ಸಮಾನತೆಗಾಗಿ ಅಂಬೇಡ್ಕರ್‌ ಹೋರಾಟ


Team Udayavani, Apr 15, 2018, 3:02 PM IST

ray-1.jpg

ರಾಯಚೂರು: ದೇಶದಲ್ಲಿ ಎರಡು ಮಹತ್ವದ ಚಳವಳಿಗಳು ನಡೆದಿವೆ. ಒಂದು ಗಾಂಧೀಜಿಯವರು ಬ್ರಿಟಿಷರ ವಿರುದ್ಧ ನಡೆಸಿದರೆ, ಅಂಬೇಡ್ಕರ್‌ ಅವರು ದೇಶದ ಒಳಗಡೆ ಪುರೋಹಿತ ಶಾಹಿ ಹಾಗೂ ಮೇಲ್ವರ್ಗದವರ ವಿರುದ್ಧ ಸಾಮಾಜಿಕ ಸಮಾನತೆಗಾಗಿ ಮಾಡಿದ ಹೋರಾಟ. ಅಂಥ ಹೋರಾಟಗಾರರನ್ನು ಕೇವಲ ಆಚರಣೆಗೆ ಮಾತ್ರ ಸೀಮಿತಗೊಳಿಸುತ್ತಿರುವುದು ಬೇಸರದ ಸಂಗತಿ ಎಂದು ಚಿತ್ತಾಪುರ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ| ಶರಣಪ್ಪ ಸೈದಾಪುರ ಹೇಳಿದರು.

ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ 127ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. 

ಡಾ| ಅಂಬೇಡ್ಕರ್‌ ಅವರ ತತ್ವ ಮತ್ತು ಸಿದ್ಧಾಂತಗಳನ್ನು ಅನುಷ್ಠಾನಗೊಳಿಸಿದಾಗ ಮಾತ್ರ ಸಮಾಜದಲ್ಲಿ ಪರಿವರ್ತನೆ ಸಾಧ್ಯ. ಶತಮಾನಗಳಿಂದ ಸೌಲಭ್ಯ ವಂಚಿತ ಸಮುದಾಯಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಶಿಕ್ಷಣ ಸಿಗುತ್ತಿಲ್ಲ. ಗುಪ್ತರ ಯುಗವನ್ನು ಸುವರ್ಣಯಗ ಎಂದು ಇತಿಹಾಸದಲ್ಲಿ ತಿಳಿದುಕೊಂಡಿದ್ದೇವೆ. 21ನೇ ಶತಮಾನ ದಲಿತರಿಗೆ ಸುವರ್ಣಯುಗವಾಗಿದೆ ಎಂದು ವಿಶ್ಲೇಷಿಸಿದ ಅವರು, ಶೋಷಿತರು ನಡೆದು ಬಂದ ದಾರಿ ಹಾಗೂ ಇತಿಹಾಸ ಮೆಲಕು ಹಾಕುವ ಮಹತ್ವದ ದಿನವೇ ಡಾ| ಅಂಬೇಡ್ಕರ್‌ ಜಯಂತ್ಯುತ್ಸವ ವಿಶೇಷತೆಯಾಗಿದೆ ಎಂದರು.

1964ರಲ್ಲಿ ಜಾರಿಗೆ ಬಂದ ಕೊಠಾರಿ ಆಯೋಗವು ಅಂಬೇಡ್ಕರ್‌ ಅವರ ಶಿಕ್ಷಣದ ಕನಸಿಗೆ ಪೂರಕವಾಗಿ ಕೆಲಸ ಮಾಡಿತ್ತು. ಏಳು ದಶಕಗಳು ಕಳೆದರೂ ದಲಿತರ ಸಾಕ್ಷರತೆ ಪ್ರಮಾಣ ದೇಶದಲ್ಲಿ ಶೇ.50ರಷ್ಟು ಗುರಿ ಸಾಧಿಸಿಲ್ಲ. ಸಾಮಾಜಿಕ ಸಮಾನತೆಗಾಗಿ ಅಂಬೇಡ್ಕರ್‌ ಅವರು ಅಂತರ್ಜಾತಿ ವಿವಾಹಕ್ಕೆ ಒತ್ತು ನೀಡಿದ್ದರು. ದಲಿತರಿಗೆ ರಾಜಕೀಯ ಸ್ವಾತಂತ್ರ್ಯ ನೀಡಿದರೆ ಸಾಲದು ಅವರಿಗೆ ಆರ್ಥಿಕ ಸಮಾನತೆ ನೀಡುವುದು ಅಗತ್ಯ ಎಂದರು.

ಅಂಬೇಡ್ಕರ್‌ ಅವರ ವಾದಕ್ಕೆ ಮನುವಾದ, ಕೋಮುವಾದ ಹಾಗೂ ಜಾತಿವಾದವೇ ಶತ್ರುಗಳು. ಕೋಮುವಾದ ಸಮಾಜವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಇವುಗಳನ್ನು ಅಂಬೇಡ್ಕರ್‌ ಅವರು ಕಟುವಾಗಿ ವಿರೋಧಿಸಿದ್ದರು ಎಂದರು. ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ| ಅಂಬೇಡ್ಕರ್‌ ವೃತ್ತದಲ್ಲಿರುವ ಬಾಬಾ ಸಾಹೇಬ್‌ ಅಂಬೇಡ್ಕರ್‌ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಹಾರ ಹಾಕಿ ಗೌರವ ಸಲ್ಲಿಸಿ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.

ಜಿಪಂ ಸಿಇಒ ಅಭಿರಾಂ ಜಿ.ಶಂಕರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ್‌ ಬಾಬು ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ದಲಿತ ಸಂಘಟನೆಗಳ ಮುಖಂಡರಾದ ರವೀಂದ್ರ ಪಟ್ಟಿ, ಆದೆಪ್ಪ ಕಾಡ್ಮೂರು, ಮಲ್ಲೇಶ ಕೊಲಿಮಿ, ಬಸವರಾಜ, ತಿಮ್ಮಾರೆಡ್ಡಿ, ಪ್ರಾಣೇಶ, ಕೆ.ಕುಮಾರ್‌ ಇತರರಿದ್ದರು. 

ಗಣ್ಯರಿಂದ ಮಾಲಾರ್ಪಣೆ: ನಗರದ ಅಂಬೇಡ್ಕರ್‌ ವೃತ್ತದಲ್ಲಿರುವ ಡಾ| ಬಾಬಾ ಸಾಹೇಬ್‌ ಪ್ರತಿಮೆಗೆ ಅಧಿಕಾರಿಗಳು, ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಾನಾ ಸಂಘಟನೆಗಳ ದಲಿತ ಮುಖಂಡರು ಸೇರಿ ಅನೇಕ ಗಣ್ಯರು ಮಾರ್ಲಾರ್ಪಣೆ ಮಾಡಿದ್ದರಿಂದ ಪ್ರತಿಮೆ ಮಾಲೆಗಳಲ್ಲಿ ಮುಳುಗಿ ಹೋಗಿತ್ತು. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.