ಅಡುಗೆ ಕೆಲಸಗಾರರ ವಯೋನಿವೃತ್ತಿ ಕೈ ಬಿಡಿ


Team Udayavani, Apr 12, 2022, 3:05 PM IST

14protest

ರಾಯಚೂರು: ಬಿಸಿಯೂಟ ಯೋಜನೆ ಶುರುವಾದಾಗಿನಿಂದ ಕೆಲಸ ಮಾಡಿಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ ನಿವೃತ್ತಿ ಮಾಡುತ್ತಿರುವ ಕ್ರಮ ಖಂಡಿಸಿ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಪಬ್ಲಿಕ್‌ ಗಾರ್ಡ್‌ನ್‌ನಿಂದ ಡಿಸಿ ಕಚೇರಿ ಎದುರಿನ ಉದ್ಯಾನವದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿ ಧರಣಿ ನಡೆಸಲಾಯಿತು. ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಮೂಲಕ ಸರ್ಕಾರಕ್ಕೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

19 ವರ್ಷ ಸೇವೆ ಸಲ್ಲಿಸಿದವರನ್ನು ವಯಸಿನ ಕಾರಣವೊಡ್ಡಿ ನಿವೃತ್ತಿ ಮಾಡಲಾಗಿದೆ. ಬಡ, ರೈತ, ಕೃಷಿ ಕೂಲಿಕಾರರ, ದೀನದಲಿತ ಮಕ್ಕಳಿಗೆ ಬಿಸಿಯೂಟ ಮಾಡುವಲ್ಲಿ ಇವರ ಪಾತ್ರ ದೊಡ್ಡದಿದೆ. 2001-02ರಲ್ಲಿ ಅಡುಗೆ ಕೆಲಸಕ್ಕೆ ಸೇರಿದಾಗ ವಿದ್ಯಾಭ್ಯಾಸ ಮತ್ತು ವಯಸ್ಸಿನ ಅರ್ಹತೆ ಮಾತ್ರ ನಿಗದಿ ಮಾಡಲಾಗಿತ್ತು. ಅದರಲ್ಲಿ ನಿವೃತ್ತಿ ವಯಸ್ಸನ್ನು ಸರ್ಕಾರದ ಕೈಪಿಡಿಯಲ್ಲಿ ನಿಗದಿಪಡಿಸಿಲ್ಲ ಎಂದು ವಿವರಿಸಿದರು.

ಬಿಸಿಯೂಟ ನೌಕರರ ನಿವೃತ್ತಿ ವಿಷಯದಲ್ಲಿ ಹಲವು ಬಾರಿ ಸಭೆಗಳಾಗಿವೆ. ಎಲ್‌ಐಸಿ ಮೂಲಕ ವಿಶೇಷ ಪಿಂಚಣಿ ಯೋಜನೆ ರೂಪಿಸಲು ಒಪ್ಪಿಗೆ ಸೂಚಿಸಲಾಗಿತ್ತು. ಇಲಾಖೆ ಅಧಿಕಾರಿಗಳು ಮತ್ತು ನಮ್ಮ ಸಂಘಟನೆಯ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಈ ಎಲ್ಲ ಕ್ರಮಗಳು ಜಾರಿಯಾಗುವ ಮೊದಲೇ ಸರ್ಕಾರ ಏಕಾಏಕಿ ಬಿಸಿಯೂಟ ನೌಕರರನ್ನು ಕೆಲಸದಿಂದ ನಿವೃತ್ತಿ ಮಾಡುತ್ತಿರುವುದು ಖಂಡನೀಯ ಎಂದು ದೂರಿದರು.

ರಾಜ್ಯದಲ್ಲಿ ಸುಮಾರು 11-12 ಸಾವಿರ ನೌಕರರ ಕೆಲಸವನ್ನು ಯಾವುದೇ ನಿವೃತ್ತಿ, ಸೌಲಭ್ಯವಿಲ್ಲದೆ ಸರ್ಕಾರ ತೆಗೆದು ಹಾಕಲು ಮುಂದಾಗಿದೆ. ಸರ್ಕಾರ ಕೂಡಲೇ ಈ ಸುತ್ತೋಲೆ ಹಿಂಪಡೆಯಬೇಕು. ಬಜೆಟ್‌ನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಿಸಿದ 1000 ರೂ. ವೇತನವನ್ನು ಜನವರಿ 2022ರಿಂದ ಅನ್ವಯಿಸಿ ಜಾರಿ ಮಾಡಬೇಕು. ಬಿಸಿಯೂಟ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಸರ್ಕಾರ ನಿವೃತ್ತಿ ವೇತನ ನಿಗದಿ ಮಾಡುವವರೆಗೆ ತಕ್ಷಣದಲ್ಲಿ ಬಿಡುಗಡೆ ಮಾಡುವ ಬಿಸಿಯೂಟ ನೌಕರರಿಗೆ ಒಂದು ಲಕ್ಷ ರೂ. ಇಡಿಗಂಟು ಪರಿಹಾರ ನೀಡಬೇಕು. ಸರ್ಕಾರ ಒಪ್ಪದಿದ್ದರೆ ನಮ್ಮ ಬೇಡಿಕೆಗಳ ಜಾರಿಗಾಗಿ ಆಗ್ರಹಿಸಿ ಏ.18ರಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್‌ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆ ಮುಖಂಡರಾದ ರೇಣುಕಮ, ಮರಿಯಮ್ಮ, ಮಹ್ಮದ್‌ ಅನೀಫ್‌, ಡಿ.ಎಸ್‌. ಶರಣಬಸವ, ವಿಶಾಲಾಕ್ಷಿ, ಶರಣಮ್ಮ ಪಾಟೀಲ್‌, ಶ್ರೀಲೇಖಾ, ಶೋಭಾ, ನಾಗಮ್ಮ, ಅಕ್ಕಮಹಾದೇವಿ, ಕಲ್ಯಾಣಮ್ಮ, ನಾಗರತ್ನ ಸಂತೆಕಲ್ಲೂರು, ಅಕ್ಕಮ್ಮ ಹಟ್ಟಿ, ಗಂಗಮ್ಮ, ರೇಣುಕಾ, ಬಸಮ್ಮ, ತುಳಜಾಬಾಯಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.