ರಾಯಚೂರು: ಕಾರು -ಲಾರಿ ಮುಖಾಮುಖಿ ಢಿಕ್ಕಿ; ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು
Team Udayavani, Jul 18, 2022, 11:10 AM IST
ರಾಯಚೂರು: ಕಾರು – ಲಾರಿ ನಡುವೆ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರು ಮುಂಜಾನೆ ( ಜು.18 ರಂದು) ನಡೆದಿದೆ.
ಮೃತರನ್ನು ಮಧ್ಯಪ್ರದೇಶ ಮೂಲದ ಅಮರದೀಪ್ ಸೆಕ್ಸೇನಾ (35), ಪೂರ್ಣಿಮಾ ಸೆಕ್ಸೇನಾ (30) ಮಕ್ಕಳಾದ ಜಿತಿನ್ (12) ಮತ್ತು ಮಾಹೀನ್ (7) ಎಂದು ಗುರುತಿಸಲಾಗಿದೆ.
ಎರಡು ವಾಹನಗಳು ಮುಖಾಮುಖಿ ಢಿಕ್ಕಿಯಾಗಿದ್ದು, ದುರ್ಘಟನೆ ಸಂಭವಿಸಿದೆ. ಮೃತ ನಾಲ್ವರು ಮೂಲದವರು ಎಂದು ಗುರುತಿಸಲಾಗಿದೆ. ಎರಡು ಜೆಸಿಬಿಯಿಂದ ಅಪಘಾತ ವಾಹನಗಳ ತೆರವು ಮಾಡಿದ್ದು, ಮೃತ ದೇಹಗಳನ್ನು ಸಿಂಧನೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!