ಜಾಗೃತ ಪತ್ರಕರ್ತನಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ


Team Udayavani, Dec 18, 2021, 2:28 PM IST

15journalist

ರಾಯಚೂರು: ಪತ್ರಿಕೋದ್ಯಮ ಒಂದು ಸೇವಾ ಕ್ಷೇತ್ರವಾಗಿದ್ದು, ಸಮಾಜಕ್ಕೆ ಒಳಿತು ಮಾಡಲು ಉತ್ತಮ ವೃತ್ತಿಯಾಗಿದೆ. ಜಾಗೃತ ಪತ್ರಕರ್ತ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಉತ್ತಮ ಬದಲಾವಣೆ ತರಬಲ್ಲ ಎಂದು ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಭಿಪ್ರಾಯ ಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗ, ಕನ್ನಡ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆಯ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಉತ್ತಮ ಬದುಕು ಮತ್ತು ಚಿಂತನೆ’ ಎಂಬ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಮನುಷ್ಯನ ನಿಜವಾದ ಸಾಧನೆ ಮತ್ತು ಸೇವೆ ಮನೆಯಿಂದಲೇ ಪ್ರಾರಂಭವಾಗುತ್ತದೆ. ನಮ್ಮ ಜನನ ಮತ್ತು ಬೆಳವಣಿಗೆಗೆ ಕಾರಣವಾಗಿ, ಸಂಸ್ಕಾರ ನೀಡಿರುವ ತಂದೆ-ತಾಯಿಗಳು ಹಾಗೂ ಕುಟುಂಬವನ್ನು ಎಂದೂ ಮರೆಯಬಾರದು. ನಮ್ಮ ವೃತ್ತಿ ಮತ್ತು ಸಾಧನೆಗಳಿಗೆ ಬುನಾದಿ ಹಾಕಿದ್ದೇ ನಮ್ಮ ವೈಯಕ್ತಿಕ ಬದುಕು. ಅದನ್ನು ಎಂದಿಗೂ ಕಡೆಗಣಿಸಬಾರದು. ಪತ್ರಕರ್ತರು ಸಮಾಜದ ಸುಧಾರಣೆಗೆ ಶ್ರಮಿಸುವುದರ ಜತೆಗೆ ವೈಯಕ್ತಿಕ ಬದುಕಿಗೆ ಆದ್ಯತೆ ನೀಡಬೇಕು ಎಂದರು.

ಹಿರಿಯ ಪತ್ರಕರ್ತ ಬಸವರಾಜ ಸ್ವಾಮಿ ಮಾತನಾಡಿ, ಮನುಷ್ಯ ತಾನೇ ಧರ್ಮಗಳನ್ನು ಹುಟ್ಟುಹಾಕಿ, ತಾನೇ ಮೇಲು-ಕೀಳುಗಳನ್ನು ಹುಟ್ಟಹಾಕಿ ಕಲಹಗಳನ್ನೂ ಮಾಡುತ್ತಿದ್ದಾನೆ. ಮನುಷ್ಯ ತನ್ನ ಅಜ್ಞಾನದಿಂದಾಗಿಯೇ ಇಂದು ಲಿಂಗ ತಾರತಮ್ಯ, ವರ್ಣ ತಾರತಮ್ಯ, ಜಾತಿ ತಾರತಮ್ಯ ಸೇರಿದಂತೆ ಅನೇಕ ಮೇಲು-ಕೀಳುಗಳ ಅನಿಷ್ಟಗಳನ್ನು ಹುಟ್ಟುಹಾಕಿ ಶಾಂತಿ ಕದುಡುತ್ತಿದ್ದಾನೆ. ಮನುಷ್ಯ ಅರಿವಿನ ಪ್ರಾಣಿಯಾಗಿದ್ದರೂ ಅದನ್ನು ಮರೆತು ಮೃಗದಂತೆ ಅನಾಗರಿಕವಾಗಿ ವರ್ತಿಸುತ್ತಿರುವುದೇ ಇಂದು ಸಮಾಜದಲ್ಲಿ ಅನೇಕ ಸಮಸ್ಯೆಗಳು ಸೃಷ್ಟಿಯಾಗಲು ಕಾರಣವಾಗಿದೆ. ವಿದ್ಯಾರ್ಥಿಗಳು ಇದರ ಬಗ್ಗೆ ಎಚ್ಚರವಾಗಿರಬೇಕು ಮತ್ತು ಜಾಗೃತಿ ಬೆಳೆಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಡಾ| ಯಂಕಣ್ಣ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ| ದಸ್ತಗೀರ್‌ ಸಾಬ್‌ ದಿನ್ನಿ ಮಾತನಾಡಿದರು. ವಾಣಿಜ್ಯಶಾಸ್ತ್ರವಿಭಾಗದ ಪ್ರಾಧ್ಯಾಪಕ ಡಾ| ಮಹಂತೇಶ್‌ ಅಂಗಡಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ವಿಜಯ್‌ ಸರೋದೆ, ಸಮಾಜಶಾಸ್ತ್ರ ವಿಭಾಗದ ಡಾ| ಜೆ.ಎಲ್‌.ಈರಣ್ಣ, ಭೀಮಣ್ಣ ಇಟಗಿ, ಪತ್ರಕರ್ತ ಸಂಗಮೇಶ್‌ ವಸ್ತ್ರದ್‌ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.