ಕೆಪಿಎಸ್‌ಸಿ ಕಿತಾಪತಿ; ಮುಗಿಯದ ನೇಮಕಾತಿ

ಎರಡೂವರೆ ವರ್ಷವಾದರೂ ಪ್ರಕಟವಾಗದ ಅಂತಿಮ ಆಯ್ಕೆ ಪಟ್ಟಿ

Team Udayavani, Nov 25, 2019, 12:13 PM IST

25-November-4

ಸಿದ್ಧಯ್ಯಸ್ವಾಮಿ ಕುಕನೂರು
ರಾಯಚೂರು:
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್‌ ಸಿ ತಾಂತ್ರಿಕೇತರ ಹುದ್ದೆಗಳ ನೇಮಕಕ್ಕೆ 2017ರಲ್ಲೇ ಅಧಿ ಸೂಚನೆ ಹೊರಡಿಸಿದ ಕರ್ನಾಟಕ ಲೋಕ ಸೇವಾ ಆಯೋಗ, ಎಲ್ಲ ಪ್ರಕ್ರಿಯೆ ಮುಗಿಸಿದರೂ ಅಂತಿಮ ಆಯ್ಕೆ ಪಟ್ಟಿಯನ್ನೇ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಉದ್ಯೋಗಾಕಾಂಕ್ಷಿಗಳು ಕಾಯ್ದು ಬೇಸತ್ತಿದ್ದು, ಕೆಪಿಎಸ್‌ಸಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪೌರಾಡಳಿತ ನಿರ್ದೇಶನಾಲಯ, ಲೆಕ್ಕಪತ್ರ ಪರಿಶೋಧನೆ, ಸಮಾಜ ಕಲ್ಯಾಣ ಇಲಾಖೆ, ಕೃಷಿ ಮಾರಾಟ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಸುಮಾರು 706 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಮುಂದಾಗಿತ್ತು. ಹುದ್ದೆಗಳ ಭರ್ತಿಗೆ 2017ರ ಮಾರ್ಚ್‌ ನಲ್ಲಿ ಅ ಧಿಸೂಚನೆ ಹೊರಡಿಸಲಾಗಿತ್ತು.

ಮೂರು ಸರ್ಕಾರಗಳು ಬದಲಾದರೂ ಇವರೆಗೆ ನೇಮಕಾತಿ ಪ್ರಕ್ರಿಯೆ ಮುಗಿಯದಿರುವುದು ಕೆಪಿಎಸ್‌ಸಿ ನಿಧಾನಗತಿಗೆ ನಿದರ್ಶನ. 2017ರ ಜೂನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಎಂಟು ತಿಂಗಳ ಬಳಿಕ ಅರ್ಹತಾ ಪಟ್ಟಿ ಪ್ರಕಟಿಸಲಾಯಿತು. ಪಟ್ಟಿ ಪ್ರಕಟಿಸಿದ ಒಂದು ವರ್ಷದ ಬಳಿಕ 1:2 ಅನುಪಾತದಲ್ಲಿ ಮೂಲ ದಾಖಲಾತಿ ಪರಿಶೀಲನೆಗೆ ಆಹ್ವಾನಿಸಲಾಗಿತ್ತು.

ಅದರಂತೆ 2019ರ ಫೆಬ್ರವರಿಯಲ್ಲಿ ದಾಖಲೆಗಳ ಪರಿಶೀಲನೆ ಕೂಡ ನಡೆದಿದೆ. ಆದರೆ, ಈವರೆಗೂ ಅಂತಿಮ ಆಯ್ಕೆ ಪಟ್ಟಿ ಮಾತ್ರ ಪ್ರಕಟಿಸಿಲ್ಲ. ಅಭ್ಯರ್ಥಿಗಳಿಗೆ ಸಿಗದ ಸ್ಪಂದನೆ: ಈ ಕುರಿತು ಉದ್ಯೋಗಾಕಾಂಕ್ಷಿಗಳು ಸಾಕಷ್ಟು ಪ್ರಹಸನ ನಡೆಸಿದ್ದಾರೆ. ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿ ತಾಕೀತು ಮಾಡಿದ್ದಾರೆ.

ಕೆಪಿಎಸ್‌ಸಿ ಕಚೇರಿಗೆ ಅಲೆದು ಸುಸ್ತಾಗಿದ್ದಾರೆ. ಸಹಾಯವಾಣಿಗೆ ಕರೆ ಮಾಡಿದರೆ ಉಡಾಫೆ ಉತ್ತರಗಳು ಸಿಗುತ್ತಿವೆ. ಆರ್‌ ಟಿಐನಲ್ಲಿ ಮಾಹಿತಿ ಕೇಳಿದರೆ ಇನ್ನೂ ಅಂತಿಮ ಪಟ್ಟಿ ಸಿದ್ಧತೆಯಲ್ಲಿದೆ ಎಂಬ ಉತ್ತರ ನೀಡಲಾಗಿದೆ. ಬರೋಬ್ಬರಿ ಎರಡೂವರೆ ವರ್ಷ ಕಳೆದರೂ ಇನ್ನೂ ಸಿದ್ಧತೆ ಎನ್ನುತ್ತಿರುವುದೇ ಅನುಮಾನಗಳಿಗೆ ಎಡೆ ಮಾಡಿದೆ.

ವಯೋಮಿತಿ ಭೀತಿ: ಈಗ ಪರೀಕ್ಷೆ ಎದುರಿಸಿ ಅಂತಿಮ ಹಂತದವರೆಗೂ ತೆರಳಿದ ಅನೇಕರು ವಯೋಮಿತಿ ಮೀರುವ ಭೀತಿಯಲ್ಲಿದ್ದಾರೆ. ಸರ್ಕಾರ ವಿನಾಕಾರಣ ಕಾಲಹರಣ ಮಾಡಿ, ಆದೇಶ ಪ್ರತಿ ನೀಡುವಾಗ ವಯೋಮಿತಿ ನೆಪ ಹೇಳಿದರೆ ಏನು ಮಾಡುವುದು ಎಂಬ ಆತಂಕ ಕೂಡ ಕಾಡುತ್ತಿದೆ. ದಾಖಲೆ ಪರಿಶೀಲಿಸಿದ ಮೇಲೆ ಅಂತಿಮ ಆಯ್ಕೆ ಪಟ್ಟಿ ಬಗ್ಗೆ ಸ್ಪಷ್ಟನೆಯೇ ನೀಡುತ್ತಿಲ್ಲ. ಕೌನ್ಸೆಲಿಂಗ್‌ ಕೂಡ ಏರ್ಪಡಿಸಲಿದೆ ಎಂದು ಕೆಲವರು ಹೇಳಿದರೆ, ಇಲ್ಲ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಕೆಲವರು ಹೇಳುತ್ತಿರುವ ಕಾರಣ ಆಕಾಂಕ್ಷಿಗಳಲ್ಲಿ ಗೊಂದಲ ಸೃಷ್ಟಿಯಾಗಿದೆ.

ಹಿಂಬರಹವೂ ಗೊಂದಲ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕನ್ನಡ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿಯನ್ನು ಸಂಬಂಧಿ ಸಿದ ಇಲಾಖೆ ನಿರ್ದೇಶಕರಿಗೆ ರವಾನಿಸಲಾಗಿದೆ ಎಂದು ಕೆಪಿಎಸ್‌ಸಿಯಿಂದ ಹಿಂಬರಹ ನೀಡಲಾಗಿದೆ. ಆದರೆ, ಈವರೆಗೆ ಆದೇಶ ಪ್ರತಿ ಕೈ ಸೇರಿಲ್ಲ ಎನ್ನುತ್ತಾರೆ ಅಭ್ಯರ್ಥಿಗಳು. ಈ ರೀತಿ ಮಾಹಿತಿ ಕೇಳಿದವರಿಗೆಲ್ಲ ಒಂದೊಂದು ಕಾರಣ ನೀಡುತ್ತಿರುವುದೇ ಅಚ್ಚರಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.