ಅಗತ್ಯ ಸೌಲಭ್ಯ ಕಲ್ಪಿಸಲು ಅನುದಾನ ಮೀಸಲಿಡಿ


Team Udayavani, Mar 26, 2022, 12:56 PM IST

8facility

ರಾಯಚೂರು: ನಗರದಲ್ಲಿನ ಜ್ವಲಂತ ಸಮಸ್ಯೆಗಳ ವಿಚಾರದಲ್ಲಿ ನಗರಾಡಳಿತ ತೋರಿದ ದಿವ್ಯ ನಿರ್ಲಕ್ಷ್ಯದ ವಿರುದ್ಧ ವಿವಿಧ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಜನರಿಗೆ ಬೇಕಾದ ಯಾವೊಂದು ಸೌಲಭ್ಯ ಕಲ್ಪಿಸುವಲ್ಲಿ ನಗರಸಭೆ ಮುಂದಾಗುತ್ತಿಲ್ಲ ಎಂದು ದೂರಿದರು. ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಜೆಟ್‌ ಪೂರ್ವ ಸಭೆಯಲ್ಲಿ ಒಕ್ಕೋರಲಿನಿಂದ ಒತ್ತಾಯಿಸಿದ ಸಂಘಟನೆಗಳ ಮುಖಂಡರು, ನಗರಸಭೆ ವೈಫಲ್ಯದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ನಗರಸಭೆ ಬಜೆಟ್‌ನಲ್ಲಿ ಶುದ್ಧ ಕುಡಿವ ನೀರು ಪೂರೈಕೆ, ಸ್ವಚ್ಛತೆ, ಕಸ ವಿಲೇವಾರಿ, ಶೌಚಗೃಹ ನಿರ್ಮಾಣ, ಆರೋಗ್ಯ ವಲಯಕ್ಕೆ ಅನುದಾನ ಮೀಸಲಿಡುವಂತೆ ಸಂಘ-ಸಂಸ್ಥೆಗಳು ಒತ್ತಾಯಿಸಿದವು.

ಸಂಘಟನೆ ಮುಖಂಡ ಬಾಸ್ಕರ್‌ ಬಾಬು ಮಾತನಾಡಿ, ಸಫಾಯಿ ಕರ್ಮಚಾರಿಗಳ ಬಡಾವಣೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕು. ಗುರುತಿನ ಚೀಟಿ ನೀಡಿದರೆ ಸರ್ಕಾರಿ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ ಎಂದರು.

ಹೋರಾಟಗಾರ ಎನ್‌. ಮಹಾವೀರ್‌ ಮಾತನಾಡಿ, ನಗರಕ್ಕೆ ಇಂದಿಗೂ ಅಶುದ್ಧ ನೀರು ಪೂರೈಕೆಯಾಗುತ್ತಿದ್ದು, ಶುದ್ಧೀಕರಣ ಮಾಡಿ ಪೂರೈಸಬೇಕು. ಪ್ರತಿ ಬಡಾವಣೆಯಲ್ಲಿ ಎರಡು ಸಾರ್ವಜನಿಕ ಶೌಚಗೃಹ ನಿರ್ಮಿಸುವಂತೆ ಒತ್ತಾಯಿಸಿದರು.

ಸಂಘಟನೆ ಮುಖಂಡ ರಾಜು ಪಟ್ಟಿ ಮಾತನಾಡಿ, ಬಿಆರ್‌ಬಿ ಕಾಲೇಜ್‌ ಹತ್ತಿರದ ಮುಕ್ತಿಧಾಮದಲ್ಲಿ ಶವ ಸಂಸ್ಕಾರ ಮಾಡುವ ವಿದ್ಯುತ್‌ ಯಂತ್ರ ಕೆಟ್ಟುಹೋದ ಪರಿಣಾಮ ಕಟ್ಟಿಗೆ ತಂದು ಶವ ಸಂಸ್ಕಾರ ಮಾಡಲಾಗುತ್ತಿದೆ. ಕೂಡಲೇ ಯಂತ್ರ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ನಗರಸಭೆ ಮಳಿಗೆಗಳ ದುರ್ಬಳಕೆ ತಡೆಯಲು ಕೂಡಲೇ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆಸಬೇಕು. ನಗರಸಭೆ ಸದಸ್ಯರ ಬೆಂಬಲಿಗರೇ ಕಡಿಮೆ ದರಕ್ಕೆ ಮಳಿಗೆ ಪಡೆದು ದುಬಾರಿ ಬಾಡಿಗೆಗೆ ಬೇರೆಯವರಿಗೆ ನೀಡಿದ್ದಾರೆ. ನಗರಸಭೆಗೆ ನಷ್ಟವುಂಟು ಮಾಡಲಾಗುತ್ತಿದೆ. ಅಂಗವಿಕಲರಿಗೆ, ಪರಿಶಿಷ್ಟರಿಗೆ ಮಳಿಗೆಗಳಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

ಕ್ರಾಂತಿಯೋಗಿ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷ ರಾಜೇಶ ಕುಮಾರ ಮಾತನಾಡಿ, ನಗರಸಭೆ ಕಚೇರಿಯಲ್ಲಿ ಶೌಚಗೃಹದ ವ್ಯವಸ್ಥೆ ಮಾಡಬೇಕು. ಮಹಿಳಾ ಸಿಬ್ಬಂದಿಗೆ ಸಮಸ್ಯೆಯಾಗುತ್ತಿದೆ. ನಗರಸಭೆಗೆ ವಿವಿಧ ಕೆಲಸಗಳಿಗೆ ಬರುವ ಮಹಿಳೆಯರಿಗೂ ತೊಂದರೆ ಆಗುತ್ತಿದೆ ಎಂದರು.

ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳ ಜನರಿಗೆ ರುದ್ರಭೂಮಿ ಸಮಸ್ಯೆಯಿದ್ದು, ನಗರಸಭೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಪೌರಾಯುಕ್ತ ಮುನಿಸ್ವಾಮಿ ಮಾತನಾಡಿ, ಎಲ್ಲರ ಸಲಹೆ, ಸೂಚನೆ ಆಲಿಸಿದ್ದು, ಈ ಕುರಿತು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.