ತಂಗಿ ಪ್ರೀತಿಸಿದ ಯುವಕನ ಸಂಬಂಧಿಯ ಬೈಕ್ ಸುಟ್ಟರು
Team Udayavani, Nov 24, 2018, 6:25 AM IST
ಲಿಂಗಸುಗೂರು(ರಾಯಚೂರು): ತಂಗಿಯ ಪ್ರೀತಿಗೆ ವಿರೋಧಿಸಿ ಆಕೆಯ ಅಣ್ಣಂದಿರು ಪ್ರೀತಿಸಿದ ಯುವಕನ ಬೈಕ್ ಸುಟ್ಟು ಹಾಕಿದ ಘಟನೆ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ತಾಲೂಕಿನ ಹಿರೇಉಪ್ಪೇರಿ ಗ್ರಾಮದ ಶ್ರೀಕಾಂತ ಎಂಬ ಯುವಕ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಪ್ರೀತಿಗೆ ಶ್ರೀಕಾಂತನ ಪೋಷಕರು ಒಪ್ಪಿ ಮದುವೆ ಮಾಡುವ ವಿಚಾರವಾಗಿ ಯುವತಿಯ ಪೋಷಕರೊಂದಿಗೆ ಚರ್ಚಿಸಿದ್ದರು.
ಆದರೆ ಯುವತಿ ಪೋಷಕರು ಒಪ್ಪಿರಲಿಲ್ಲ. ಹೀಗಾಗಿ ಪ್ರೀತಿ ಮಾಡುವುದನ್ನು ನಿಲ್ಲಿಸುವಂತೆ ಶ್ರೀಕಾಂತನಿಗೆ ಎಚ್ಚರಿಕೆ ನೀಡಿದ್ದರು. ಆದರೆ ಇವರು ಪ್ರೀತಿ ಮುಂದುವರಿಸಿದ್ದರು. ಶ್ರೀಕಾಂತನ ಸೋದರ ಮಾವ ಕನಕರಾಯ ಆನಾಹೊಸೂರು ಅವರು ರಾಯಲ್ ಎನ್ μàಲ್ಡ್ ಬುಲೆಟ್ ಮೂಲಕ ಲಿಂಗಸುಗೂರಿಗೆ ಬಂದಿದ್ದರು. ಈ ವೇಳೆ ರಾಮನಗೌಡ, ಆದನಗೌಡ, ಬಸನಗೌಡ, ಸುವರ್ಣ ಎಂಬುವರು ಬುಲೆಟ್ಗೆ ಪೆಟ್ರೋಲ್ ಹಾಕಿ ಸುಟ್ಟಿದ್ದರು. ಕನಕರಾಯ ನೀಡಿದ ದೂರಿನನ್ವಯ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್