ಹೆದ್ದಾರಿ ಅಭಿವೃದ್ಧಿಗೆ 12 ಸಾವಿರ ಕೋಟಿ ರೂ.
Team Udayavani, Jan 26, 2022, 5:30 PM IST
ಲಿಂಗಸುಗೂರು: ರಾಯಚೂರು- ಬೆಳಗಾವಿ ಹೆದ್ದಾರಿ ಚತುಷ್ಪಥ ಅಭಿವೃದ್ಧಿಗೊಳಿಸಲು ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ 12 ಸಾವಿರ ಕೋಟಿ ಅನುದಾನ ನೀಡಲಿದೆ. ಇದಕ್ಕಾಗಿ ಡಿಪಿಆರ್ ಸಿದ್ಧವಾಗಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.
ಕಳ್ಳಿಲಿಂಗಸುಗೂರು ಗ್ರಾಮದಲ್ಲಿ ಪಿಎಂಜಿಎಸ್ ವೈ ಯೋಜನೆಯಡಿ 6.75 ಕೋಟಿ ಅನುದಾನದಲ್ಲಿ ಕಳ್ಳಿಲಿಂಗಸುಗೂರು -ಮುದುಗಲ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ರಾಯಚೂರು-ಬೆಳಗಾವಿ ಹೆದ್ದಾರಿ ಖಾಸಗಿ ಸಹಭಾಗಿತ್ವದಲ್ಲಿ 12 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಅಕ್ಕಲಕೋಟಿ- ರಾಯಚೂರು ಮಾರ್ಗವಾಗಿ ಕರ್ನೂಲ್ವರೆಗಿನ ಸಿಕ್ಸ್ ವೇ ಹೆದ್ದಾರಿ ಅಭಿವೃದ್ಧಿಗೆ 4 ಸಾವಿರ ಕೋಟಿ ಅನುದಾನ ಕೇಂದ್ರ ಸರ್ಕಾರ ನೀಡಿದೆ. ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ರಸ್ತೆಗಳ 300 ಕೋಟಿ ಅನುದಾನ ನೀಡಿದ್ದಾರೆ. ಅದರಂತೆ ತಾಲೂಕಿಗೆ 38 ಕೋಟಿ ಬಿಡುಗಡೆಯಾಗಿದೆ. ಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದರು.
ಈ ವೇಳೆ ಶಾಸಕ ಡಿ.ಎಸ್. ಹೂಲಗೇರಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್, ಭೂಪನಗೌಡ ಕರಡಕಲ್, ವೀರನಗೌಡ ಲೆಕ್ಕಿಹಾಳ, ಗಜೇಂದ್ರ ನಾಯಕ, ವೆಂಕಟೇಶ ಗುತ್ತೆದಾರ, ಹುಲ್ಲೇಶ ಸಾಹುಕಾರ, ಸಂಜೀವ ಕಂದಗಲ್, ಜಗನ್ನಾಥ ಕುಲಕರ್ಣಿ, ಮಾನಪ್ಪ ನಾಯಕ, ಎಕ್ಬಾಲ್ ಹಾರೂನಸಾಬ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ