ನಾಲ್ಕು ವರ್ಷವಾದ್ರೂ ಅಲೆಮಾರಿಗಳಿಗಿಲ್ಲ ಸೂರು!


Team Udayavani, Jan 20, 2021, 3:29 PM IST

All rights reserved.

ದೇವದುರ್ಗ: ಬರೋಬ್ಬರಿ ನಾಲ್ಕು ವರ್ಷವಾದರೂ ಅಲೆಮಾರಿಗಳ ಸೂರಿನ ಕನಸು ಕನಸಾಗಿಯೇ ಉಳಿದಿದೆ. ಹೌದು, ಪಟ್ಟಣದ ಹೃದಯ ಭಾಗದ ಶಾಂತಿನಗರ ಮಾಳಗಡ್ಡೆಯಲ್ಲಿ ಜೀವನ ಸಾಗಿಸುತ್ತಿರುವ ಅಲೆಮಾರಿಗಳ ಬದುಕು ಅತಂತ್ರ ಸ್ಥಿತಿಯಲ್ಲಿದೆ. 250ಕ್ಕೂ ಹೆಚ್ಚು ಕುಟುಂಬಕ್ಕೆ ಮಾಜಿ ಸಂಸದ ಬಿ.ವಿ. ನಾಯಕ, ಶಾಸಕ ಕೆ. ಶಿವನಗೌಡ ನಾಯಕ ಹಕ್ಕುಪತ್ರ ವಿತರಿಸಿದ್ದಾರೆ.

ಮಾಳಗಡ್ಡೆಯಲ್ಲಿ ಬದುಕು ಸಾಗಿಸುವ ಅಲೆಮಾರಿಗಳಿಗೆ ಈಗಾಗಲೇ ಹಕ್ಕುಪತ್ರ ನೀಡಲಾಗಿದೆ. ರಾಜೀವ್‌ ಗಾಂಧಿ  ನಿಗಮದಿಂದ 2 ಲಕ್ಷ ರೂ. ಪರಿಶಿಷ್ಟ ಜಾತಿ ಅಲೆಮಾರಿ ಕೋಶ 2 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಪ್ರಧಾನಿ ಮಂತ್ರಿ ಆವಾಸ್‌ ಯೋಜನೆಯಿಂದ 1.50 ಲಕ್ಷ ಸೇರಿ ಒಂದು ಕುಟುಂಬಕ್ಕೆ 5.50 ಲಕ್ಷ ರೂ. ಮನೆ ನಿರ್ಮಾಣಕ್ಕೆ ಹಣ ನಿಗದಿ ಮಾಡಲಾಗಿದೆ.

ಅಲೆಮಾರಿ ಕೋಶ ನಿಗಮದಿಂದ ಅನುದಾನ ಬಿಟ್ಟರೆ ಉಳಿದ ನಿಗಮಗಳಿಂದ ಇಲ್ಲಿಯವರೆಗೆ ಅನುದಾನ ಬಿಡುಗಡೆಯಾಗಿಲ್ಲ. ಸ್ವಂತ ಸೂರಿನ ಕನಸು ಕಾಣುತ್ತಿರುವ ಅಲೆಮಾರಿಗಳಿಗೆ ನಾಲ್ಕು ವರ್ಷದಿಂದ ಅದೃಷ್ಟದ ಬಾಗಿಲು ತೆರೆದಿಲ್ಲ.

ಇದನ್ನೂ ಓದಿ:ಗೊಂದಲದ ಗೂಡಾದ ಆಶ್ರಯದ ಅಕ್ರಮವಾಸ!

ಸಮತಟ್ಟು ಮಾಡಲು 25 ಲಕ್ಷ ರೂ: ಮಾಳಗಡ್ಡಿ ಪ್ರದೇಶದಲ್ಲಿ ಎರಡು ಎಕರೆ ಜಾಗೆಯಲ್ಲಿ ಮನೆ ನಿರ್ಮಿಸಲು ಈಗಾಗಲೇ 25 ಲಕ್ಷ ರೂ. ವೆಚ್ಚದಲ್ಲಿ ಮಾಳಗಡ್ಡೆ ಸಮತಟ್ಟು ಮಾಡಲಾಗಿದೆ. ರಾಜ್ಯ ಸರ್ಕಾರ ಅನುದಾನ ನೀಡಿದ್ದು, ಸಮತಟ್ಟು ಮಾಡುವ ಹೊಣೆ ಲ್ಯಾಂಡ್‌ ಆರ್ಮಿಗೆ ವಹಿಸಲಾಗಿತ್ತು. ಇಲ್ಲಿನ ನಿವೇಶನದಲ್ಲಿ ಅಲೆಮಾರಿಗಳಿಗೆ ಸೂರಿನ ಭಾಗ್ಯ ಎಂದು ಕೂಡಿ ಬರಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಅಲ್ಲದೇ ಭೂಮಿ ಸಮತಟ್ಟು ಅನುದಾನದಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಕೂಗು ಕೇಳಿಬಂದಿದೆ. ಬದುಕೇ ಅತಂತ್ರ: ಮಾಳಗಡ್ಡೆ ಪ್ರದೇಶದಲ್ಲಿ ಕಳೆದ 30 ವರ್ಷಗಳಿಂದ 250ಕ್ಕೂ ಹೆಚ್ಚು ಅಲೆಮಾರ ಕುಟುಂಬಗಳು ಹರಕು, ಮುರುಕು, ಗುಡಿಸಲಲ್ಲಿ ವಾಸಿಸುತ್ತಿದ್ದಾರೆ. ನಿವೇಶನ ಸಮತಟ್ಟು ಕೆಲಸದ ಹಿನ್ನೆಲೆ ಇದೀಗ ಖಾಸಗಿ ವ್ಯಕ್ತಿಗಳ ಜಾಗೆಯಲ್ಲಿ ಗುಡಿಸಲು ಹಾಕಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಹಕ್ಕುಪತ್ರಗಳನ್ನು ಕಾಯ್ದಿಟ್ಟುಕೊಳ್ಳುವಷ್ಟು ಸೂಕ್ತ ವ್ಯವಸ್ಥೆ ಇಲ್ಲದೇ ಚಳಿ, ಮಳೆ, ಗಾಳಿಗೆ ಸಿಲುಕಿ ಅತಂತ್ರ ಬದುಕು ಎದುರಿಸುತ್ತಿದ್ದಾರೆ. ವಿಷ ಜಂತುಗಳ ಭಯದಲ್ಲೇ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದಾರೆ ಅಲೆಮಾರಿಗಳು.

ವಿದ್ಯುತ್‌ ಸೌಲಭ್ಯವಿಲ್ಲ: ಅಲೆಮಾರಿ ಕುಟುಂಬಗಳಿಗೆ ಮನೆ ನಿರ್ಮಾಣವಾಗುವವರೆಗೂ ತಾತ್ಕಾಲಿಕವಾಗಿ ಎಲ್ಲೆಂದರಲ್ಲಿ ಖಾಸಗಿ ವ್ಯಕ್ತಿಗಳ ನಿವೇಶನದಲ್ಲಿ ಗುಡಿಸಲು ಹಾಕಿಕೊಂಡು ಜೀವನ ಸಾಗಿಸುತ್ತಿದ್ದಾರೆ. ವಿದ್ಯುತ್‌ ಸೌಲಭ್ಯವಿಲ್ಲದೇ ಕತ್ತಲಲ್ಲೇ ಬದುಕು ಸಾಗಿಸಬೇಕು. ವಾಸಿಸುವ ಪ್ರದೇಶದ ಸುತ್ತಲೂ ಅವ್ಯವಸ್ಥೆ ಇದೆ. ಭೂಮಿ ಸಮತಟ್ಟು ಕೆಲಸ ಅಲ್ಪಸ್ವಲ್ಪ ಬಾಕಿ ಉಳಿದಿದೆ ಎಂಬುವುದು ಗಮನಕ್ಕೆ ಬಂದಿದೆ. ನಿವೇಶನ ಪರಿಶೀಲಿಸಿದ ನಂತರ ಮನೆಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುತ್ತದೆ.

ಈಶ್ವರಪ್ಪ ಕಟ್ಟಿಮನಿ, ಡಾ| ಬಿ.ಆರ್‌. ಅಂಬೇಡ್ಕರ್‌ ನಿಗಮ, ಜಿಲ್ಲಾ ವ್ಯವಸ್ಥಾಪಕ

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.