ಮತ್ತೆ 25 ಹೊಸ ಪ್ರಕರಣ ಪತ್ತೆ
Team Udayavani, Jul 11, 2020, 10:06 AM IST
ರಾಯಚೂರು: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 25 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಸೋಂಕಿತರ ಸಂಖ್ಯೆ 656ಕ್ಕೆ ಏರಿದೆ. ಚಿಕಿತ್ಸೆ ಪಡೆದು 463 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನೂ 186 ಸಕ್ರಿಯ ಪ್ರಕರಣಗಳಿವೆ.
ಶುಕ್ರವಾರ ಕೂಡ 21 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ನಡುವೆ ಶುಕ್ರವಾರ ಲಿಂಗಸುಗೂರು ಮೂಲದ ವೃದ್ಧ ಯೊಬ್ಬ ಮೃತ ಪಟ್ಟಿದ್ದಾನೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ದಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ಜಿಲ್ಲೆಯ ದೇವದುರ್ಗ ತಾಲೂಕಿ ನಿಂದ 90, ಲಿಂಗಸುಗೂರು ತಾಲೂಕಿ ನಿಂದ 106, ಮಾನ್ವಿ ತಾಲೂಕಿನಿಂದ 71, ಸಿಂಧನೂರು ತಾಲೂಕಿನಿಂದ 191 ಮತ್ತು ರಾಯಚೂರು ತಾಲೂಕಿನಿಂದ 119 ಸೇರಿದಂತೆ ಒಟ್ಟು 577 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಲಾದ ವರದಿಗಳಲ್ಲಿ 337 ನೆಗೆಟಿವ್ ಆಗಿವೆ.
ಒಟ್ಟಾರೆ ಜಿಲ್ಲೆಯಿಂದ ಈವರೆಗೆ 27,578 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 24,253 ವರದಿಗಳು ನೆಗೆಟಿವ್ ಆಗಿವೆ. ಉಳಿದ 2,663 ಸ್ಯಾಂಪಲ್ಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್ಗಳಲ್ಲಿ ಶುಕ್ರವಾರ 653 ಜನರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್ಗಳಲ್ಲಿ 135 ಜನರನ್ನು ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ