ಅತಿವೃಷ್ಟಿ ಹಾನಿಗೆ 10.50 ಕೋಟಿ ಪರಿಹಾರ


Team Udayavani, Jan 2, 2022, 5:44 PM IST

22disater

ಮಸ್ಕಿ: ಕಳೆದ ನವೆಂಬರ್‌ ತಿಂಗಳಲ್ಲಿ ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ಕೊನೆಗೂ ಪರಿಹಾರ ದಕ್ಕಿದೆ!.

ಅತಿವೃಷ್ಟಿ ಹಾನಿ ಪರಿಹಾರವಾಗಿ ಮಸ್ಕಿ ತಾಲೂಕಿಗೆ ಬರೋಬ್ಬರಿ 10,50,61,400 ರೂ. ಬಿಡುಗಡೆಯಾಗಿದ್ದು, ನಷ್ಟಕ್ಕೆ ಒಳಗಾದ ರೈತರ ಖಾತೆಗೆ ತಾಲೂಕು ಆಡಳಿತ ನೇರವಾಗಿ ಹಣ ಜಮಾ ಮಾಡಿದೆ.

ತಾಲೂಕಿನಲ್ಲಿ ಅಕ್ಟೋಬರ್‌-ನವೆಂಬರ್‌ ತಿಂಗಳಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿದಿತ್ತು. ಬಿಟ್ಟು ಬಿಡದೇ ಸತತವಾಗಿ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿತ್ತು. ನವೆಂಬರ್‌ ತಿಂಗಳಲ್ಲಿ ವಾಡಿಕೆಗಿಂತಲೂ ಅಧಿಕವಾಗಿ ಮಳೆ ಸುರಿದಿದ್ದರಿಂದ ಬಿತ್ತನೆ ಮಾಡಿ, ಫಸಲಿಗೆ ಬಂದಿದ್ದ ಕೃಷಿ ಬೆಳೆಗಳೆಲ್ಲ ಸಂಪೂರ್ಣ ನೀರಿಗೆ ಕೊಚ್ಚಿ ಹೋಗಿದ್ದವು.

ವಿಶೇಷವಾಗಿ ಭತ್ತ, ತೊಗರೆ, ಕಡಲೆ, ಜೋಳ, ಸೂರ್ಯಕಾಂತಿ ಸೇರಿ ಇತರೆ ಬೆಳೆಗಳು ಸಂಪೂರ್ಣ ಹಾನಿಯಾಗಿದ್ದವು. ಕೃಷಿ ಮತ್ತು ಕಂದಾಯ ಇಲಾಖೆಯ ಜಂಟಿ ಅಧಿಕಾರಿಗಳ ತಂಡ ಸರ್ವೇ ನಡೆಸಿ, ಮಸ್ಕಿ ತಾಲೂಕಿನಲ್ಲಿ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳ ಅಂಕಿ-ಸಂಖ್ಯೆ ಕಲೆ ಹಾಕಿ ವರದಿ ಸಲ್ಲಿಸಿದ್ದರು.

17 ಸಾವಿರ ಹೆಕ್ಟೇರ್‌ ನಷ್ಟ

ಸತತವಾಗಿ ಸುರಿದ ಮಳೆಯಿಂದಾಗಿ ತಾಲೂಕಿನಲ್ಲಿ ಒಟ್ಟು 17 ಸಾವಿರ ಹೆಕ್ಟೇರ್‌ (42,500 ಎಕರೆ) ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಬೆಳೆ ನಾಶವಾಗಿರುವುದು ಸರ್ವೇಯಿಂದ ಗೊತ್ತಾಗಿತ್ತು. ಅಲ್ಲದೇ ಸ್ವಯಂ ಆಗಿ ರೈತರೇ ಪರಿಹಾರಕ್ಕೆ ಕೋರಿದ್ದ ಅರ್ಜಿಗಳನ್ನು ಪರಿಶೀಲಿಸಿ, ಹಾನಿಯ ವರದಿಯನ್ನು ಕಂದಾಯ ಇಲಾಖೆಯಿಂದ ತಾಳೆ ಹಾಕಲಾಗಿತ್ತು. ಈ ಪ್ರಕಾರವಾಗಿ ತಾಲೂಕು ಆಡಳಿತಕ್ಕೆ ಸಲ್ಲಿಕೆಯಾಗಿದ್ದ 16,672 ರೈತರ ಅರ್ಜಿಗಳು ಮಾತ್ರ ಪರಿಹಾರಕ್ಕೆ ಪುರಸ್ಕಾರವಾಗಿದ್ದು, ಇಷ್ಟು ರೈತರ ಖಾತೆಗಳಿಗೆ ಮಾತ್ರ ಆನ್‌ಲೈನ್‌ ಮೂಲಕ ಹಣ ಜಮೆಯಾಗಿದೆ. ಆಯಾ ರೈತರ ಬೆಳೆಯ ಹಾನಿಯ ಪ್ರಮಾಣ (ಪೂರ್ಣ, ಇಲ್ಲವೇ ಭಾಗಶಃ)ಕ್ಕೆ ತಕ್ಕಂತೆ ಒಟ್ಟು 10,06,80,000 ರೂ. ಹಣ ಜಮೆಯಾಗಿದೆ.

ಭತ್ತವೇ ಹೆಚ್ಚು

ಮಸ್ಕಿ ಹೋಬಳಿಯಲ್ಲಿ 2638 ಹೆಕ್ಟೇರ್‌, ಹಾಲಾಪೂರ ಹೋಬಳಿಯಲ್ಲಿ 4119 ಹೆಕ್ಟೇರ್‌, ಬಳಗಾನೂರು ಹೋಬಳಿಯಲ್ಲಿ 4140 ಹೆಕ್ಟೇರ್‌, ಗುಡದೂರು ಹೋಬಳಿಯಲ್ಲಿ 2920 ಹೆಕ್ಟೇರ್‌ ಸೇರಿ ಒಟ್ಟು 17 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಸಂಪೂರ್ಣ ಹಾನಿಯಾಗಿತ್ತು. ವಿಶೇಷವಾಗಿ ತಾಲೂಕಿನ ಗುಡದೂರು, ಬಳಗಾನೂರು, ಹಾಲಾಪೂರ ಹೋಬಳಿಯಲ್ಲಿ ನಾಟಿ ಮಾಡಿದ್ದ ಭತ್ತವೇ ಅತಿವೃಷ್ಟಿಗೆ ಹೆಚ್ಚು ಹಾನಿಯಾಗಿತ್ತು. ಫಸಲು ಹಂತಕ್ಕೆ ಬಂದಿದ್ದ ಸೋನಾ, ಕಾವೇರಿ ಸೋನಾ, ಆರ್‌.ಎನ್‌.ಆರ್‌ ಮಾದರಿಯ ಭತ್ತ ನೆಲಕ್ಕೆ ಬಿದ್ದು ರೈತರಿಗೆ ನಷ್ಟ ಉಂಟು ಮಾಡಿತ್ತು. ಉಳಿದಂತೆ ತೊಗರಿ, ಕಡಲೆ, ಸೂರ್ಯಕಾಂತಿ ಬೆಳೆಯೂ ಹಾನಿಯಾಗಿದ್ದು, ಹಾನಿಗೆ ಒಳಗಾದ ಎಲ್ಲ ರೈತರಿಗೂ ಪರಿಹಾರ ದಕ್ಕಿದಂತಾಗಿದೆ.

ಮನೆ ಹಾನಿಗೂ ದುಪ್ಪಟ್ಟು

ಇನ್ನು ಅತಿವೃಷ್ಟಿಯಿಂದಾಗಿ ತಾಲೂಕಿನಲ್ಲಿ 75 ಮನೆಗಳು ನೆಲಸಮವಾಗಿವೆ. ಮನೆ ಹಾನಿಯ ಪ್ರಮಾಣ ಆಧರಿಸಿ, ಸರಕಾರದ ಹೊಸ ಪರಿಹಾರ ಮಾರ್ಗಸೂಚಿ ಅನ್ವಯ 75 ಕುಟುಂಬಗಳಿಗೆ ಒಟ್ಟು 43,81,400 ರೂ. ಹಣ ಸರಕಾರದಿಂದ ಪರಿಹಾರವಾಗಿ ಬಿಡುಗಡೆಯಾಗಿದೆ.

ಮಸ್ಕಿ ತಾಲೂಕಿನಲ್ಲಿ ಮಳೆಯಿಂದಾಗಿ ಹಾನಿಗೆ ಒಳಗಾದ ಎಲ್ಲ ರೈತರಿಗೂ ಸರಕಾರದಿಂದ ಪರಿಹಾರ ಬಿಡುಗಡೆ ಮಾಡಲಾಗಿದೆ. ನೇರವಾಗಿ ರೈತರ ಖಾತೆಗಳಿಗೆ ಆರ್‌ಟಿಜಿಎಸ್‌ ಮೂಲಕ ಹಣ ಜಮೆ ಮಾಡಲಾಗಿದೆ. -ಕವಿತಾ ಆರ್‌., ತಹಶೀಲ್ದಾರ್‌, ಮಸ್ಕಿ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.