ಜಿಲ್ಲಾ ಗ್ರಂಥಾಲಯಗಳಿಗೆ ಹೈಟೆಕ್‌ ಸ್ಪರ್ಶ !

ಮೂರು ಹೈಟೆಕ್‌ ಗ್ರಂಥಾಲಯ ಮಂಜೂರು ಪ್ರತಿ ತಾಲೂಕಿನಲ್ಲೂ ಡಿಜಿಟಲ್‌ ಲೈಬ್ರರಿ ಸ್ಥಾಪನೆ ಇ ರೀಡಿಂಗ್‌ ವ್ಯವಸ್ಥೆ

Team Udayavani, Oct 20, 2019, 12:45 PM IST

20-October-7

ರಾಯಚೂರು: ಶೈಕ್ಷಣಿಕ ಗುಣಮಟ್ಟದೊಂದಿಗೆ ಸದಾ ರಾಜಿ ಮಾಡಿಕೊಂಡು ಬರುತ್ತಿರುವ ರಾಯಚೂರು ಜಿಲ್ಲೆಯಲ್ಲಿ ಗ್ರಂಥಾಲಯದಿಂದ ಹೊಸ ಶೈಕ್ಷಣಿಕ ಶಕೆ ಶುರುವಾಗುವಂತಿದೆ. ಸಂಪೂರ್ಣ ಹೈಟೆಕ್‌ ಮಾದರಿಯಲ್ಲಿ ಗ್ರಂಥಾಲಯಗಳು ನಿರ್ಮಾಣಗೊಳ್ಳುತ್ತಿರುವುದು ವಿಶೇಷ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿದ್ದ ಆಮ್ಲನ್‌ ಬಿಸ್ವಾಸ್‌ ಅವರು ಗ್ರಂಥಾಲಯಗಳ ಉತ್ತೇಜನಕ್ಕೆ ಸಾಕಷ್ಟು ಒತ್ತು ನೀಡಿದ್ದರು. ಆ ಸಂಪ್ರದಾಯ ಮುಂದುವರಿದಿದ್ದು, ಅದೇ ಕೆಕೆಆರ್‌ಡಿಬಿಯಿಂದ ಜಿಲ್ಲೆಗೆ ಮೂರು ಹೈಟೆಕ್‌ ಗ್ರಂಥಾಲಯಗಳು ಮಂಜೂರಾಗಿದ್ದು, ತಲಾ ಒಂದು ಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತಲಿವೆ. ಸಿಂಧನೂರು, ಮುದಗಲ್ಲ, ಲಿಂಗಸುಗೂರಿನಲ್ಲಿ ಹೈಟೆಕ್‌ ಗ್ರಂಥಾಲಯ ನಿರ್ಮಿಸಲು ಈಗಾಗಲೇ ಸ್ಥಳ ಗುರುತಿಸಿದ್ದು, ಟೆಂಡರ್‌ ಕೂಡ ಆಗಿದೆ. ಇನ್ನೇನು ಕಾಮಗಾರಿ ಶುರು ಮಾಡುವುದೊಂದೇ ಬಾಕಿ ಎನ್ನುತ್ತಾರೆ ಗ್ರಂಥಾಲಯ ಅಧಿಕಾರಿ. ಸುಸಜ್ಜಿತ ಹಾಗೂ ಅತ್ಯಾಧುನಿಕ ತಾಂತ್ರಿಕತೆ ಒಳಗೊಂಡ ಗ್ರಂಥಾಲಯಗಳಾಗಿರಲಿವೆ.

ಮೂರು ಅಧ್ಯಯನ ಕೇಂದ್ರ: ಹೈಟೆಕ್‌ ಗ್ರಂಥಾಲಯಗಳು ಮಾತ್ರವಲ್ಲದೇ ಮೂರು ಕಡೆ ಅಧ್ಯಯನ ಕೇಂದ್ರಗಳನ್ನು (ಸ್ಟಡಿ ಸೆಂಟರ್‌) ಕೂಡ ಸ್ಥಾಪನೆ ಮಾಡಲಾಗುತ್ತಿದೆ. ಇದಕ್ಕೂ ಕೆಕೆಆರ್‌ಡಿಬಿ ಅನುದಾನ ಲಭಿಸಿದ್ದು, ಪ್ರತಿ ಕೇಂದ್ರ ಬರೋಬ್ಬರಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

ಸ್ಪರ್ಧಾತ್ಮಕ ಪರೀಕ್ಷಾ ತಯಾರಿಗೆ ಈ ಕೇಂದ್ರಗಳು ಸಾಕಷ್ಟು ಅನುಕೂಲ ಕಲ್ಪಿಸಲಿವೆ. ಈಗಾಗಲೇ ಮಸ್ಕಿಯಲ್ಲಿ ಕಟ್ಟಡ ಕಾಮಗಾರಿ ಬಹುತೇಕ ಮುಗಿದಿದ್ದು, ಮಾನ್ವಿ, ಸಿಂಧನೂರಿಲ್ಲಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ.

ಡಿಜಿಟಲ್‌ ಲೈಬ್ರರಿ: ಇನ್ನು ಜಿಲ್ಲೆಗೆ ಕಳೆದ ಬಜೆಟ್‌ ನಲ್ಲಿ ಎಲ್ಲ ತಾಲೂಕುಗಳಿಗೆ ಡಿಜಿಟಲ್‌ ಲೈಬ್ರರಿ ಮಂಜೂರಾಗಿದೆ. ಇ-ರೀಡಿಂಗ್‌ ವ್ಯವಸ್ಥೆ ಇರಲಿದ್ದು, ಕಂಪ್ಯೂಟರ್‌ ಮೂಲಕವೇ ಆಧ್ಯಯನಕ್ಕೆ ಅನುವು ಮಾಡಿಕೊಡಲಾಗುವುದು. ಈಗಾಗಲೇ ಮಿಂಟ್‌ ಬುಕ್‌ ಏಜೆನ್ಸಿ ಎನ್ನುವ ಸಂಸ್ಥೆಗೆ ಟೆಂಡರ್‌ ಕೂಡ ಆಗಿದೆ. ಪೂರೈಕೆಗೂ ಆದೇಶ ನೀಡಲಾಗಿದೆ. ಪ್ರತಿ ತಾಲೂಕಿಗೆ 5-6 ಕಂಪ್ಯೂಟರ್‌ ಬರಲಿವೆ. ಶೇ.80ರಷ್ಟು ಸ್ವಂತ ಕಟ್ಟಡ: ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ರಾಯಚೂರು ಜಿಲ್ಲೆಯಲ್ಲೇ ಅತ್ಯ ಧಿಕ ಕಟ್ಟಡಗಳಿವೆ ಎನ್ನುತ್ತಾರೆ ಗ್ರಂಥಾಲಯಾ ಧಿಕಾರಿ. ಜಿಲ್ಲೆಯಲ್ಲಿ 12 ನಗರ ಗ್ರಂಥಾಲಯಗಳು, 158 ಗ್ರಾಮ ಪಂಚಾಯಿತಿ ಗ್ರಂಥಾಲಯಗಳು, 20 ಅಲೆಮಾರಿ ಸಮುದಾಯ ಗ್ರಂಥಾಲಯಗಳಿವೆ.

ಬಹುತೇಕ ಶೇ.80ರಷ್ಟು ಗ್ರಂಥಾಲಯಗಳಿಗೆ ಸ್ವಂತ ಕಟ್ಟಡಗಳಿವೆ. ಆದರೆ, ಕೆಲವೊಂದು ಕಾಮಗಾರಿ ಮುಗಿದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಉಳಿದಂತೆ ಬಹುತೇಕ ಎಲ್ಲ ಕಡೆಯೂ ಉತ್ತಮ ಕಟ್ಟಡಗಳಿವೆ ಎನ್ನುವುದು ಅಧಿಕಾರಿಗಳ ವಿವರಣೆ. ಅದರ ಜತೆಗೆ ಕೋಟೆಯಲ್ಲಿ, ನಿಜಲಿಂಗಪ್ಪ ಕಾಲೋನಿಯ ದೇವಸ್ಥಾನದಲ್ಲಿ ವಾಚನಾಲಯಗಳಿವೆ. ಒಂದು ಸೇವಾಕೇಂದ್ರ, ಜೈಲು ಗ್ರಂಥಾಲಯವಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.