ಸಕಲ ಸರ್ಕಾರಿ ಗೌರವ, ಕೋವಿಡ್ 19 ನಿಯಮಾನುಸಾರ ಅಶೋಕ್ ಗಸ್ತಿ ಅಂತ್ಯಕ್ರಿಯೆ
Team Udayavani, Sep 18, 2020, 2:39 PM IST
ರಾಯಚೂರು: ಕೋವಿಡ್-19 ನಿಂದಾಗಿ ಮೃತಪಟ್ಟ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ಅವರ ಪಾರ್ಥಿವ ಶರೀರವನ್ನು ಜಿಲ್ಲಾಡಳಿತದ ವತಿಯಿಂದ ಸಕಲ ಸರ್ಕಾರಿ ಗೌರವ ಹಾಗೂ ಕೋವಿಡ್ 19 ನಿಯಮಾವಳಿ ಪ್ರಕಾರ ತಾಲೂಕಿನ ಪೋತಗಲ್ ಗ್ರಾಮದಲ್ಲಿ ಕಾಯ್ದಿರಿಸಿದ ಸ್ಥಳದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಶೋಕ್ ಗಸ್ತಿ ಅವರು ನಿನ್ನೆ ರಾತ್ರಿ 10.30ರ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಅಂಬ್ಯುಲೆನ್ಸ್ ಮೂಲಕ ನಗರಕ್ಕೆ ತರಲಾಗಿತ್ತು. ನಗರದ ಆರ್.ಟಿ.ಓ ವೃತ್ತದಲ್ಲಿ ಕೆಲ ಕ್ಷಣ ವಾಹನ ನಿಲ್ಲಿಸಿ ಅವರ ಅಭಿಮಾನಿಗಳು ಹಾಗೂ ಸಮಾಜದವರಿಂದ ಸಂತಾಪ ಸೂಚಿಸಿದರು. ನಂತರ ನೇರವಾಗಿ ಅವರ ಪಾರ್ಥಿವ ಶರೀರವು ತಾಲೂಕಿನ ಪೋತಗಲ್ ಗ್ರಾಮದಲ್ಲಿ ಕೋವಿಡ್ ನಿಯಮಗಳ ಪ್ರಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು.
ಇದನ್ನೂ ಓದಿ: ಲಾಕ್ ಡೌನ್ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಗೆ 1500 ಕೋಟಿ ರೂ. ನಷ್ಟ
ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಡಾ. ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಎಸ್ಪಿ ಪ್ರಕಾಶ ನಿಕ್ಕಂ, ಡಿಎಚ್ಒ ಡಾ. ರಾಮಕೃಷ್ಣ, ಸಹಾಯಕ ಆಯುಕ್ತ ಸಂತೋಷ್, ತಹಶಿಲ್ದಾರ ಡಾ. ಹಂಪಣ್ಣ, ಕುಟುಂಬದ ಸದಸ್ಯರು ಸ್ಥಳದಲ್ಲಿದ್ದರು.
ಅದಕ್ಕೂ ಮುಂಚೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಗಸ್ತಿ ನಿಧನಕ್ಕೆ ಬಿಜೆಪಿ ಮುಕಂಡರು ಕಾರ್ಯಕರ್ತರು ಹಾಗು ಸವಿತಾ ಸಮಾಜದವದರಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ