
ಗುರುಗುಂಟಾ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಸೇವೆಗೆ ಚಾಲನೆ
Team Udayavani, Jan 16, 2022, 5:43 PM IST

ಲಿಂಗಸುಗೂರು: ಶಾಮ್ ಪ್ರಸಾದ ಮುಖರ್ಜಿ ರೂರ್ಬನ್ ಮಿಷನ್ನಡಿಯಲ್ಲಿ ರಾಜ್ಯದಲ್ಲಿ ಏಕೈಕ ಕ್ಲಸ್ಟರ್ ಗುರುಗುಂಟಾ ಆಯ್ಕೆ ಮಾಡಲಾಗಿದೆ ಎಂದು ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ ಹೇಳಿದರು.
ಗುರುಗುಂಟಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಸಂಸದರ ನಿಧಿ ಹಾಗೂ ರೂರ್ಬನ್ನಡಿಯಲ್ಲಿ ಎರಡು ಆಂಬ್ಯುಲೆನ್ಸ್ಗಳಿಗೆ ಚಾಲನೆ ಹಾಗೂ ಶಾಮ್ ಪ್ರಸಾದ ಮುಖರ್ಜಿ ರೂರ್ಬನ್ ಮಿಷನ್ ನಡಿ 21 ಲಕ್ಷ ರೂ. ವೆಚ್ಚದ ವೈದ್ಯಕೀಯ ಸಲಕರಣೆಗಳ ಕೊಠಡಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಡೀ ರಾಜ್ಯಕ್ಕೆ ರೂರ್ಬನ್ ಕ್ಲಸ್ಟರ್ ಅದು ಗುರುಗುಂಟಾ ಆಯ್ಕೆ ಮಾಡಲಾಗಿದೆ. ಈ ಯೋಜನೆಯಡಿ ಪಶು ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದುಲ್ಲದೆ ಗುರುಗುಂಟಾ ಗ್ರಾಮದಲ್ಲಿ ತರಕಾರಿ ಮಾರುಕಟ್ಟೆ ಹಾಗೂ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಯಾಗಿದೆ. ಆದರೆ ನಿವೇಶನ ಕೊರತೆಯಿದೆ. ಗ್ರಾಮಸ್ಥರು ಗ್ರಾಮದ ಅಭಿವೃದ್ಧಿಗಾಗಿ ನಿವೇಶನಗಳನ್ನು ಒದಗಿಸಿದರೆ ಕೂಡಲೇ ಕಾಮಗಾರಿ ಆರಂಭ ಮಾಡಿಸುವೆ ಎಂದರು.
ಸಂಸದ್ ಸಂಕುಲ್ ಯೋಜನೆಯಡಿ ಪರಿಶಿಷ್ಟ ಪಂಗಡದವರು ಹೆಚ್ಚು ಜನಸಂಖ್ಯೆ ಇರುವ ತಾಲೂಕಿನ 15 ಗ್ರಾಪಂಗಳನ್ನು ಆಯ್ಕೆ ಮಾಡಿಡಲಾಗಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯಡಿ ಕಾರ್ಯಕ್ರಮ ಜಾರಿಗೆ ತರಲಾಗುತ್ತಿದೆ ಎಂದರು.
ರಾಜಾ ಶ್ರೀನಿವಾಸ ನಾಯಕ, ರಾಜಾ ಸೋಮನಾಥ ನಾಯಕ, ಗಜೇಂದ್ರ ನಾಯಕ, ಡಾ| ಅಮರೇಶ ಪಾಟೀಲ್, ಡಾ| ರುದ್ರಗೌಡ ಪಾಟೀಲ್, ಡಾ| ಅಬಿಜೀತ್ ನಾಯಕ, ಪ್ರಾಣೇಶ ಜೋಷಿ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery ವಿಚಾರದಲ್ಲಿ ಸಿಎಂ ಕಠಿಣ ನಿಲುವಿಗೆ ಬೆಂಬಲ: ಮಧು ಬಂಗಾರಪ್ಪ

Mantralayam: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೆತ್ತವರಿಂದ ಮಂತ್ರಾಲಯ ರಾಯರ ದರ್ಶನ

Hattigani: ಹಟ್ಟಿಗಣಿಯಲ್ಲಿದೆ “ಕಲ್ಲಿನ ಗ್ರಂಥಾಲಯ’

Sanatana Remark; ಸನಾತನ ಧರ್ಮ ಟೀಕಿಸುವವರಗೆ ಏಡ್ಸ್, ಕುಷ್ಠ ರೋಗ ಬಂದಿದೆ: ಶಾಸಕ ಯತ್ನಾಳ್

Raichur; ವೈದ್ಯನ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ