8 ಅಂಗಡಿಗಳಲ್ಲಿ ಸರಣಿ ಕಳ್ಳತನಕ್ಕೆ ಯತ್ನ
Team Udayavani, Jul 4, 2022, 6:02 PM IST
ಲಿಂಗಸುಗೂರು: ಪಟ್ಟಣದ ವಿವಿಧೆಡೆಯಲ್ಲಿ ಎಂಟು ಅಂಗಡಿಗಳಲ್ಲಿ ಕೀಲಿ ಮುರಿದು ಕಳುವಿಗೆ ಯತ್ನ ನಡೆದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ.
ಪಟ್ಟಣದ ಅಂಚೆ ಕಚೇರಿ, ಸರ್ಕಾರಿ ಆಸ್ಪತ್ರೆ, ಕಲಬುರಗಿ ರಸ್ತೆಯಲ್ಲಿರುವ ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಬಾಲಾಜಿ ಕೃಷಿ ಕೇಂದ್ರದ ಕೀಲಿಮುರಿದು ಅದರಲ್ಲಿ ಒಂದು ಖಾಲಿ ಕ್ಯಾಶ್ ಬ್ಯಾಗ ತೆಗೆದುಕೊಂಡು ಹೋಗಿದ್ದಾರೆ. ಯಾವುದೇ ವಸ್ತುಗಳ ಕಳ್ಳತನವಾಗಿಲ್ಲವೆಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.
ಮ್ಯಾಂಗೊಕಿಡ್ಸ್ ಬಟ್ಟೆ ಅಂಗಡಿ, ಶ್ರೀ ಸಾಯಿ ಕ್ಲಿನಿಕ್ನ ಔಷಧ ಅಂಗಡಿ, ಸಿಮೆಂಟ್ ಅಂಗಡಿ ಸರಕಾರಿ ಆಸ್ಪತ್ರೆಯ ಹತ್ತಿರದ ಔಷಧ ಅಂಗಡಿ ಕಲಬುರಗಿ ರಸ್ತೆಯ ಪಕ್ಕದಲ್ಲಿರುವ ಸಾವುಜಿ ಖಾನಾವಳಿ ಹೀಗೆ ಹಲವಾರು ಕಡೆಯಲ್ಲಿ ಸರಣಿ ಕಳ್ಳತನ ಯತ್ನ ನಡೆದಿದೆ. ಅಂಗಡಿಯೊಂದರಲ್ಲಿ ಒಂದೂವರೆ ಲಕ್ಷ ಹಣ ಡ್ರಾದಲ್ಲಿ ಇಡಲಾಗಿತ್ತು. ಆದರೆ, ಕಳ್ಳರು ಅದನ್ನು ತೆಗೆಯಲು ಸಾಧ್ಯವಾಗದೆ ಹಣ ಉಳಿದುಕೊಂಡಿರುವುದರಿಂದ ಅದರ ಮಾಲೀಕರು ನಿಟ್ಟಿಸಿರು ಬಿಡುವಂತಾಗಿದೆ.
ಸಾವುಜಿ ಖಾನಾವಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿ ದೇವರ ಕಾಣಿಕೆ ಡಬ್ಬವನ್ನು ಎತ್ತಿಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ