ಪ್ರತಿ ಕ್ವಿಂಟಲ್ ಈರುಳ್ಳಿಗೆ 13,200!
ಇತಿಹಾಸದಲ್ಲೇ ಮೊದಲ ಬಾರಿಗೆ ರಾಯಚೂರಲ್ಲಿ ದಾಖಲೆ ಬೆಲೆಗೆ ಮಾರಾಟ
Team Udayavani, Dec 6, 2019, 5:18 AM IST
ರಾಯಚೂರಿನ ಎಪಿಎಂಸಿಯಲ್ಲಿ ಈರುಳ್ಳಿಯನ್ನು ಸ್ವಚ್ಛಗೊಳಿಸುತ್ತಿರುವುದು.
ರಾಯಚೂರು: ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ಮಾರಾಟವಾಗುವ ಮೂಲಕ ಈರುಳ್ಳಿ ದಾಖಲೆ ನಿರ್ಮಿಸಿದೆ. ಉತ್ಪನ್ನಕ್ಕೆ ವಿಪರೀತ ಬೇಡಿಕೆ ಇದ್ದರೂ ಪೂರೈಸಲು ಈರುಳ್ಳಿಯೇ ಇಲ್ಲ!
ಇಲ್ಲಿನ ಎಪಿಎಂಸಿಯಲ್ಲಿ ಗುರುವಾರ ಕ್ವಿಂಟಲ್ಗೆ 13,200 ರೂ. ಬೆಲೆಗೆ ಈರುಳ್ಳಿ ಮಾರಾಟವಾಗಿದೆ. ಕಳೆದ 6 ವರ್ಷಗಳ ಹಿಂದೆ 6,500 ರೂ. ದರಕ್ಕೆ ಮಾರಾಟವಾಗಿತ್ತು. ಅದೇ ಅತಿ ಹೆಚ್ಚಿನ ದರವಾಗಿತ್ತು. ಕಳೆದ ವರ್ಷ ಎಕರೆಗೆ 100 ಕ್ವಿಂಟಲ್ ಬೆಳೆದ ರೈತರಿಗೆ ಈ ಬಾರಿ ಕೇವಲ 50-60 ಕ್ವಿಂಟಲ್ ಬಂದಿದೆ. ಇನ್ನೂ ಕೆಲವೆಡೆ ಅಷ್ಟು ಕೂಡ ಬಂದಿಲ್ಲ. ಮತ್ತೆ ಕೆಲವೆಡೆ ನೆರೆ ಹೊಡೆತಕ್ಕೆ ಇಳುವರಿ ಸಂಪೂರ್ಣ ಕೈ
ಕೊಟ್ಟಿರುವುದು ಬೆಲೆ ಗಗನಕ್ಕೇರುವಂತೆ ಮಾಡಿದೆ. ಚಿಕ್ಕ ಗಾತ್ರ ಈರುಳ್ಳಿಯನ್ನೂ ವರ್ತಕರು ಲೆಕ್ಕಿಸದೆ
ಖರೀದಿಸುತ್ತಿದ್ದಾರೆ. ಕಳೆದ ವರ್ಷದ ಗರಿಷ್ಠ ದರವೇ ಈ ವರ್ಷದ ಆರಂಭಿಕ ದರವಾಗಿದೆ. ಈಗಿನ ಮಾರುಕಟ್ಟೆ ದರದ ಪ್ರಕಾರ ಗರಿಷ್ಠ 13,200 ರೂ. ನಿಗದಿಯಾದರೆ, ಕನಿಷ್ಠ 2,000ಕ್ಕೆ ಮಾರಾಟವಾಗುತ್ತಿದೆ. ಉತ್ಪನ್ನ ಸರಿಯಾಗಿದ್ದಲ್ಲಿ 9,200 ರೂ. ದರ ಸಿಗುತ್ತಿದೆ. ಇಲ್ಲಿನ ಎಪಿಎಂಸಿಗೆ ನಿತ್ಯ 1,500ರಿಂದ 1,800 ಕ್ವಿಂಟಲ್ ಈರುಳ್ಳಿ ಆವಕವಾಗುತ್ತಿದೆ.
ಈ ವರ್ಷ ಜಿಲ್ಲೆಯಲ್ಲಿ 1,750 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿತ್ತು. ಈ ಬಾರಿ ಅಂದಾಜು 2,100 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ. ದೇವದುರ್ಗದಲ್ಲಿ ಹೆಚ್ಚು ಬೆಳೆದರೆ, ಲಿಂಗಸುಗೂರು, ಮಾನ್ವಿ, ರಾಯಚೂರಿನಲ್ಲಿ ಕಡಿಮೆ ಪ್ರಮಾಣದಲ್ಲಿ ಬೆಳೆಯಲಾಗಿದೆ. ಆದರೆ, ನೆರೆ ಜಿಲ್ಲೆ
ಯಾದಗಿರಿಯಿಂದಲೂ ಸಾಕಷ್ಟು ರೈತರು ಈರುಳ್ಳಿ ಮಾರಾಟಕ್ಕೆ ತರುತ್ತಿದ್ದಾರೆ.
ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗೆ ಅಷ್ಟೊಂದು ಉತ್ತೇಜನವಿಲ್ಲ. ಆದರೂ, ಉಭಯ ನದಿಗಳ ನೀರಿನ
ಮೂಲಗಳು, ಬೋರ್ ನೆರವಿನಿಂದ ಜಿಲ್ಲೆಯ ರೈತರು ಅಲ್ಲಲ್ಲಿ ಈರುಳ್ಳಿ ಬೆಳೆಯುತ್ತಾರೆ. ಉಪ ಬೆಳೆಯಾಗಿ
ಬೆಳೆಯುವ ಈರುಳ್ಳಿ ಒಮ್ಮೊಮ್ಮೆ ಕೈ ಹಿಡಿದರೆ ಬಹುತೇಕ ಬಾರಿ ಕೈ ಕೊಟ್ಟಿದ್ದೇ ಹೆಚ್ಚು. ಆದರೂ ಈಗಿನ ದರ ನೋಡಿದರೆ ಯಾವ ರೈತರಿಗೂ ಮೋಸವಿಲ್ಲ.
ಹೆಚ್ಚಿದ ಬೇಡಿಕೆ: ಸಾಮಾನ್ಯವಾಗಿ ಜಿಲ್ಲೆಯ ವರ್ತಕರು ಆಂಧ್ರ, ತೆಲಂಗಾಣ ಜತೆಗೆ ಹೆಚ್ಚಿನ ವಹಿವಾಟು ನಡೆಸುತ್ತಾರೆ. ಆದರೆ, ಈ ಬಾರಿ ತಮಿಳುನಾಡು, ಕೇರಳ, ಮಹಾ ರಾಷ್ಟ್ರದಿಂದಲೂ ಬೇಡಿಕೆ ಬಂದಿದೆ. ಆದರೆ, ಇಳುವರಿ ಕುಂಠಿತಗೊಂಡಿದ್ದರಿಂದ ಬೇಡಿಕೆ ಪೂರೈಸಲು ಆಗುತ್ತಿಲ್ಲ.
ರೈತರ ಜೇಬು ಭರ್ತಿ: ಹಿಂದಿನ ವರ್ಷ ಉತ್ತಮ ಇಳುವರಿ ಬಂದಿತ್ತು. ಆದರೆ, ಮಾರುಕಟ್ಟೆಯಲ್ಲಿ 3 ಸಾವಿರ ರೂ.ಗಿಂತ ಅಧಿಕ ಬೆಲೆಗೆ ಮಾರಾಟವಾಗಲೇ ಇಲ್ಲ. ಸಣ್ಣ ಹಿಡಿ ಇರುವ ಈರುಳ್ಳಿಯನ್ನಂತೂ ಕೇಳುವವರು ಇರಲಿಲ್ಲ. ಇದರಿಂದ ರೈತರು ಚೀಲ ಸಮೇತ ಈರುಳ್ಳಿಯನ್ನು ಎಪಿಎಂಸಿಯಲ್ಲಿ ಬಿಟ್ಟು ಹೋಗಿದ್ದರು. ಇನ್ನೂ ಕೆಲವೆಡೆ ಹೊಲದಲ್ಲಿಯೇ ಆಡು, ಕುರಿ, ದನಕರುಗಳನ್ನು ಬಿಟ್ಟು ಬೆಳೆಯನ್ನು
ಮೇಯಿಸಿದ್ದರು. ಆದರೆ, ಈ ಬಾರಿ ಮಾತ್ರ 10-20 ಪಾಕೆಟ್ ಈರುಳ್ಳಿ ಬೆಳೆದವರಿಗೂ ಜೇಬು ತುಂಬಿದೆ. ಇನ್ನು ನೂರಾರು ಕ್ವಿಂಟಲ್ ಬೆಳೆದ ರೈತರ ಆನಂದಕ್ಕೆ ಪಾರವೇ ಇಲ್ಲ.
ಬೇಡಿಕೆ ಹೆಚ್ಚಾಗಿದ್ದು, ಈ ಮುಂಚೆ ನಡೆಸುವ ರೀತಿಯಲ್ಲೇ ವಹಿವಾಟು ನಡೆಸುತ್ತಿದ್ದೇವೆ. ಹಿಂದೆ ಖರೀದಿಸುತ್ತಿದ್ದ ವ್ಯಾಪಾರಿಗಳೇ ದುಬಾರಿ ಹಣ ನೀಡುತ್ತಿದ್ದಾರೆ. ಆಂಧ್ರ, ಕೇರಳ, ತಮಿಳುನಾಡು, ತೆಲಂಗಾಣಕ್ಕೆ ಎಂದಿನಂತೆ ರವಾನೆಯಾಗುತ್ತಿದೆ. ಬೇಡಿಕೆ ಇದ್ದರೂ ಪೂರೈಸಲು ಈರುಳ್ಳಿಯೇ ಇಲ್ಲ.
ಪರಿಸ್ಥಿತಿ ಗಮನಿಸಿದರೆ ಈ ದರ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ.
● ಶಾಲಂ ಪಾಷಾ, ವರ್ತಕ, ಎಪಿಎಂಸಿ ರಾಯಚೂರು
● ಸಿದ್ದಯ್ಯಸ್ವಾಮಿ ಕುಕನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ