ಬಳೆ ಕುಟುಂಬದ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ
Team Udayavani, Nov 22, 2021, 2:59 PM IST
ದೇವದುರ್ಗ: ಮದುವೆ ಮಾಡುವುದು, ಮನೆ ಕಟ್ಟುವುದು ಬಡವರ ಪಾಲಿಗೆ ಕಷ್ಟವೇ ಸರಿ. ಮಠ-ಮಾನ್ಯಗಳು ಮಾಡಬೇಕಾದಂತಹ ಸಾಮೂಹಿಕ ವಿವಾಹಗಳು ಬಳೆ ಕುಟುಂಬದವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ತಾಲೂಕಿನ ಮಸರಕಲ್ ಗ್ರಾಮದ ಹೊರವಲಯದ ಮರಸಿಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿರುಪಾಕ್ಷಪ್ಪ ಬಳೆ ಕುಟುಂಬದ ಮದುವೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂದೆ, ತಾಯಿ ಆಸ್ತಿಯಿಂದ ಮದುವೆ ಆಗುವ ಬದಲು ಸ್ವಂತ ಶಕ್ತಿ ಮೇಲೆ ದುಡಿದು ಮದುವೆ ಮಾಡಿಕೊಳ್ಳಬೇಕು. ವರದಕ್ಷಿಣೆ ಕಿರುಕುಳ ನೀಡದೇ, ಕಾನೂನು ವಿರುದ್ಧ ಹೋಗದೇ ಸ್ವಂತ ಬಲದಿಂದಲೇ ಬದುಕು ಕಟ್ಟಿಕೊಳ್ಳಲು ಮುಂದಾಗಿ. ಪ್ರತಿಯೊಬ್ಬರಲ್ಲೂ ಸಂಸ್ಕಾರ, ಸಮಾನತೆ, ಬೇಧಭಾವ ಮಾಡದೇ ಎಲ್ಲರನ್ನೂ ಒಂದೇ ಭಾವನೆಯಿಂದ ನೋಡುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಬಸವರಾಜ ಪಾಟೀಲ್ ಇಟಗಿ ಮಾತನಾಡಿ, ಸಾಮೂಹಿಕ ವಿವಾಹಗಳ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಲಾಗುತ್ತದೆ. ಇಂತಹ ಕಾರ್ಯಕ್ರಮ ಆಯೋಜಿಸುವುದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 70 ನವ ಜೋಡಿಗಳು ದಾಂಪತ್ಯ ಜೀವಕ್ಕೆ ಕಾಲಿಟ್ಟರು. ಇದೇ ಸಂದರ್ಭದಲ್ಲಿ ವೀರತಪಸ್ವಿ ವೀರಭದ್ರ ಶಿವಾಚಾರ್ಯರು, ಶುಂಭು ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ಬೂದಿಬಸವೇಶ್ವರ ಸ್ವಾಮಿಗಳು, ಮುರುಘೇಂದ್ರ ಸ್ವಾಮಿಗಳು, ಸೋಮಶೇಖರ ಸ್ವಾಮಿಗಳು, ಶಿವಣ್ಣತಾತಾ ಮುಂಡರಗಿ, ಸಾಂಬಯ್ಯಪ್ಪ ಜಾಗಟಗಲ್, ಲಿಂಗಯ್ಯ ಪಟ್ಟದ ಪೂಜಾರಿ ಮಸರಕಲ್, ಕರೆಮ್ಮ ಗೋಪಾಲಕೃಷ್ಣ, ಪುರಸಭೆ ಅಧ್ಯಕ್ಷ ಹನುಮಗೌಡ ಶಂಕರಬಂಡಿ, ವಿರುಪಾಕ್ಷಪ್ಪ ಬಳೆ, ಸುನಂದ ಬಳೆ, ಮಹಾಂತೇಶ ಅತ್ತನೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!