ವಸತಿ ನಿಲಯಗಳ 3.5 ಕೋಟಿ ರೂ. ಬಾಡಿಗೆ ಬಾಕಿ

ಲಾಕ್‌ಡೌನ್‌ ಬಳಿಕ ಪಾವತಿಯಾಗಿಲ್ಲ ಬಿಡಿಗಾಸು,ಉಪಯೋಗಿಸದಿದ್ದರೂ ಪಾವತಿಸಬೇಕಿದೆ ಬಾಡಿಗೆ

Team Udayavani, Dec 3, 2020, 4:14 PM IST

ವಸತಿ ನಿಲಯಗಳ 3.5 ಕೋಟಿ ರೂ. ಬಾಡಿಗೆ ಬಾಕಿ

ರಾಯಚೂರು: ಸಮಾಜ ಕಲ್ಯಾಣ ಇಲಾಖೆ ತನ್ನ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಸತಿನಿಲಯಗಳಲ್ಲಿ ಸಾಕಷ್ಟು ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿದ್ದು, ಲಾಕ್‌ಡೌನ್‌ ಬಳಿಕ ಈವರೆಗೂ ಬಾಡಿಗೆ ಹಣ ಪಾವತಿಸಿಲ್ಲ. ಬರೋಬ್ಬರಿ 3.5 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಕಟ್ಟಡಮಾಲೀಕರು ಅಧಿಕಾರಿಗಳ ಮೇಲೆ ಒತ್ತಡ ಹಾಕುವಂತಾಗಿದೆ.

ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆವ್ಯಾಪ್ತಿಯಡಿ 80 ವಸತಿ ನಿಲಯಗಳಿದ್ದು, ಅದರಲ್ಲಿ 20 ಬಾಡಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ.ಲಾಕ್‌ಡೌನ್‌ ಪೂರ್ವದಲ್ಲಿ 1.62 ಕೋಟಿ ರೂ. ಬಿಡುಗಡೆಯಾಗಿತ್ತು. ಆಗ ಬಾಡಿಗೆಪಾವತಿಸಲಾಗಿತ್ತು. ಅದಾದ ಬಳಿಕ ಸರ್ಕಾರಎಲ್ಲ ಹಾಸ್ಟೆಲ್‌ಗ‌ಳನ್ನು ಮುಚ್ಚಿಸಿದೆ. ಆದರೆ, ಕಟ್ಟಡಗಳನ್ನು ಖಾಲಿ ಮಾಡಿಲ್ಲ. ಇದರಿಂದಉಪಯೋಗವಿಲ್ಲದಿದ್ದರೂ ಕಟ್ಟಡಗಳಿಗೆಮಾತ್ರ ಬಾಕಿ ಪಾವತಿಸಲೇಬೇಕಿದೆ. ಸರ್ಕಾರ ಹೇಗಿದ್ದರೂ ಬಾಡಿಗೆ ಕೊಡುತ್ತದೆ ಎಂಬ ಕಾರಣಕ್ಕೆ ಇದರಿಂದ ಕಟ್ಟಡ ಮಾಲೀಕರು ಕೂಡ ಮೌನಕ್ಕೆ ಶರಣಾಗಿದ್ದರು. ಆದರೆ, ಈಗ ವಸತಿ ನಿಲಯಗಳನ್ನು ಆರಂಭಿಸುತ್ತಿಲ್ಲ ಅತ್ತ ಬಾಡಿಗೆ ಪಾವತಿಸದಿರುವುದು ಗೊಂದಲಕ್ಕೆಡೆ ಮಾಡಿದೆ. ಇದರಿಂದ ಮಾಲೀಕರು ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸುವಂತಾಗಿದೆ.

ಬಾಕಿ ಹಣ ಬಿಡುಗಡೆಗೆ ಪ್ರಸ್ತಾವನೆ: ಮಾರ್ಚ್‌ ನಿಂದ ಈವರೆಗೆ ಬರೋಬ್ಬರಿ 3.5 ಕೋಟಿ ರೂ. ಬಾಕಿ ಹಣ ಉಳಿದಿದೆ. ಪ್ರತಿ ತಿಂಗಳು 11.62 ಲಕ್ಷ ರೂ. ಬಾಡಿಗೆ ಹಣ ಸಂದಾಯ ಮಾಡಬೇಕಿದ್ದು, ಕಳೆದ ಎಂಟು ತಿಂಗಳಿಂದ ಪಾವತಿ ಮಾಡಿಲ್ಲ. ಇಲಾಖೆ ಮುಖ್ಯ ಕಾರ್ಯದರ್ಶಿಗೆ ಬಾಕಿ ಹಣ ಪಾವತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಗುತ್ತಿಗೆ ಸಿಬ್ಬಂದಿಗೆ ಮಾತ್ರ ವೇತನ ಪಾವತಿಯಾಗಿದ್ದು, ಕಾಯಂ ಸಿಬ್ಬಂದಿಗೆ ಈಗ ವೇತನ ಪಾವತಿಸಲುಹಣಕಾಸು ಇಲಾಖೆ ಸಮ್ಮತಿ ಸೂಚಿಸಿದೆ. ಇದರಿಂದ ಬಾಡಿಗೆ ಹಣ ಈಗ ಬರಬಹುದೇ ಎಂಬುದಕ್ಕೆ ಉತ್ತರ ಸಿಗದಾಗಿದೆ.

ಸುಳಿಯದ ವಿದ್ಯಾರ್ಥಿಗಳು: ಇನ್ನೂ ಪದವಿ ಕಾಲೇಜುಗಳು ಆರಂಭಗೊಳ್ಳುತ್ತಿದ್ದಂತೆ ಜಿಲ್ಲೆಯ 14 ವಸತಿ ನಿಲಯಗಳನ್ನು ಆರಂಭಿಸಲಾಗಿದೆ. ಆದರೆ, ಈವರೆಗೆ ಒಬ್ಬೇ ಒಬ್ಬ ವಿದ್ಯಾರ್ಥಿ ಕೂಡ ಪ್ರವೇಶ ಪಡೆದಿಲ್ಲ. ಕೋವಿಡ್‌ ನಿಯಮಾನುಸಾರ ವಿದ್ಯಾರ್ಥಿಗಳನ್ನು ದಾಖಲುಮಾಡಿಕೊಳ್ಳಬೇಕಿದ್ದು, ಈಗಿರುವ ಸಂಖ್ಯೆಯ ಅರ್ಧದಷ್ಟು ಮಾತ್ರ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕಿದೆ. ಉಳಿದ ವಿದ್ಯಾರ್ಥಿಗಳನ್ನು ಪೂರ್ವ ಪ್ರಾಥಮಿಕ ವಸತಿ ನಿಲಯಗಳಿಗೆ ಸ್ಥಳಾಂತರ ಮಾಡಲು ಯೋಜನೆ ರೂಪಿಸಲಾಗಿತ್ತು. ಜಿಲ್ಲೆಯಲ್ಲಿ ಮೆಟ್ರಿಕ್‌ ಪೂರ್ವ ವಿಭಾಗದಲ್ಲಿ 5750 ಹಾಗೂ ಮೆಟ್ರಿಕ್‌ ನಂತರದಲ್ಲಿ 4554 ವಿದ್ಯಾರ್ಥಿಗಳಿದ್ದಾರೆ.

ಎಲ್ಲೆಲ್ಲಿ ಎಷ್ಟು ಕಟ್ಟಡ? : ರಾಯಚೂರು ತಾಲೂಕಿನಲ್ಲಿ 18ವಸತಿ ನಿಲಯಗಳಿದ್ದು, ನಾಲ್ಕು ಬಾಡಿಗೆಕಟ್ಟಡಗಳಲ್ಲಿ ನಡೆಸಲಾಗುತ್ತಿದೆ. ಮಾನ್ವಿಯಲ್ಲಿ 10ರಲ್ಲಿ ನಾಲ್ಕು, ಸಿಂಧನೂರಿನಲ್ಲಿ 11ರಲ್ಲಿ ಆರು ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಲಿಂಗಸೂಗೂರಿನಲ್ಲಿ 23ರಲ್ಲಿ ಕೇವಲ 2 ಮಾತ್ರ ಬಾಡಿಗೆ ಕಟ್ಟಡದಲ್ಲಿವೆ. ದೇವದುರ್ಗದಲ್ಲಿ 17ರಲ್ಲಿ 6 ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿನಡೆಸಲಾಗುತ್ತಿದೆ. ಲಾಕ್‌ಡೌನ್‌ ಬಳಿಕ ಸರ್ಕಾರ ಹೊಸ ವಸತಿ ನಿಲಯಗಳ ನಿರ್ಮಾಣಕ್ಕೆ ಅನುಮತಿ ನೀಡಿಲ್ಲ.ಈಗಾಗಲೇ ಕೆಲವಡೆ ಸ್ವಂತ ಕಟ್ಟಡಗಳ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೂ ಬಳಕೆಗೆ ಮುಕ್ತಗೊಂಡಿಲ್ಲ.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಸುವ ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿದ್ದು, 3.5 ಕೋಟಿ ಬಾಡಿಗೆ ಹಣ ಬಾಕಿ ಇದೆ. ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಟ್ಟಡ ಮಾಲೀಕರಿಂದ ಒತ್ತಡ ಬಂದಿಲ್ಲ. ಹಣ ಯಾವಾಗ ಬಿಡುಗಡೆ ಆಗಬಹುದು ಎಂದು ಕೇಳುತ್ತಿದ್ದಾರೆ. ಶೀಘ್ರದಲ್ಲೇ ಹಣ ಬಿಡುಗಡೆಯಾಗಬಹುದು. –ಸತೀಶ ಕೆ.ಎಚ್‌, ಉಪನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ

 

-ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.