ಮತ್ತೆ 68 ಮಂದಿಗೆ ಪಾಸಿಟಿವ್
Team Udayavani, Jul 26, 2020, 10:12 AM IST
ರಾಯಚೂರು: ಜಿಲ್ಲೆಯಲ್ಲಿ ಶನಿವಾರ 68 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ 1,570 ಮಂದಿಗೆ ಸೋಂಕು ತಗುಲಿದಂತಾಗಿದೆ. ಶನಿವಾರ 43 ಜನ ಗುಣಮುಖರಾಗಿದ್ದು, ಈವರೆಗೆ ಒಟ್ಟಾರೆ 841 ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನಿಂದ 35, ಲಿಂಗಸುಗೂರು 46, ಮಾನ್ವಿ 26, ಸಿಂಧನೂರು 52 ಮತ್ತು ರಾಯಚೂರು ತಾಲೂಕಿನಿಂದ 40 ಸೇರಿದಂತೆ 207 ಜನರ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಶನಿವಾರ ಬಂದ ವರದಿಗಳಲ್ಲಿ 526 ನೆಗೆಟಿವ್ ಆಗಿವೆ. ಉಳಿದ 576 ಸ್ಯಾಂಪಲ್ಗಳ ಫಲಿತಾಂಶ ಬರಬೇಕಿದೆ. μವರ್ ಕ್ಲಿನಿಕ್ಗಳಲ್ಲಿಂದು 413 ಜನರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ.
15 ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಸೋಂಕು: ಇಲ್ಲಿನ ಜಿಲ್ಲಾ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕೆಎಸ್ ಐಎಸ್ಎಫ್ ತರಬೇತಿಯ 100 ಪ್ರಶಿರ್ಥಿಗಳಲ್ಲಿ 15 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಮೂರು ದಿನಗಳ ಹಿಂದೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪ್ರಶಿಕ್ಷಣಾರ್ಥಿಗಳಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ತರಬೇತಿ ಕೇಂದ್ರವನ್ನು ಸೀಲ್ಡೌನ್ ಮಾಡಲಾಗಿದೆ. ಸೋಂಕಿತರನ್ನು ಕೊವಿಡ್ ಕೇರ್ ಸೆಂಟರ್ಗೆ ದಾಖಲಿಸಲಾಗಿದೆ. 36 ಜನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. 40 ದಿನಗಳಿಂದ ನಡೆಯುತ್ತಿದ್ದ ತರಬೇತಿ ಶಿಬಿರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.ರೋಗಲಕ್ಷಣ ಇಲ್ಲದವರನ್ನು ಮಾತ್ರ ಕೆಲ ಹೊತ್ತು ಮೈದಾನಕ್ಕೆ ಬಿಡಲಾಗುತ್ತಿದೆ. ತರಬೇತಿ ಕೇಂದ್ರವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ ಎಲ್ಲರನ್ನೂ ಪ್ರತ್ಯೇಕ ಇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು