ಕನ್ನಡ ಶಾಲೆಗಳ ಉಳಿಸಲು ಒತ್ತಾಯಿಸಿ ಮನವಿ
Team Udayavani, Feb 19, 2022, 1:25 PM IST
ರಾಯಚೂರು: ನಿರ್ಲಕ್ಷ್ಯಕ್ಕೆ ತುತ್ತಾಗಿರುವ ಕನ್ನಡ ಶಾಲೆಗಳ ಉಳಿವಿಗಾಗಿ ತುಮಕೂರಿನ ರಾಹುಲ್ ಎಸ್ ಸೈಕಲ್ ನಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಈ ಕುರಿತು ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕನ್ನಡ ಶಾಲೆಗಳ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿ ಹೆಚ್ಚಾಗುತ್ತಿದ್ದು, ಕನ್ನಡ ಶಾಲೆಗಳು ಅಳಿವಿನ ಅಂಚಿಗೆ ತಲುಪಿವೆ. ಅನೇಕ ಶಾಲೆಗಳಿಗೆ ಸರ್ಕಾರದಿಂದ ಬರುವ ಅನುದಾನ ಸಕಾಲಕ್ಕೆ ಬರದೆ ಶಾಲಾಭಿವೃದ್ಧಿ ಕುಂಠಿತಗೊಂಡಿದೆ ಎಂದು ಸಮಸ್ಯೆ ವಿವರಿಸಿದರು.
ರಾಜ್ಯದ ಅನೇಕ ಶಾಲೆಗಳಿಗೆ ಶಿಕ್ಷಕರ ಕೊರತೆ ಇದೆ. ಶಾಲಾ ಕೊಠಡಿ, ಶೌಚಗೃಹ ಇಲ್ಲ. ಕೂಡಲೇ ಸರ್ಕಾರಿ ಶಾಲೆಗಳಿಗೆ ಅಗತ್ಯ ಅನುದಾನ ಕಲ್ಪಿಸಬೇಕು ಹಾಗೂ ಮುಚ್ಚುತ್ತಿರುವ ಕನ್ನಡ ಶಾಲೆಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ವಿವಿಧ ಸಂಘಟನೆಗಳ ಮುಖಂಡರಾದ ಎಸ್. ಶಿವಕುಮಾರ ಯಾದವ್, ಸದಸ್ಯರಾದ ಮುರಳಿ ಕಟ್ಟಿಮನಿ, ಜಿಯಾ ಉಲ್ ಹಕ್ ಸೌದಾಗರ, ಜಾಫರ್ ಶರೀಫ್, ರಘು, ವೆಂಕಟೇಶ ನಾಯಕ, ಸುರೇಶ, ಶ್ರೀಕಾಂತ, ಸುರೇಶ ಮಡಿವಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!