ಶಿಥಿಲಾವಸ್ಥೆಯಲ್ಲಿ 12 ನಾಡ ಕಚೇರಿಗಳು


Team Udayavani, Oct 22, 2020, 4:21 PM IST

ಶಿಥಿಲಾವಸ್ಥೆಯಲ್ಲಿ 12 ನಾಡ ಕಚೇರಿಗಳು

ಸಿಂಧನೂರು: ತಾಲೂಕಿನ ವಿವಿಧೆಡೆಗಳಲ್ಲಿರುವ 12 ನಾಡ ಕಚೇರಿಗಳು ಬಾಡಿಗೆಯ ಕಟ್ಟಡದಲ್ಲೆ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಈ ಹಳೆಯ ಕಟ್ಟಡಗಳು ಶಿಥಿಲಾವಸ್ಥೆಗೊಂಡಿರುವುದರಿಂದ ನಾಡ ಕಚೇರಿಯ ದಾಖಲಾತಿಗಳನ್ನು ಹೇಗೆ ಸಂರಕ್ಷಣೆಯಲ್ಲಿಡಬೇಕೆಂಬುದೇ ತಲೆನೋವಾಗಿ ಪರಿಣಮಿಸಿದೆ.

ಶಾಸಕ ವೆಂಕಟರಾವ್‌ ನಾಡಗೌಡ ಅವರ ಸ್ವಗ್ರಾಮವಾದ ಜವಳಗೇರಾ, ಸಿಂಧನೂರು, ಜಾಲಿಹಾಳ, ಕುನ್ನಟಗಿ, ಬಾದರ್ಲಿ, ಗೊರೇಬಾಳ, ಸಾಲಗುಂದಾ, ವಲ್ಕಂದಿನ್ನಿ, ಹೆಡಗಿನಾಳ, ತುರ್ವಿಹಾಳ, ಗುಂಜಳ್ಳಿ, ಹುಡಾ ಈ ಕಡೆಗಳೆಗಳಲ್ಲಿ ನಾಡ ಕಚೇರಿಗಳಿದ್ದು. ಒಂದೊಂದು ನಾಡ ಕಚೇರಿಗೆ10 ರಿಂದ 4 ಹಳ್ಳಿಗಳು ವ್ಯಾಪ್ತಿಗೆ ಒಳಪಡುತ್ತಿದ್ದು, ಇರುವ ಯಾವ ನಾಡ ಕಚೇರಿಗಳಲ್ಲಿ ಮೂಲ ಸಮಸ್ಯೆಗಳ ತಾಂಡವವಾಡುತ್ತಿವೆ. ಜವಳಗೇರಾ ಹಾಗೂ ಜಾಲಿಹಾಳಗಳಲ್ಲಿ ಹೊಸ ಕಟ್ಟಡಗಳು ಪ್ರಾರಂಭವಾಗಿವೆ. ಇನ್ನೂ ಕಾಮಗಾರಿಗಳು ಮುಗಿಯದೆ ಇರುವುದರಿಂದ ಇನ್ನುಳಿದ ನಾಡ ಕಚೇರಿಗಳನ್ನು ಯಾವ ವರ್ಷದಲ್ಲಿ ನಿರ್ಮಾಣ ಮಾಡುತ್ತಾರೆ ಎಂಬುದು ಅನೇಕ ಗ್ರಾಮಸ್ಥರಿಂದ ಮಾತುಗಳು ಕೇಳಿ ಬರುತ್ತಿವೆ.

ದಾಖಲಾತಿಗಳದ್ದೆ ಚಿಂತೆ: ಶಿಥಿಲಾವಸ್ಥೆಯಲ್ಲಿರುವ ನಾಡ ಕಾರ್ಯಾಲಯಗಳಲ್ಲಿ ದಾಖಲಾತಿಗಳು ನೀರಿನಲ್ಲಿ ತೋಯುತ್ತಿದ್ದು, ಈ ದಾಖಲೆಗಳನ್ನು ಹೇಗೆ ಸಂರಕ್ಷಣೆ ಮಾಡಬೇಕೆನ್ನುವುದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ದೊಡ್ಡ ಚಿಂತೆಯಾಗಿದೆ. ಹೆಚ್ಚಿನ ಜನಸಂದಣಿ ಹೊಂದಿದ ಕ್ಷೇತ್ರದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ವ್ಯವಹಾರಿಕ ದಾಖಲಾತಿಗಳನ್ನು ಪಡೆಯಲು ನಾಡ ಕಚೇರಿ ಮುಖ್ಯವಾಗಿದ್ದು, ಇಂತಹ ಶಿಥಿಲಾವಸ್ಥೆಯಲ್ಲಿನ ನಾಡ ಕಚೇರಿಗಳನ್ನು ಕೂಡಲೇ ಸಂಬಂಧಿಸಿದ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಸರಿಪಡಿಸಬೇಕೆಂಬುದು ಪ್ರಜ್ಞಾವಂತ ನಾಗರಿಕರ ಒತ್ತಾಸೆಯಾಗಿದೆ.

ತಾಲೂಕಿನಲ್ಲಿ ಒಟ್ಟು 12 ನಾಡ ಕಚೇರಿಗಳು ಬಾಡಿಗೆಯ ಕಟ್ಟಡದಲ್ಲಿವೆ. ಕೆಲವೊಂದು ಶಿಥಿಲಾವಸ್ಥೆಯಲ್ಲಿವೆ. ಅವುಗಳನ್ನು ಸರಿಪಡಿಸಲು ಸಂಬಂಧಿಸಿದ ಮೇಲಿನ ಅಧಿಕಾರಿಗಳ ಗಮನಕ್ಕೆ ತರುತ್ತೇವೆ. ಯಾವುದೇ ದಾಖಲಾತಿ ಹಾಳಾಗದಂತೆ ನೋಡಿಕೊಳ್ಳಲು ಸಿಬ್ಬಂದಿಗೆ ಸೂಚಿಸಲಾಗುವುದು. -ಮಂಜುನಾಥ ಭೋಗಾವತಿ, ತಹಶೀಲ್ದಾರ್‌.

12 ನಾಡ ಕಚೇರಿಗಳ ಪೈಕಿ 2 ನಾಡ ಕಚೇರಿಗಳನ್ನು ಸ್ವಂತ ಕಟ್ಟಡ ಶೀಘ್ರದಲ್ಲೇ ಕಾಮಗಾರಿಗಳು ಮುಗಿಯುತ್ತವೆ. ಪ್ರತಿವರ್ಷ ಮೂರರಿಂದ ನಾಲ್ಕು ಸ್ವಂತ ಕಟ್ಟಡಗಳು ಹಾಗೂ ಅವುಗಳಿಗೆ ಮೂಲ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಲಾಗಿದೆ. -ವೆಂಕಟರಾವ್‌ ನಾಡಗೌಡ, ಶಾಸಕರು.

 

-ಚಂದ್ರಶೇಖರ್‌ ಯರದಿಹಾಳ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.