ಅಮೃತ ಯೋಜನೆಯಡಿ 19.35 ಕೋಟಿ


Team Udayavani, Jan 26, 2022, 1:17 PM IST

14amrith

ಸಿಂಧನೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ-4ರಲ್ಲಿ ನಗರಕ್ಕೆ 30 ಕೋಟಿ ರೂ. ಮಂಜೂರಾಗಿದ್ದು, ಅದರಲ್ಲಿ 19.35 ಕೋಟಿ ರೂ. ವೆಚ್ಚದಲ್ಲಿ ಚರಂಡಿ, ಸಿ.ಸಿ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌ ಹೇಳಿದರು.

ನಗರಸಭೆ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಇಲ್ಲಿನ ನಗರಸಭೆಗೆ 30 ಕೋಟಿ ರೂ. ಮಂಜೂರಾಗಿದೆ. ಅದರಲ್ಲಿ ಯಾವ್ಯಾವ ಕೆಲಸಕ್ಕೆ, ಎಷ್ಟು ಬಳಕೆ ಮಾಡಬೇಕು? ಎಂಬ ಮಾರ್ಗಸೂಚಿ ನೀಡಿದ್ದಾರೆ. ಈ ಕುರಿತು ನಗರಸಭೆ ಆಡಳಿತ ಮಂಡಳಿಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೆಲಸದ ವಿವರ ಏನು?

ನಗರಸಭೆಗೆ 30 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ 60 ಲಕ್ಷ ರೂ. ಕ್ರಿಯಾಯೋಜನೆ ರೂಪಿಸುವುದಕ್ಕೆ ಮೀಸಲಿರಿಸಿದ್ದಾರೆ. ವಿಶೇಷ ಕ್ರಿಯಾಯೋಜನೆಗೆ ರಾಜ್ಯ ಸರ್ಕಾರ 1.50 ಲಕ್ಷ ರೂ. ಮೀಸಲಿಟ್ಟಿದೆ. ಶೇ.8 ಟೆಂಡರ್‌ ಪ್ರೀಮಿಯಂಗೆ 2.40 ಕೋಟಿ ರೂ. ನಿಗದಿಯಾಗಿದೆ. 25.50 ಕೋಟಿ ರೂ. ಈ ಎಲ್ಲ ಕಡಿತದ ಬಳಿಕ ದೊರೆಯುತ್ತದೆ. ಅದರಲ್ಲಿ ಎಸ್ಸಿ, ಎಸ್ಟಿ ವರ್ಗದ ಅಭಿವೃದ್ಧಿಗೆ 6.14 ಕೋಟಿ ರೂ., ವಿಕಲಚೇತನರಿಗಾಗಿ 1.27 ಕೋಟಿ ರೂ. ವಿನಿಯೋಗವಾಗಲಿದೆ. ಈ ಎಲ್ಲವನ್ನು ನಿಭಾಯಿಸಿದ ನಂತರ 19.35 ಕೋಟಿ ರೂ. ದೊರೆಯಲಿದೆ. ಇದರಲ್ಲಿ ಚರಂಡಿ, ಸಿಸಿ ರಸ್ತೆ, ಡಾಂಬರೀಕರಣ ಕಾಮಗಾರಿ ಕೈಗೊಳ್ಳಬೇಕಿದೆ. 4.87 ಕೋಟಿ ರೂ. ಸಾಮೂಹಿಕ ಶೌಚಾಲಯ, ಮಾರುಕಟ್ಟೆ ವ್ಯವಸ್ಥೆ, ಅಂಗನವಾಡಿ, ಸಾಮೂಹಿಕ ಶೌಚಾಲಯ, ಬಸ್‌ ಶೆಲ್ಟರ್‌, ಎಲೆಕ್ಟ್ರಿಕಲ್‌ ಕೆಲಸ, ಉದ್ಯಾನ ಅಭಿವೃದ್ಧಿಗೆ ಬಳಸಲು ಅವಕಾಶವಿದೆ ಎಂದರು.

ಪಕ್ಷಾತೀತ ಚರ್ಚೆ

ಈಗಾಗಲೇ ಅನುದಾನ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನಗರಸಭೆ ಎಂಜಿನಿಯರ್‌ಗಳ ತಂಡ ಹಾಗೂ ನಗರಸಭೆ ಸದಸ್ಯರು 15-16 ವಾರ್ಡ್‌ಗಳ ಸರ್ವೇ ಮುಗಿಸಿದ್ದಾರೆ. ಯಾವ ವಾರ್ಡ್‌ನಲ್ಲಿ ಆದ್ಯತೆ ಮೇಲೆ ಕೆಲಸ ಕೈಗೊಳ್ಳಬೇಕಿದೆ ಎಂಬುದನ್ನು ಪಕ್ಷ ಭೇದ ಮರೆತು ಒಟ್ಟಾಗಿ ಕುಳಿತು ಚರ್ಚಿಸಲಾಗುವುದು. ಯೋಜನೆ ಅನುದಾನ ಬಳಕೆಗೆ ಸಂಬಂಧಿಸಿ ರಚಿಸಿದ ಸಮಿತಿಯಲ್ಲಿ ಶಾಸಕರು ಕೂಡ ಒಬ್ಬ ಸದಸ್ಯರು. ಅವರ ಸಲಹೆ ಕೂಡ ಪಡೆದುಕೊಳ್ಳಲಾಗುವುದು ಎಂದರು.

ಈ ವೇಳೆ ನಗರಸಭೆ ಉಪಾಧ್ಯಕ್ಷ ಮುರ್ತುಜಾ ಹುಸೇನ್‌, ನಗರಸಭೆ ಸದಸ್ಯರಾದ ಡಿ. ಸತ್ಯನಾರಾಯಣ ದಾಸರಿ, ಕೆ. ಜಿಲಾನಿಪಾಷಾ, ಮುನೀರ್‌ಪಾಷಾ, ಮುಖಂಡರಾದ ಪ್ರಭುರಾಜ್‌ ಕರ್ಪೂರಮಠ ಸೇರಿದಂತೆ ಇತರರಿದ್ದರು.ಎಲ್ಲವೂ ಲಿಂಕ್‌ ಪ್ಯಾಕೇಜ್‌ ಇದೊಂದು ಉತ್ತಮ ಪ್ಯಾಕೇಜ್‌. ಇದರಲ್ಲಿ ಯಾವುದೇ ಕೆಲಸವನ್ನು ಆರಂಭಿಸಿದ ಮೇಲೆ ಅದಕ್ಕೆ ಪೂರಕವಾಗಿ ಲಿಂಕ್‌ ಇರುವ ರಸ್ತೆಗೆ ಮಾತ್ರ ಅವಕಾಶ ಒದಗಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌ ಹೇಳಿದರು. ಒಂದು ವಾರ್ಡ್‌ನಲ್ಲಿ ರಸ್ತೆ ಕಾಮಗಾರಿ ಕೈಗೊಂಡ ಮೇಲೆ 1 ಕೋಟಿ ರೂ. ವೆಚ್ಚದ ಕಾಮಗಾರಿ ಇದ್ದರೆ, ಅದು ಲಿಂಕ್‌ ಹೊಂದಿದ್ದರಷ್ಟೇ ಮುಂದುವರಿಯುತ್ತದೆ. ಎಲ್ಲೆಂದರಲ್ಲಿ ಅವಕಾಶವಿಲ್ಲ ಎಂದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.