ದಢೇಸುಗೂರು ಹೊಳೆಯಲ್ಲಿ ಮೊಸಳೆಗಳ ಹಿಂಡು

ನಿರಾಳಭಾವ ಮೂಡಿದ ಬೆನ್ನಲ್ಲೇ ಮೊಸಳೆ ಹಿಂಡು ಕಾಣಿಸಿಕೊಂಡು ಜನರನ್ನು ಭಯಭೀತಗೊಳಿಸಿದೆ.

Team Udayavani, Sep 6, 2021, 3:22 PM IST

ದಢೇಸುಗೂರು ಹೊಳೆಯಲ್ಲಿ ಮೊಸಳೆಗಳ ಹಿಂಡು

ಸಿಂಧನೂರು: ತಾಲೂಕಿನ ದಢೇಸುಗೂರು ತುಂಗಭದ್ರಾ ನದಿ(ಹೊಳೆ)ಯಲ್ಲಿ ಒಂದೋ, ಎರಡೋ ಮೊಸಳೆ ಕಾಣಿಸುವುದು ಸಾಮಾನ್ಯ. ಆದರೆ ರವಿವಾರ ಬರೋಬ್ಬರಿ 20ಕ್ಕೂ ಹೆಚ್ಚು ಮೊಸಳೆಗಳು ಕಂಡು ಬಂದಿವೆ. ಕಳೆದ ವರ್ಷ ತುಂಗಭದ್ರಾ ಪುಷ್ಕರ ಪುಣ್ಯಸ್ನಾನಕ್ಕೆ ವ್ಯವಸ್ಥೆ ಮಾಡಿದ್ದ ಸ್ಥಳದ ಅನತಿ ದೂರದಲ್ಲೇ ಈ ಮೊಸಳೆಗಳ ಮೆರವಣಿಗೆ ಕಂಡು ಬಂದಿದೆ.

ದಢೇಸುಗೂರು ಸೇತುವೆ ಮೇಲೆ ಸಂಚರಿಸುತ್ತಿದ್ದ ಜನ ಕೆಲ ಹೊತ್ತು ನಿಂತು ವೀಕ್ಷಿಸಿ ಹೋಗಿದ್ದಾರೆ. ಹಲವರು ಈ ಮೊಸಳೆಗಳನ್ನು ಮೊಬೈಲ್‌ಗ‌ಳಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿದ್ದಾರೆ. ಜನರ ಗದ್ದಲ ಹೆಚ್ಚಾಗುತ್ತಿದ್ದಂತೆ ಮೊಸಳೆಗಳು ಬ್ರಿಡ್ಜ್ ಪ್ರದೇಶ ತೊರೆದು ನದಿಯ ಕೆಳಭಾಗಕ್ಕೆ ಪ್ರಯಾಣ ಬೆಳೆಸಿವೆ.

ಕಳೆದ ವರ್ಷ ಒಬ್ಬರು ಬಲಿ: ದಢೇಸುಗೂರು ಗ್ರಾಮಕ್ಕೆ ಹೊಂದಿಕೊಂಡಿರುವ ನದಿಗೆ ದೊಡ್ಡದಾದ ಸೇತುವೆ ಕಟ್ಟಲಾಗಿದೆ. ಈ ಪ್ರದೇಶಸ ಸುತ್ತಲೂ ಮೀನುಗಾರಿಕೆ ನಡೆಯುತ್ತದೆ. ಕಳೆದ ವರ್ಷವಷ್ಟೇ ನದಿ ಪಾತ್ರ ಸಮೀಪ ವ್ಯಕ್ತಿಯೊಬ್ಬರು ಮೊಸಳೆಗೆ ಬಲಿಯಾಗಿದ್ದರು. ಈ ಘಟನೆಯ ಬಳಿಕ ಭೀತಿ ಮೂಡಿತ್ತು. ಕೆಲ ದಿನಗಳ ನಂತರ ಸಹಜ ಸ್ಥಿತಿಗೆ ಮರಳಿದ ನಿರಾಳಭಾವ ಮೂಡಿದ ಬೆನ್ನಲ್ಲೇ ಮೊಸಳೆ ಹಿಂಡು ಕಾಣಿಸಿಕೊಂಡು ಜನರನ್ನು ಭಯಭೀತಗೊಳಿಸಿದೆ.

ಮುನ್ನೆಚ್ಚರಿಕೆಯೊಂದಿಗೆ ಪುಷ್ಕರ: ತಾಲೂಕು ಕಮ್ಮವಾರಿ ಸಂಘದ ವತಿಯಿಂದ 12 ವರ್ಷಕ್ಕೊಮ್ಮೆ ನಡೆಯುವ ತುಂಗಭದ್ರಾ ಪುಷ್ಕರವನ್ನು ದಢೇಸುಗೂರು ಬಳಿಯ ಶಿವ ದೇಗುಲ ಪಕ್ಕದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪುಣ್ಯಸ್ನಾನಕ್ಕೆ ಬರುವ ಜನರ ಭದ್ರತೆ ದೃಷ್ಟಿಯಿಂದ ನದಿಯಲ್ಲಿ ಕಬ್ಬಿಣ ಜಾಲರಿ ಅಳವಡಿಸಲಾಗಿತ್ತು. ಸೀಮಿತ ಪ್ರದೇಶದಲ್ಲಿ ಮಾತ್ರ ಸ್ನಾನಕ್ಕೆ ಅವಕಾಶ ನೀಡಲಾಗಿತ್ತು. ಜತೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ಏನಾದರೂ ಅಚಾತುರ್ಯ ನಡೆದರೆ, ಅದನ್ನು ಪತ್ತೆ ಹಚ್ಚುವ ಉದ್ದೇಶದೊಂದಿಗೆ ಪೊಲೀಸ್‌ ಇಲಾಖೆ ಇಂತಹ ಮುನ್ನೆಚ್ಚರಿಕೆ ಕೈಗೊಂಡಿತ್ತು.

ನದಿ ತೊರೆದ ಮೀನುಗಾರರು: ಸಿರುಗುಪ್ಪ ಹಾಗೂ ಸಿಂಧನೂರು ಭಾಗದಲ್ಲಿ ಇಲ್ಲಿನ ಹೊಳೆ ಮೀನಿಗೆ ಹೆಚ್ಚಿನ ಬೇಡಿಕೆಯಿದೆ. ನೂರಾರು ಕುಟುಂಬಗಳು ಇಂದಿಗೂ ಮೀನುಗಾರಿಕೆಯನ್ನು ನೆಚ್ಚಿಕೊಂಡಿವೆ. ಈ ನಡುವೆ ಹೊಳೆಯಲ್ಲಿ 20ಕ್ಕೂ ಹೆಚ್ಚು ಮೊಸಳೆ ವಿಹರಿಸುತ್ತಿರುವುದನ್ನು ಕಂಡ ಬಳಿಕ ನದಿಗೆ ಇಳಿಯುವುದನ್ನು ಕೈ ಬಿಟ್ಟಿದ್ದಾರೆ. ಮೀನು ಹಿಡಿಯಲು ನದಿಗೆ ಇಳಿಯದಂತೆ ಗ್ರಾಪಂ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ನದಿ ಅಕ್ಕ-ಪಕ್ಕದಲ್ಲಿ ನೀರಾವರಿ ಕೃಷಿ ಜಮೀನು ಹೊಂದಿರುವ ರೈತರು ನದಿಪಾತ್ರದಲ್ಲಿಯೇ ಹೆಚ್ಚಾಗಿ ಸುತ್ತಾಡುತ್ತಾರೆ. ಭಾರಿ ಪ್ರಮಾಣದಲ್ಲಿ ಮೊಸಳೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಜನ ಕಂಗೆಡುವಂತಾಗಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.