ಬೆಳೆ ಮಾರಾಟಕ್ಕೆ ಕ್ರಮ: ಪಾಟೀಲ
Team Udayavani, Apr 29, 2020, 5:46 PM IST
ಅಫಜಲಪುರ: ಉಮ್ಮರ್ಗಾ ಗ್ರಾಮದಲ್ಲಿ ಜಿ.ಪಂ ಸದಸ್ಯ ಸುಮಿತ್ ಪಾಟೀಲ ಅವರ ಹೊಲದಲ್ಲಿ ಬೆಳೆದ ಬಾಳೆ ಮಾರಾಟವಾಗದೇ ಗಿಡದಲ್ಲೇ ಕೊಳೆಯುತ್ತಿರುವುದನ್ನು ತೋಟಗಾರಿಕೆ ಇಲಾಖೆ ಅಧಿಕಾರಿ ಶಂಕರಗೌಡ ಪಾಟೀಲ ಪರಿಶೀಲಿಸಿದರು.
ಅಫಜಲಪುರ: ತಾಲೂಕಿನ ಉಮ್ಮರ್ಗಾ ಗ್ರಾಮದಲ್ಲಿ ರೈತರೊಬ್ಬರು ಸುಮಾರು 14 ಎಕರೆಯಲ್ಲಿ ಬೆಳೆದ ಬಾಳೆ ಬೆಳೆಯನ್ನು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಂಕರ ಪಾಟೀಲ
ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟಾವಿಗೆ ಬಂದ ಬಾಳೆಯನ್ನು ಹಾಪಕಾಮ್ಸ್ ಅಥವಾ ದಲ್ಲಾಳಿಗಳಿಂದ ಐದು ರೂ.ಗೆ ಕೆ.ಜಿಯಂತೆ ಮಾರಾಟ ಮಾಡಿಸುವ ವ್ಯವಸ್ಥೆ ಮಾಡಿಸಲಾಗುವುದು ಎಂದು ತಿಳಿಸಿದರು. ಜಿ.ಪಂ ಸದಸ್ಯ ಹಾಗೂ ರೈತ ಸುಮಿತ್ ಪಾಟೀಲ ಅವರ ಹೊಲದಲ್ಲಿ ಬೆಳೆದ ಬಾಳೆ ಮಾರಾಟವಾಗದೆ ಗಿಡದಲ್ಲೇ ಕೊಳೆಯುತ್ತಿರುವ ಕುರಿತು ಮಾಹಿತಿ ಅರಿತು ಭೇಟಿ ನೀಡಿದ್ದೇವೆ. ಅದರಂತೆ ತಾಲೂಕಿನಾದ್ಯಂತ ಇತರ ಬೆಳೆ ಬೆಳೆದ ರೈತರ ಜಮೀನುಗಳಿಗೂ ಭೇಟಿ ನೀಡಿ ಅವರೆಲ್ಲರಿಗೂ ಆತ್ಮಸ್ಥೈರ್ಯ ತುಂಬುತ್ತಿದ್ದೇವೆ. ಅಲ್ಲದೆ ಅವರು ಬೆಳೆದ ಬೆಳೆಯನ್ನು ಮಾರಾಟ ಮಾಡಿಸಲು ವ್ಯವಸ್ಥೆ ಮಾಡಿಸುತ್ತಿದ್ದೇವೆ ಎಂದು ಹೇಳಿದರು.
ಜಿ.ಪಂ ಸದಸ್ಯ ಸುಮೀತ್ ಪಾಟೀಲ ಮಾತನಾಡಿ, 14 ಎಕರೆಯಲ್ಲಿ ಬಾಳೆ ಕೃಷಿ ಮಾಡಿದ್ದೇವೆ. ಸದ್ಯ ಕಾಯಿ ಫಲವತ್ತಾಗಿ ಬೆಳೆದು ಕಟಾವಿಗೆ ಬಂದಿದೆ. ಲಾಕ್ಡೌನ್ ಇರುವುದರಿಂದ ಯಾರೂ ಖರೀದಿಗೆ ಬರುತ್ತಿಲ್ಲ. ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ