ಆಂಜನೇಯ ಆರಾಧನೆ ಗುಲಾಮಗಿರಿ ಸಂಕೇತವಲ್ಲ

ಏಕಶಿಲಾ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀ ಸುಬುಧೇಂದ್ರ ತೀರ್ಥರು ಅನಿಸಿಕೆ

Team Udayavani, Mar 15, 2021, 7:25 PM IST

abhaya Anjaneya swami

ರಾಯಚೂರು: ಕೆಲ ವಿಚಾರವಾದಿಗಳು ಶ್ರೀ ಆಂಜನೇಯ ಸ್ವಾಮಿ ಆರಾಧನೆಯನ್ನು ಗುಲಾಮಗಿರಿ ಸಂಕೇತ ಎಂದು ಜರಿಯುತ್ತಾರೆ. ಆದರೆ, ನಾವು ಗುಲಾಮಗಿರಿಯಿಂದ ಮುಕ್ತಿ ಹೊಂದಬೇಕಾದರೆ ಆಂಜನೇಯ ಸ್ವಾಮಿಯನ್ನು ಆರಾಧಿಸಬೇಕು ಎಂದು ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥರು ಅಭಿಪ್ರಾಯ ಪಟ್ಟರು.

ಮಂತ್ರಾಲಯ ಹೊರವಲಯದಲ್ಲಿ ಸ್ಥಾಪಿಸಿದ ಅಭಯಾಂಜನೇಯ ಸ್ವಾಮಿ ಏಕಶಿಲಾ ಮೂರ್ತಿ ಲೋಕಾರ್ಪಣೆ ಸಮಾರಂಭದ ಬಳಿಕ ಆಶೀರ್ವಚನ ನೀಡಿದರು. ಬುದ್ಧಿ, ಮತಿಹೀನ, ಧೈರ್ಯ ಇಲ್ಲದ ವ್ಯಕ್ತಿ ಮಾತ್ರ ಗುಲಾಮನಾಗುತ್ತಾನೆ. ಆದರೆ, ಆಂಜನೇಯ ಸ್ವಾಮಿ ಉಪಾಸನೆಯಿಂದ ಬುದ್ಧಿ, ಧೈರ್ಯ, ಶಕ್ತಿ ಲಭಿಸುತ್ತದೆ. ಅಂಥ ದೇವರ ಆರಾಧನೆ ಎಂದಿಗೂ ಗುಲಾಮಗಿರಿಯ ಸಂಕೇತವಾಗಲು ಸಾಧ್ಯವಿಲ್ಲ ಎಂದರು.

ಆಂಜನೇಯ ಸ್ವಾಮಿ ಇದ್ದಲ್ಲಿ ಹರಿ ನೆಲೆಸುತ್ತಾನೆ. ಹರಿ ಇದ್ದಲ್ಲಿ ಆಂಜನೇಯ ಸ್ವಾಮಿ ಇರುತ್ತಾರೆ. ಭಗವಂತನ ಪೂಜೆಗೆ ಆಂಜನೇಯ ಸ್ವಾಮಿಯೇ ಮಾಧ್ಯಮವಾದರೆ, ಆಂಜನೇಯನ ಆರಾಧನೆಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳೇ ಮಾಧ್ಯಮವಾಗಿದ್ದಾರೆ. ಅಂಥ ಮುಖ್ಯ ಪ್ರಾಣ ದೇವರನ್ನು ಅಭಯಾಂಜನೇಯ ಹೆಸರಿನಲ್ಲಿ ಇಲ್ಲಿ ಪ್ರತಿಷ್ಠಾಪಿಸಲಾಗಿದೆ ಎಂದರು.

ಭಗವಂತ ಎಲ್ಲೆಡೆ ವ್ಯಾಪಿಸಿದ್ದಾನೆ. ಆತನನ್ನು ಒಂದು ಮಾಧ್ಯಮದಲ್ಲಿ ಆರಾಧನೆ ಮಾಡಬೇಕು. ಜನಸಾಮಾನ್ಯರು ಪ್ರತಿಮಾ ಮಾಧ್ಯಮದಲ್ಲಿಯೇ ಭಗವಂತನನ್ನು ಆರಾಧಿ ಸಬೇಕು. ಅದು ಉತ್ತಮ ಮಾಧ್ಯಮವಾಗಿರಬೇಕು. ತರಂಗಗಳು ಗಾಳಿಯಲ್ಲಿ ಬೆರೆತರೂ ಕಣ್ಣಿಗೆ ಕಾಣುವುದಿಲ್ಲ. ಆದರೆ, ಟಿವಿ, ರೇಡಿಯೋ ಮೂಲಕ ಆ ತರಂಗಗಳು ತಮ್ಮ ಅಸ್ತಿತ್ವ ಸಾಕ್ಷಿಕರಿಸಲಿದೆ. ಆ ರೀತಿ ಎಲ್ಲೆಡೆ ಆವರಿಸಿರುವ ಭಗವಂತನನ್ನು ಕಾಣಬೇಕಾದರೆ ಮುಖ್ಯ ಪ್ರಾಣದೇವರೆಂಬ ಮಾಧ್ಯಮದ ಮೂಲಕ ಭಗವಂತನನ್ನು ಪ್ರತಿಷ್ಠಾಪಿಸಿ ಆರಾ ಧಿಸಬೇಕು ಎಂದರು.

ಹರಿವಾಯು ಗುರುಗಳ ಪ್ರೇರಣೆಯಿಂದಲೇ ಇಂಥ ಮಹತ್ಕಾರ್ಯಗಳು ನಡೆಯಲಿದೆ ವಿನಃ ನನ್ನನ್ನು ಸೇರಿದಂತೆ ಜನಸಾಮಾನ್ಯರಿಂದ ಸಾಧ್ಯವಿಲ್ಲ. ಆಂಜನೇಯ ಸ್ವಾಮಿಯೇ ದಾನಿಗಳ ಸ್ವಪ್ನದಲ್ಲಿ ಬಂದು ತಮಗೆ ಬೇಕಾದ ಸೇವೆ ಮಾಡಿಸಿಕೊಂಡಿದ್ದಾನೆ. ದಾನಿಗಳ ಸೇವೆಯಿಂದಲೇ ಇಂಥ ಕಾರ್ಯ ಮಾಡಲು ಸಾಧ್ಯವಾಗಿದೆ ಎಂದರು.

ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ, ಶ್ರೀನಿವಾಸ ಹರೀಶ ಕುಮಾರ, ವಿ.ಶ್ರೀಶಾನಂದ, ಏಕಶಿಲಾ ಶ್ರೀ ಅಭಯ ಆಂಜನೇಯ ದೇವಸ್ಥಾನದ ದಾನಿಗಳು ಹಾಗೂ ದೇವಸ್ಥಾನ ನಿರ್ಮಿಸಿದ ಬೆಂಗಳೂರಿನ ಬಿ.ಕೃಷ್ಣಮೂರ್ತಿ, ಶ್ರೀಮಠದ ವಿದ್ವಾಂಸ ಡಾ| ರಾಜಾ ಎಸ್‌.ಗಿರಿರಾಜಾಚಾರ್‌, ಶ್ರೀಗಳ ಆಪ್ತ ಕಾರ್ಯದರ್ಶಿ ಸುಶಮೀಂದ್ರಾಚಾರ್‌, ಶ್ರೀಮಠದ ಸಂಸ್ಕೃತ ವಿದ್ಯಾಪೀಠದ ಪ್ರಾಚಾರ್ಯ ಎನ್‌. ವಾದಿರಾಜಾಚಾರ್‌ ಸೇರಿದಂತೆ ಮಠದ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.