ಮದವೇರಿದ ಬಿಜೆಪಿ ನಾಯಕರಿಗೆ ತಕ್ಕಪಾಠ

ನಮ್ಮ ಸರಕಾರ 2 ಸಾವಿರ ಕೋಟಿ ರೂ. ಕೊಟ್ಟರೂ ಸ್ವಾರ್ಥಕ್ಕಾಗಿ ಪಕ್ಷಾಂತರ ಮಾಡಿದ್ದಾರೆ.

Team Udayavani, Apr 9, 2021, 6:51 PM IST

Anjaney

ಸಿಂಧನೂರು: ಹಣ ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಇತ್ತೀಚಿನ ಉಪಚುನಾವಣೆಗಳಲ್ಲಿ ಗೆಲುವು ಪಡೆದ ಬಿಜೆಪಿಯವರಿಗೆ ಮದವೇರಿದೆ. ಮಸ್ಕಿ ಕ್ಷೇತ್ರದಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸಿ ಸೊಕ್ಕು ಇಳಿಸಲಿದ್ದಾರೆ ಎಂದು ಶಾಸಕ ಡಾ| ಯತೀಂದ್ರ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಭಿವೃದ್ಧಿ ಕೆಲಸಗಳು ರಾಜ್ಯದಲ್ಲಿ ನಡೆಯುತ್ತಿಲ್ಲ.

ಕೋವಿಡ್‌ ಹೆಸರಿನಲ್ಲಿ ಹಣ ಜೇಬಿಗೆ ಇಳಿಸುತ್ತಿದ್ದಾರೆ. ಈ ಸರಕಾರ ಲೂಟಿಯಲ್ಲಿ ತೊಡಗಿಸಿಕೊಂಡಿದೆ. ವಿಜಯೇಂದ್ರ ಅವರು ಉಪಚುನಾವಣೆಗಳಲ್ಲಿ ಹಣದ ಹೊಳೆ
ಹರಿಸುತ್ತಿದ್ದಾರೆ. ಪ್ರತಾಪ್‌ಗೌಡ ಅವರಿಗೆ ನಮ್ಮ ಸರಕಾರ 2 ಸಾವಿರ ಕೋಟಿ ರೂ. ಕೊಟ್ಟರೂ ಸ್ವಾರ್ಥಕ್ಕಾಗಿ ಪಕ್ಷಾಂತರ ಮಾಡಿದ್ದಾರೆ.ಅವರಿಗೆ ಮತದಾರ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸಿದ್ದರಾಮಯ್ಯ ಸ್ವಜಾತಿ ವಿರೋಧಿಯಲ್ಲ: ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರುಬ ಸಮುದಾಯದ ವಿರೋಧಿ  ಎಂದು
ಟೀಕಿಸುವ ಪರಂಪರೆ ಬೆಳೆಯುತ್ತಿದೆ. ಇದರಲ್ಲಿ ಹುರುಳಿಲ್ಲ. ಅವರು ಎಲ್ಲ ವರ್ಗದ ಎಳ್ಗೆಗೆ ಶ್ರಮಿಸಿದ್ದಾರೆ. ಸಿದ್ದರಾಮಯ್ಯ ಅವರೇ ಕನಕಗುರುಪೀಠ ನಿರ್ಮಿಸಿದವರು. ಸಮ್ಮಿಶ್ರ ಸರಕಾರದಲ್ಲಿ ಕುರುಬ ಸಮಾಜದ ಮೂರು ಜನರನ್ನು ಮಂತ್ರಿ ಮಾಡಿದ್ದರು. ಅನೇಕರಿಗೆ ಟಿಕೆಟ್‌ ಕೊಡಿಸಿದ್ದರು. ಕೆಲವರು ಆತುರ ನಿರ್ಧಾರ ತೆಗೆದುಕೊಂಡು ಪಕ್ಷ ಬಿಟ್ಟು ಹೋಗಿದ್ದಾರೆ ಎಂದರು.

ಬೊಕ್ಕಸಕ್ಕೆ ಹಾನಿ: ಮಾಜಿ ಮಂತ್ರಿ ಎಚ್‌.ಆಂಜನೇಯ ಮಾತನಾಡಿ, ಉಪಚುನಾವಣೆಗಳಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಇದನ್ನು ಜನರು ಗಮನಿಸಬೇಕು. ಪ್ರತಾಪಗೌಡ ಪಾಟೀಲ್ ವಿಭೂತಿ ಹಚ್ಚಿಕೊಂಡು ಮಾರಾಟವಾಗಿದ್ದಾರೆ. ಈಗ ನಾಮ ಹಾಕಿಕೊಳ್ಳಲು ಹೊರಟಿದ್ದಾರೆ. ಅವರು ವೃದ್ಧಾಶ್ರಮ ಸೇರಿ ಬಡ್ಡಿ ವ್ಯವಹಾರ ಮಾಡುವದೇ ಲೇಸು. ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ ಅನುದಾನವನ್ನು ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಅವರನ್ನು ಕೆಲವೊಂದು ಗ್ರಾಮಕ್ಕೆ ಜನರೇ ಬಿಟ್ಟುಕೊಳ್ಳುತ್ತಿಲ್ಲ. ಅವರಿಗೆ ಬುದ್ಧಿ ಕಲಿಸಲು ಕಾಂಗ್ರೆಸ್‌ಗೆ ಜನ ಬೆಂಬಲಿಸಬೇಕು ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವ  ನಾರಾಯಣ, ಶಾಸಕ ಅನಿಲ ಚಿಕ್ಕಮಾದು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ. ನಾಯಕ, ಮಾಜಿ ಅಧ್ಯಕ್ಷ ಎ.ವಸಂತಕುಮಾರ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಖಾಜಿ ಮಲಿಕ್‌ ವಕೀಲರು, ಪ್ರಧಾನ ಕಾರ್ಯದರ್ಶಿ ವೈ. ಅನಿಲಕುಮಾರ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.