ನೆರೆ ನೀರಲ್ಲಿ ಆ್ಯಂಬುಲೆನ್ಸ್ ಗೆ ದಾರಿ ತೋರಿದ ಬಾಲಕನ ಶೌರ್ಯಕ್ಕೆ ಪುರಸ್ಕಾರ
Team Udayavani, Aug 15, 2019, 6:09 PM IST
ರಾಯಚೂರು: ಉತ್ತರ ಕರ್ನಾಟಕವನ್ನು ತೀವ್ರವಾಗಿ ಬಾಧಿಸಿದ್ದ ನೆರೆಯಲ್ಲಿ ಅದೆಷ್ಟೋ ಮಾನವೀಯ ಮುಖಗಳು ಬೆಳಕಿಗೆ ಬಂದಿವೆ. ಅದರಲ್ಲಿ ಒಂದು ಶಾಲಾ ಬಾಲಕನೊಬ್ಬ ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಗೆ ನೀರಿನಲ್ಲಿ ಮುಳುಗಿದ್ದ ಸೇತುವೆ ಮೇಲೆ ದಾರಿ ತೋರಿಸಿದ ಆ ಘಟನೆ. ದೇವದುರ್ಗದ ವೆಂಕಟೇಶ ಎಂಬ 12 ವರ್ಷದ ಶಾಲಾ ಬಾಲಕನ ಈ ಕೆಚ್ಚೆದೆಯ ಕಾರ್ಯವನ್ನು ಸ್ವಾತಂತ್ರ್ಯ ಸಂಭ್ರಮದ ದಿನದಂದು ಸ್ಥಳೀಯ ಆಡಳಿತವು ಗುರುತಿಸಿ ಆತನನ್ನು ಪುರಸ್ಕರಿಸಿದೆ.
ಘಟನೆಯ ವಿವರ:
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹಿರಿಯನಕುಂಪಿ ಗ್ರಾಮದಲ್ಲಿ ನೆರೆ ನೀರಿನಿಂದ ಕಿರು ಸೇತುವೆ ಒಂದು ಸಂಪೂರ್ಣ ಜಲಾವೃತಗೊಂಡಿತ್ತು. ಆ ಸಂದರ್ಭದಲ್ಲಿ ನಾಲ್ವರು ಗಾಯಾಳು ಮಕ್ಕಳು ಹಾಗೂ ಓರ್ವ ಮಹಿಳೆಯ ಶವ ಇದ್ದ ಆ್ಯಂಬುಲೆನ್ಸ್ ತುರ್ತಾಗಿ ಆ ಸೇತುವೆಯನ್ನು ದಾಟಿ ಹೋಗಲೇಬೇಕಿತ್ತು. ಆದರೆ ಸಂಪೂರ್ಣ ನೀರು ತುಂಬಿಕೊಂಡಿದ್ದರಿಂದ ಆ್ಯಂಬುಲೆನ್ಸ್ ಚಾಲಕನಿಗೆ ಸೇತುವೆ ಮತ್ತು ನದಿಯ ಅಂತರವೇ ಗೊತ್ತಾಗುತ್ತಿರಲಿಲ್ಲ.
ಆ ಸಂದರ್ಭದಲ್ಲಿ 12 ವರ್ಷ ಪ್ರಾಯದ ವೆಂಕಟೇಶ ತಾನು ನೀರು ತುಂಬಿದ ಸೇತುವೆಯ ಮೇಲೆ ಓಡಿಕೊಂಡು ಸಾಗಿ ಆ್ಯಂಬುಲೆನ್ಸ್ ಚಾಲಕನಿಗೆ ಸೇತುವೆಯ ಮೇಲೆ ಸರಿಯಾಗಿ ವಾಹನ ಚಲಾಯಿಸಲು ಸಹಾಯ ಮಾಡುತ್ತಾನೆ. ಅಷ್ಟೊತ್ತಿಗೆ ಸೇತುವೆಯ ಇನ್ನೊಂದು ಬದಿಯಲ್ಲಿದ್ದ ಕೆಲವರು ಸಹಾಯಕ್ಕೆ ಬರುತ್ತಾರಾದರೂ ವೆಂಕಟೇಶನ ಧೈರ್ಯದ ಕಾರ್ಯದಿಂದ ಆ್ಯಂಬುಲೆನ್ಸ್ ಈ ಬದಿಗೆ ಯಶಸ್ವಿಯಾಗಿ ಸಾಗಿ ಬಂದಿತ್ತು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು ಮಾತ್ರವಲ್ಲದೆ ಬಾಲಕನ ಈ ಸಮಯಪ್ರಜ್ಞೆಗೆ ಎಲ್ಲೆಡೆಯಿಂದಲೂ ಪ್ರಶಂಸೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ