343 ಮಕ್ಕಳು ಶಾಲೆಯಿಂದ ಹೊರಗೆ: ಸಮೀಕ್ಷೆಯಿಂದ ಬಹಿರಂಗ


Team Udayavani, Jan 12, 2019, 12:04 PM IST

ray-3.jpg

ಲಿಂಗಸುಗೂರು: ಶಾಲೆಯಲ್ಲಿ ಸತತ ಗೈರು ಹಾಜರಿ ಸೇರಿ ಇನ್ನಿತರ ವಿಷಯಗಳನ್ನು ದೃಷ್ಠಿಕೋನದಲ್ಲಿಟ್ಟುಕೊಂಡ ಶಿಕ್ಷಣ ಇಲಾಖೆ ಇತ್ತೀಚೆಗೆ ಸಮೀಕ್ಷೆ ನಡೆಸಿದೆ. ತಾಲೂಕಿನಲ್ಲಿ 343 ಮಕ್ಕಳು ಅಕ್ಷರ ಕಲಿಕೆಯಿಂದ ದೂರುಳಿದಿರುವುದು ಪತ್ತೆಯಾಗಿದೆ.

ತಾಲೂಕಿನಲ್ಲಿ 230 ಸರ್ಕಾರಿ ಪ್ರಾಥಮಿಕ, 35 ಪ್ರೌಢಶಾಲೆ, 9 ಸರ್ಕಾರಿ ಪದವಿ ಪೂರ್ವ ಕಾಲೇಜಗಳಿವೆ. ಅನುದಾನಿತ 9 ಪ್ರಾಥಮಿಕ, 9 ಪ್ರೌಢಶಾಲೆ ಸೇರಿ ತಾಲೂಕಿನಲ್ಲಿ 75,123 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದರಲ್ಲಿ 39,343 ಗಂಡು, 35, 780 ಹೆಣ್ಣು ಮಕ್ಕಳು ಅಕ್ಷರ ಕಲಿಕೆಯಲ್ಲಿ ತೊಡಗಿದ್ದಾರೆ.

ತಾಲೂಕಿನ ಶಾಲೆಗಳಲ್ಲಿ ದಾಖಲಾತಿಗಳಿಗೂ ಮಕ್ಕಳ ಹಾಜರಾತಿಗೂ ವ್ಯತ್ಯಾಸಗಳು ಕಂಡುಬಂದಿದೆ. ಹಾಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕಾರ್ಯ ನಡೆಸಿದ್ದರಿಂದ ತಾಲೂಕಿನಲ್ಲಿ 343 ವಿದ್ಯಾರ್ಥಿಗಳಲ್ಲಿ 175 ಗಂಡು, 167 ಹೆಣ್ಣು ಮಕ್ಕಳು ಶಿಕ್ಷಣದಿಂದ ದೂರುಳಿದಿದ್ದಾರೆ. ಪರಿಶಿಷ್ಟ ಜಾತಿ 99 ಮಕ್ಕಳು, ಪರಿಶಿಷ್ಟ ಪಂಗಡದ 92 ಮಕ್ಕಳು, ಪ್ರವರ್ಗ-1 49 ಮಕ್ಕಳು, ಇತರೆ ಹಿಂದುಳಿದ ವರ್ಗಗಳ 70 ಮಕ್ಕಳು, ಮುಸ್ಲಿಂ 32 ಮಕ್ಕಳು ತಮ್ಮ ಶಾಲೆಯಿಂದ ಹೊರಗುಳಿದಿದ್ದಾರೆ. ತಾಲೂಕಿನ ಸರ್ಜಾಪುರದಲ್ಲಿ 48, ಕಾಚಾಪುರ 11, ಮಾವಿನಭಾವಿ 6, ನೀರಲಕೇರಾ 8, ಕುಮಾರಖೇಡ್‌ 12, ತೊಡಕಿ ತಾಂಡಾ 9, ನಾಗಲಾಪುರ, ಲಿಂಗಸುಗೂರು ಪಟ್ಟಣ, ಕಸಬಾಲಿಂಗಸುಗೂರು, ಛತ್ತರ ತಾಂಡಾ, ಹಡಗಲಿ, ದೇವರಭೂಪುರ, ಹಟ್ಟಿ, ತಿಮ್ಮಾಪುರ ಸೇರಿ ಇನ್ನಿತರ ಗ್ರಾಮಗಳಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ಮಕ್ಕಳೇ ಶಾಲೆಯಿಂದ ಹೊರಗುಳಿದಿದ್ದಾರೆ.

6-14 ವರ್ಷ ವಯೋಮಾನದ ಎಲ್ಲ ಮಕ್ಕಳಿಗೆ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ಒದಗಿಸುವುದು ಶಿಕ್ಷಣ ಹಕ್ಕು ಕಾಯ್ದೆ ಮುಖ್ಯ ಉದ್ದೇಶ. ಸರ್ಕಾರ ಪ್ರತಿಯೊಂದು ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂದು ಕೋಟ್ಯಂತರ ರೂ.ಗಳನ್ನು ಶಿಕ್ಷಣಕ್ಕಾಗಿ ಖರ್ಚು ಮಾಡುತ್ತಿದೆ. ಆದರೂ ಶಿಕ್ಷಣಕ್ಕೆ ಒತ್ತು ಇಲ್ಲದಾಗಿದೆ. ಮಕ್ಕಳನ್ನು ಶಾಲೆಯಿಂದ ಹೊರಗುಳಿಯಲು ಪೋಷಕರ ನಿರಾಸಕ್ತಿ ಕಾರಣವೇ ಹೆಚ್ಚು ಎಂಬುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಇದಲ್ಲದೆ ಇತರೆ ದುಡಿಮೆಯಲ್ಲಿ, ಬಾಲಕಾರ್ಮಿಕ, ಚಿಂದಿ ಆಯುವುದು. ವಲಸೆ ಜೀವನ, ತೀವೃ ಅಂಗವಿಕಲತೆ, ಮಕ್ಕಳ ನಿರಾಸಕ್ತಿ, ಕುಟಂಬದ ಸಮಸ್ಯೆ ಸೇರಿದಂತೆ ಇನ್ನಿತರ ಕಾರಣಗಳಿಂದ ಮಕ್ಕಳು ಶಾಲೆಯಿಂದ ಹೊರಗುಳಿಯಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಗು ಪ್ರೌಢಾವಸ್ಥೆ ತಲುಪಿದ್ದರಿಂದ ಶಾಲೆಗೆ ಕಳುಹಿಸಲು ಪಾಲಕರ ಹಿಂದೇಟು ಒಂದು ಕಾರಣವಾಗಿದೆ.

2018-19ನೇ ಸಾಲಿನ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ಶಿಕ್ಷಣದ ಮುಖ್ಯವಾಹಿನಿಗೆ ತರಲು ವಿಶೇಷ ದಾಖಲಾತಿ ಆಂದೋಲನ ನಡೆಸಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.