ರಾರಾಜಿಸಿದ ತ್ರಿವರ್ಣ ಧ್ವಜ-ದಾಖಲೆ ಬರೆದ ರ್ಯಾಲಿ


Team Udayavani, Aug 13, 2022, 4:30 PM IST

7flag

ಸಿಂಧನೂರು: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಚರಿಸುವುದನ್ನು ನೋಡಿದ್ದ ತಾಲೂಕಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ಹಮ್ಮಿಕೊಂಡಿದ್ದ ತಿರಂಗಾ ಜಾಗೃತಿ ರ್ಯಾಲಿ ಐತಿಹಾಸಿಕ ದಾಖಲೆ ಬರೆಯಿತು.

ಪೂರ್ವಭಾವಿ ಸಭೆಯಲ್ಲಿ ತಾಲೂಕಾಡಳಿತ ಐದಾರು ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಾರೆಂಬ ನಿರೀಕ್ಷೆಯನ್ನು ಹುಸಿಗೊಳಿಸುವುದರೊಂದಿಗೆ ಸಾಗರೋಪಾದಿಯಲ್ಲಿ ವಿದ್ಯಾರ್ಥಿಗಳು ರಾಷ್ಟ್ರ ಬಾವುಟ ಹಿಡಿದು ರ್ಯಾಲಿಗೆ ಆಗಮಿಸಿದರು. ದೇಶ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಗೆ ಸನ್ನದ್ಧವಾಗುತ್ತಿರುವ ಹಿನ್ನೆಲೆಯಲ್ಲಿ ಹರ್‌ ಘರ್‌ ತಿರಂಗಾ ಕಾರ್ಯಕ್ರಮ ಯಶಸ್ವಿಗೊಳಿಸಲು ನಡೆದ ರ್ಯಾಲಿಯೇ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಕಳೆಗಟ್ಟಿಸಿತು.

ಎಲ್ಲೆಡೆ ರಾರಾಜಿಸಿದ ಬಾವುಟ: ನಗರದ 40ಕ್ಕೂ ಹೆಚ್ಚು ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ರಾಷ್ಟ್ರಧ್ವಜದೊಂದಿಗೆ ರ್ಯಾಲಿಗೆ ಕರೆದುಕೊಂಡು ಬರಲಾಗಿತ್ತು. ಬೆಳಗ್ಗೆ 10ಗಂಟೆಯೊತ್ತಿಗೆ ಇಲ್ಲಿನ ತಹಶೀಲ್‌ ಕಚೇರಿಯ ಮಿನಿ ವಿಧಾನಸೌಧ ಮುಂಭಾಗ, ಗೇಟ್‌ ಹೊರಗೆ ಸೇರಿದಂತೆ ರಸ್ತೆಯ ಎಲ್ಲೆಡೆಯೂ ವಿದ್ಯಾರ್ಥಿಗಳ ಸರದಿ ಸಾಲು ಕಂಡುಬಂತು.

ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ ಶಾಸಕ ವೆಂಕಟರಾವ್‌ ನಾಡಗೌಡ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌, ತಹಶೀಲ್ದಾರ್‌, ಪೌರಾಯುಕ್ತರು, ವಿದ್ಯಾರ್ಥಿ ಸಮೂಹವನ್ನು ನೋಡಿ ಸಂತಸಗೊಂಡರು. ವಂದೇ ಮಾತರಂ ಗೀತೆಗೆ ಧ್ವನಿಗೂಡಿಸಿದ ಬಳಿಕ ವಿದ್ಯಾರ್ಥಿಗಳು ಅಲ್ಲಿಂದ ರ್ಯಾಲಿಯನ್ನು ಆರಂಭಿಸಿರು.

3 ಕಿ.ಮೀ. ಉದ್ದಕ್ಕೂ ರ್ಯಾಲಿ: ತಹಶೀಲ್‌ ಕಚೇರಿ ಮುಂಭಾಗದ ಮಹಾತ್ಮಗಾಂಧಿ ವೃತ್ತದ ಮೂಲಕ ವಿದ್ಯಾರ್ಥಿಗಳನ್ನು ರ್ಯಾಲಿಗೆ ತಂಡೋಪ ತಂಡವಾಗಿ ಕಳುಹಿಸಲಾಯಿತು. ಸಾವಿರಾರು ವಿದ್ಯಾರ್ಥಿಗಳು ತಾಸಿನ ಕಾಲ ತಹಶೀಲ್‌ ಕಚೇರಿ ಆವರಣ ಖಾಲಿ ಮಾಡಲು ಸರದಿ ನಿಲ್ಲಬೇಕಾಯಿತು. ಗಾಂಧಿ ವೃತ್ತದಿಂದ ಆರಂಭವಾದ ರ್ಯಾಲಿಯು ಬಸವ ಸರ್ಕಲ್‌, ಬಡಿಬೇಸ್‌, ಹಳೇಬಜಾರ್‌, ಕಿತ್ತೂರು ಚನ್ನಮ್ಮ ಸರ್ಕಲ್‌ ದಾಟಿ ತಹಶೀಲ್‌ ಕಚೇರಿಗೆ ಬಂದಾಗಲೂ ತಹಶೀಲ್‌ ಕಚೇರಿಯಲ್ಲಿ ಸರದಿಗೆ ನಿಂತಿದ್ದ ವಿದ್ಯಾರ್ಥಿಗಳನ್ನು ಕಂಡು ನಗರದ ಜನ ಅಚ್ಚರಿಗೊಂಡರು. 3 ಕಿ.ಮೀ.ನಷ್ಟು ನಗರವನ್ನು ಸುತ್ತುವರಿದ ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮದ ಕಹಳೆ ಮೊಳಗಿಸಿದರು.

ನಾನೆಂದು ಇಂತಹ ರ್ಯಾಲಿಯನ್ನು ನೋಡಿರಲಿಲ್ಲ. ಇದು ಐತಿಹಾಸಿಕ. 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಯುವ ಸಮೂಹ ಕಳೆ ತಂದಿದೆ. ಇದೊಂದು ದಾಖಲೆಯ ದಿನ. -ವೆಂಕಟರಾವ್‌ ನಾಡಗೌಡ, ಶಾಸಕರು, ಸಿಂಧನೂರು

ನಭೋತೋ ನ ಭವಿಷ್ಯತಿ ಎನ್ನುವಂತೆ ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು, ಕಾಲೇಜಿನ ಮುಖ್ಯಸ್ಥರು, ಸಾರ್ವಜನಿಕರು ಯಶಸ್ವಿಗೊಳಿಸಿದ್ದಾರೆ. ಮುಂದಿನ ಕಾರ್ಯಕ್ರಮಕ್ಕೂ ಜನರ ಸಹಕಾರ ಅಗತ್ಯ. -ಮಂಜುನಾಥ ಗುಂಡೂರು, ಪೌರಾಯುಕ್ತರು, ನಗರಸಭೆ ಸಿಂಧನೂರು

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.