ಪಕೋಡ ರಾಜಕೀಯ ಬದಲಿಗೆ ಪರ್ಯಾಯ ಶಕ್ತಿ ಅಗತ್ಯ


Team Udayavani, Feb 10, 2018, 5:05 PM IST

ray-2.jpg

ರಾಯಚೂರು: ದೇಶದಲ್ಲಿ ಪಕೋಡ ರಾಜಕೀಯ ಹೆಚ್ಚುತ್ತಿದ್ದು, ಅದಕ್ಕೆ ಪರ್ಯಾಯವಾಗಿ ಜನಪರ ಸಂಘಟನೆಗಳನ್ನೊಂಡ ಶಕ್ತಿಯ ಅಗತ್ಯವಿದೆ ಎಂದು ಬೆಂಗಳೂರಿನ ಪ್ರಗತಿಪರ ಚಿಂತಕ ಶಿವಸುಂದರ ಟೀಕಿಸಿದರು. ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನಾಂದೋಲನ ಮಹಾಮೈತ್ರಿಯಿಂದ ಶುಕ್ರವಾರ ಆಯೋಜಿಸಿದ್ದ ಜಾಗೃತ ಮತದಾರರ ಸಮಾವೇಶದಲ್ಲಿ ಪರ್ಯಾಯ ರಾಜಕಾರಣದ ಮುನ್ನೋಟ ಕುರಿತು ಮಾತನಾಡಿದರು.

ಅಧಿಕಾರಕ್ಕೆ ಬರುವ ಮುನ್ನ ವರ್ಷಕ್ಕೆರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಪ್ರಧಾನಿ ಮೋದಿ, ಮೂರು ವರ್ಷ ಕಳೆದರೂ ಕ್ರಮ ಕೈಗೊಂಡಿಲ್ಲ. ಈಗ ಪಕೋಡ ಮಾಡುವುದು ಒಂದು ಕೆಲಸ ಎಂದು ಲೇವಡಿಯಾಗಿ ಮಾತನಾಡುತ್ತಿದ್ದಾರೆ. ಹೈ-ಕ ಭಾಗದ ಕೂಲಿ ಕಾರ್ಮಿಕರು ದುಡಿಯಲು ವಲಸೆ ಹೋಗುವ ಪರಿಸ್ಥಿತಿ ತಪ್ಪುತ್ತಿಲ್ಲ. ಜನರ ಹೆಸರಿನಲ್ಲಿ ಪ್ರಮಾಣ ಮಾಡುವ ಅಧಿ ಕಾರಕ್ಕೆ ಬರುವ ಪಕ್ಷಗಳು ಜನ ಹಿತಾಸಕ್ತಿಯನ್ನೇ ಕಡೆಗಣಿಸುತ್ತೇವೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಂಥ ಪರ್ಯಾಯ ಶಕ್ತಿ ರೂಪಿಸಿರುವ ಅಗತ್ಯವಿದೆ.

ಜನಪರ ಕಾಳಜಿ ಹೊಂದಿ ಜನ್ಮತಾಳಿರುವ ಜನಶಕ್ತಿಯಿಂದ ಅನ್ಯಾಯ ತಡೆಗಟ್ಟಲು ಸಾಧ್ಯ ಎಂಬ ವಿಶ್ವಾಸವಿದೆ. ಜನ ಕೂಡ ಪರ್ಯಾಯ ಶಕ್ತಿಗೆ ಅಧಿಕಾರ ಕೊಡುವ ಮೂಲಕ ಹೋರಾಟಗಳಿಗೆ ಧ್ವನಿಯಾಗಬೇಕು ಎಂದು ವಿನಂತಿಸಿದರು. ಜಿಲ್ಲೆಯ ಅಭಿವೃದ್ಧಿ ಅವಲೋಕನ ಕುರಿತು ಟಿಯುಸಿಐ ರಾಜ್ಯಾಧ್ಯಕ್ಷ ಆರ್‌. ಮಾನಸಯ್ಯ ಮಾತನಾಡಿ, ಜನಾಂದೋಲನ ಮಹಾಮೈತ್ರಿ ಹುಟ್ಟಿಕೊಂಡಿರುವುದು ಕೃಷಿಕರ, ಕೂಲಿ ಕಾರ್ಮಿಕರ, ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು. ಇಂದು ದೇಶದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಗಳು ಕಾರ್ಪೋರೇಟ್‌ರ್‌ಗಳ ಬಾಲ ಬಡಿಯುತ್ತಿದ್ದು, ಜನರ ಸಮಸ್ಯೆಗಳನ್ನು ಸಂಪೂರ್ಣ ಕಡೆಗಣಿಸುತ್ತಿವೆ ಎಂದು ಟೀಕಿಸಿದರು.

ರಾಜ್ಯವನ್ನು ಆಳುತ್ತಿರುವ ಹಿಂದೆ ಆಳಿರುವ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮನಸ್ಥಿತಿ ಒಂದೇ. ಜಿಲ್ಲೆಯಲ್ಲಿ ಹೆಚ್ಚುವರಿ ಭೂಮಿ ಇದ್ದರೂ ಭೂ ಹೀನರಿಗೆ ನೀಡಲಾಗುತ್ತಿಲ್ಲ. ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದರೂ ಹಕ್ಕುಪತ್ರ ಸಿಕ್ಕಿಲ್ಲ. ಈ ಬಗ್ಗೆ ಜಿಲ್ಲೆಯ ಒಬ್ಬ ಶಾಸಕರು ಕೂಡ ಧ್ವನಿ ಎತ್ತದಿರುವುದು ದುರಂತ ಎಂದರು. 

ಜನಸಂಗ್ರಾಮ ಪರಿಷತ್‌ನ ಸಂಸ್ಥಾಪಕ ರಾಘವೇಂದ್ರ ಕುಷ್ಟಗಿ ಮಾತನಾಡಿ, ಇಡೀ ಜೀವನವನ್ನೇ ಹೋರಾಟದಲ್ಲಿ ಕಳೆದಿದ್ದೇವೆ. ಆದರೆ, ಬದಲಾವಣೆ ತರಲು ಆಗಿಲ್ಲ. ಹೀಗಾಗಿ ನಾವೇ ಶಕ್ತಿ ಪಡೆಯಲು ರಾಜಕಾರಣಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು. ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್‌ ಮಾತನಾಡಿ, ಲಿಂಗಸುಗೂರು ಕ್ಷೇತ್ರದಿಂದ ಆರ್‌. ಮಾನಸಯ್ಯ, ರಾಯಚೂರು ನಗರ ಕ್ಷೇತ್ರದಿಂದ ಡಾ| ವಿ.ಎ ಮಾಲಿಪಾಟೀಲ್‌ ನಮ್ಮ ಜನಶಕ್ತಿ ಅಭ್ಯರ್ಥಿಗಳಾಗಿದ್ದಾರೆ. ಉಳಿದ ಕ್ಷೇತ್ರಗಳಿಗೆ
ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. 

ಸಿಪಿಐ(ಎಂ) ಬಿ.ರುದ್ರಯ್ಯ, ವಿವಿಧ ಸಂಘಟನೆಗಳ ಮುಖಂಡ ಮಹ್ಮದ್‌ ತಮೀಜುದ್ದೀನ್‌, ಕೆ.ರಾಮಕೃಷ್ಣ, ಮೋಕ್ಷಮ್ಮ, ವಿದ್ಯಾಪಾಟೀಲ್‌, ಕೆ.ನಾಗಲಿಂಗಸ್ವಾಮಿ, ಜೆ.ಬಿ.ರಾಜು, ಲಕ್ಷ್ಮಣಗೌಡ ಕಡಗಂದೊಡ್ಡಿ, ಖಾಜಾ ಅಸ್ಲಾಂ ಮಹ್ಮದ್‌, ರವೀಂದ್ರನಾಥ ಪಟ್ಟಿ, ಅಜೀಜ್‌ ಜಾಹಗೀರದಾರ, ಬಿ.ಬಸವರಾಜ, ಜಿ.ಅಮರೇಶ ಇತರರಿದ್ದರು. ಎಂ.ಆರ್‌.ಬೇರಿ ನಿರೂಪಿಸಿದರು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.