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಾರ್ವಜನಿಕರು ತಮ್ಮ ಮಕ್ಕಳನ್ನು ಕರೆ ತಂದರೆ, ವಿವಿಧ ಶಾಲೆಯ ಮಕ್ಕಳು ಕೂಡ ಪಾಲ್ಗೊಂಡು ಗಣೇಶ ಮೂರ್ತಿಗಳನ್ನು ತಯಾರಿಸಿ ಸಂಭ್ರಮಿಸಿದರು.

ಈ ವೇಳೆ ಸಾಂಕೇತಿಕವಾಗಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ನಟೇಶ ಮಾತನಾಡಿ, ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳನ್ನು ತಯಾರಿಸುವುದು ಪರಿಸರಕ್ಕೆ ಹಾನಿಕಾರಕ. ಈಚೆಗೆ ಮುಂಬಯಿನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸಮುದ್ರದಿಂದ ತ್ಯಾಜ್ಯವೆಲ್ಲ ದಂಡೆಗೆ ಬಂದು ಬಿದ್ದಿದೆ. ಅಂದರೆ ನಾವು ಪರಿಸರಕ್ಕೇ ಏನೇ ತ್ಯಾಜ್ಯ ನೀಡಿದರೂ ಅದು ಮರಳಿ ನಮಗೇ ನೀಡುತ್ತದೆ. ಹೀಗಾಗಿ ಪರಿಸರ ಹಾನಿ ತಡೆಗಟ್ಟುವ ಮಹತ್ತರ ಹೊಣೆ ನಮ್ಮ ಮೇಲಿದೆ ಎಂದರು.

ಪಿಒಪಿ ಗಣೇಶಗಳಿಂದ ಪರಿಸರಕ್ಕೆ ಹಾನಿ ಎಂಬುದನ್ನು ಅರಿತು ಸುಪ್ರೀಂ ಕೋರ್ಟ್‌ ನಿಷೇಧಿಸಿದೆ. ಆದರೂ ಇಂದಿಗೂ ಅದು ಎಲ್ಲೆಡೆ ಜಾರಿಯಾಗುತ್ತಿದೆ. ಇನ್ನು ಮುಂದಾದರೂ ನಾವು ಪರಿಸರ ಸ್ನೇಹಿಯಾದ ಗಣೇಶ ಮೂರ್ತಿಗಳ ತಯಾರಿಕೆಗೆ ಒತ್ತು ನೀಡಬೇಕು. ಈ ವಿಚಾರದಲ್ಲಿ ಇಲ್ಲಿ ಹಮ್ಮಿಕೊಂಡ ಕಾರ್ಯಕ್ರಮ ಸ್ವಾಗತಾರ್ಹ ಎಂದರು.

ತರಬೇತುದಾರ ಸೂಗಣ್ಣ ಮೂರ್ತಿಗಳ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಿ, ಇದು ವಿಶೇಷವಾದ ಮಣ್ಣಾಗಿದೆ. ಇದರಿಂದ ಗಣೇಶ, ಗೌರಿ, ಎತ್ತುಗಳನ್ನು ಮಾಡಿ ಪೂಜೆ ಮಾಡುತ್ತಾರೆ ಎಂದು ವಿವರಿಸಿದರು.

ಗ್ರೀನ್‌ ರಾಯಚೂರು ಉಪಾಧ್ಯಕ್ಷ ಸಿ.ವಿ.ಪಾಟೀಲ, ಡಾ| ಅಮರಖೇಡ, ಕೋಟೇಶ್ವರಾವ್‌, ಉದಯಕಿರಣ, ಸಂಗಮೇಶ ಪಾಟೀಲ, ಸರಸ್ವತಿ ಕಿಲಕಿಲೆ ಸೇರಿ ಇತರರಿದ್ದರು.

ಕಳೆದ ಎರಡು ವರ್ಷಗಳಿಂದ ಈ ಕಾರ್ಯಾಗಾರ ನಡೆಸಲಾಗುತ್ತಿದೆ. ಈಗಾಗಲೇ ಸಾಕಷ್ಟು ಹಾನಿಯಾಗಿದ್ದು, ಇನ್ನೂ ವಿಳಂಬ ಮಾಡಿದರೆ ಪರಿಸರ ಸಂಪೂರ್ಣ ನಾಶವಾಗಲಿದೆ. ನಮ್ಮ ಸಂಸ್ಥೆ ವಿವಿಧ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು, ಸಾರ್ವಜನಿಕರ ಸಹಕಾರ ಕೂಡ ಅಗತ್ಯ.
ಕೊಂಡಾ ಕೃಷ್ಣಮೂರ್ತಿ,
ಗ್ರೀನ್‌ ರಾಯಚೂರು ಸಂಸ್ಥೆ ಅಧ್ಯಕ್ಷ

ಟಾಪ್ ನ್ಯೂಸ್

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.