ವಾಗ್ದ ರಿ: ನೀರಿಗೆ ಹಾಹಾಕಾರ
Team Udayavani, Apr 18, 2020, 4:02 PM IST
ಆಳಂದ: ವಾಗ್ದರಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಜನರು ಪರದಾಡುತ್ತಿದ್ದಾರೆ.
ಆಳಂದ: ಕೊರೊನಾ ವೈರಸ್ ಭೀತಿ ನಡುವೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ತಾಲೂಕಿನ ಕಮಲಾನಗರ ಗ್ರಾ.ಪಂ ವ್ಯಾಪ್ತಿಯ ವಾಗ್ದರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಸುಮಾರು ನಾಲ್ಕು ಸಾವಿರ ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಪ್ರತಿ ಬೇಸಿಗೆಯಲ್ಲಿಯೂ ಇದೇ ಸಮಸ್ಯೆ ಮರುಕಳಿಸುತ್ತದೆ. ಆದರೂ ಸಂಬಂಧಪಟ್ಟವರು ಶಾಶ್ವತ ಕ್ರಮ ಕೈಗೊಂಡಿಲ್ಲ. ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದ ಕೊಳವೆ ಬಾವಿಗೆ ಕಳೆದ 10 ದಿನಗಳಿಂದ ಜನರಿಗೆ ನೀರು ಸಮರ್ಪಕವಾಗಿ ದೊರೆಯದ ಹಿನ್ನೆಲೆಯಲ್ಲಿ ಜನ ಮತ್ತು ಜಾನುವಾರುಗಳು ಪರಿತಪಿಸುವಂತೆ ಆಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ತೆರೆದ ಬಾವಿ ಹಾಗೂ ಕೊಳವೆ ಬಾವಿ ಮೂಲಕ ಜನರು ನೀರು ಪಡೆಯುತ್ತಿದ್ದರು. ಆದರೀಗ ಅವುಗಳು ಬತ್ತಿ ಹೋಗಿವೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ಎಂದು ಗ್ರಾ.ಪಂ ಅಭಿವೃದ್ಧಿ ಅಧಿ ಕಾರಿ ಚಂದ್ರಕಲಾ ಅವರಿಗೆ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ಸಂತೋಷ ವಾಗªರೆ ಆರೋಪಿಸಿದ್ದಾರೆ. ಮನೆಗಳಲ್ಲಿ ನಳದ ವ್ಯವಸ್ಥೆ ಇಲ್ಲ. ಇದ್ದರೂ ಸಾರ್ವಜನಿಕ ಗ್ರಾಮದಲ್ಲಿ ಎರಡು ಟ್ಯಾಂಕ್ಗಳಿದ್ದವು. ಅವುಗಳಿಗೆ ಕಳೆದ 15 ದಿನಗಳಿಂದ ನೀರು ಬರುತ್ತಿಲ್ಲ. ಸಂಬಂಧಿ ತ ಜನಪ್ರತಿನಿಧಿ ಗಳು ಮತ್ತು ಅಧಿಕಾರಿಗಳು ನೀರಿನ ವ್ಯವಸ್ಥೆ ಕೈಗೊಳ್ಳದೇ ಇದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ