ರಾಯಚೂರಲ್ಲಿ ಶೇ.51 ವ್ಯಾಕ್ಸಿನೇಶನ್ ಪ್ರಗತಿ ಸಾಧನೆ
45 ವರ್ಷ ಮೇಲ್ಪಟ್ಟವರಿಗೆ ನಿಯಮಾನುಸಾರ ಜಿಲ್ಲಾದ್ಯಂತ ಲಸಿಕೆ ನೀಡಲಾಗುತ್ತಿದೆ.
Team Udayavani, Jun 22, 2021, 8:01 PM IST
ರಾಯಚೂರು: ಕೋವಿಡ್ ವ್ಯಾಕ್ಸಿನ್ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ರಾಜ್ಯ ಸರ್ಕಾರದಿಂದ 18 ವರ್ಷದಿಂದ 44 ವರ್ಷದೊಳಗಿನ ಆದ್ಯತೆ ಗುಂಪಿನ ಜನರಿಗೆ ವ್ಯಾಕ್ಸಿನೇಶನ್ ನೀಡುತ್ತಿದ್ದು, ಈವರೆಗೆ ಶೇ.51 ರಷ್ಟು ಪ್ರಗತಿ ಸಾ ಧಿಸಲಾಗಿದೆ ಎಂದು ಡಿಸಿ ಆರ್. ವೆಂಕಟೇಶ್ ಕುಮಾರ್ ತಿಳಿಸಿದರು.
ನಗರದ ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಹಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ ವ್ಯಾಕ್ಸಿನ್ ನೀಡುವ ಕುರಿತಂತೆ ಸರ್ಕಾರ ಹಲವು ನಿರ್ದೇಶನಗಳನ್ನು ನೀಡಿದೆ. ಅದರಂತೆ ಆದ್ಯತಾ ಗುಂಪುಗಳು ಹಾಗೂ 45 ವರ್ಷ ಮೇಲ್ಪಟ್ಟವರಿಗೆ ನಿಯಮಾನುಸಾರ ಜಿಲ್ಲಾದ್ಯಂತ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 4.32 ಲಕ್ಷ ಜನರು 45 ವರ್ಷ ಮೇಲ್ಪಟ್ಟವರಿದ್ದಾರೆ. ಅವರಲ್ಲಿ 2.21 ಲಕ್ಷ ಜನರಿಗೆ ಈಗಾಗಲೇ ಲಸಿಕೆ ನೀಡುವ ಮೂಲಕ ಶೇ.51ರಷ್ಟು ಪ್ರಗತಿ ಸಾಧಿ ಸಲಾಗಿದೆ ಎಂದರು.
18 ವರ್ಷದಿಂದ 44 ವರ್ಷದೊಳಗಿನ 9.49 ಲಕ್ಷ ಜನರಿದ್ದು, ಈಗಾಗಲೇ ವಿಕಲಚೇತರು, ಮಂಗಳಮುಖೀಯರು, ಎಪಿಎಂಸಿ ಹಮಾಲರು, ಆರೋಗ್ಯ ಇಲಾಖೆಯ ಸಿಬ್ಬಂದಿ ಕುಟುಂಬಸ್ಥರು, ಪೊಲೀಸ್ ಇಲಾಖೆ ಸಿಬ್ಬಂದಿ ಕುಟುಂಬಸ್ಥರು, ಜೆಸ್ಕಾಂ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಕುಟುಂಬಸ್ಥರು ಸೇರಿದಂತೆ ಆದ್ಯತೆ ಗುಂಪಿನಲ್ಲಿ ಕಾರ್ಯನಿರ್ವಹಿಸುವ 67,280 ಜನರಿಗೆ ಲಸಿಕೆ ನೀಡಲಾಗಿದೆ ಎಂದರು.
ಪ್ರತಿ ಗ್ರಾಪಂ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆರೋಗ್ಯ ಕೇಂದ್ರದಲ್ಲಿ ಏಕಕಾಲಕ್ಕೆ ಅಭಿಯಾನ ಆರಂಭಗೊಂಡಿದ್ದು, 20ರಿಂದ 25 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 45,000 ವೈಲ್ಸ್ಗಳಷ್ಟು ಲಸಿಕೆ ದಾಸ್ತಾನಿದ್ದು, ಮುಂದಿನ ದಿನಗಳಲ್ಲಿ ನಿಯಮಾನುಸಾರ ನೀಡಲಾಗುವುದು ಎಂದರು.
ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ, ರಿಮ್ಸ್ ವೈದ್ಯಕೀಯ ಸಂಸ್ಥೆಯ ನಿರ್ದೇಶಕ ಡಾ| ಬಸವರಾಜ್ ಪಿರಾಪುರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಶಂಕರ್, ಆರ್ಸಿಎಚ್ ಅಧಿಕಾರಿ ಡಾ| ವಿಜಯ ಸೇರಿದಂತೆ ರಿಮ್ಸ್ ಹಾಗೂ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ