ಶಾಲೆಗೆ ಚಕ್ಕರ್‌-ವೇತನಕ್ಕೆ ಹಾಜರ್‌

•ಒಂದು ವರ್ಷದಿಂದ ಗೈರಾದ ಸಹ ಶಿಕ್ಷಕ

Team Udayavani, Jul 9, 2019, 11:59 AM IST

rc-tdy-2..

ಮುದಗಲ್ಲ: ಹಿರೇಲೆಕ್ಕಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಲ್ಲದೆ ಆವರಣದಲ್ಲಿ ಆಟವಾಡುವ ಮಕ್ಕಳು.

ಮುದಗಲ್ಲ: ಸಮೀಪದ ಹಿರೇಲೆಕ್ಕಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಳೆದ ಎರಡು ದಿನಗಳಿಂದ ಶಿಕ್ಷಕರು ಬಾರದ್ದರಿಂದ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿಯೇ ಕಾಲ ಕಳೆಯುವಂತಾಗಿದೆ.

ಹಿರೇಲೆಕ್ಕಿಹಾಳದ ದಲಿತರ ಓಣಿಯ ಸರ್ಕಾರಿ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 58 ಮಕ್ಕಳಿದ್ದಾರೆ. ಮುಖ್ಯ ಶಿಕ್ಷಕರು, ಅತಿಥಿ ಶಿಕ್ಷಕರು ಸೇರಿ ಒಟ್ಟು ಮೂವರು ಶಿಕ್ಷಕರನ್ನು ಇಲಾಖೆ ನೇಮಿಸಿದೆ. ಆದರೆ ಕಳೆದ ಒಂದು ವರ್ಷದಿಂದ ಸಹ ಶಿಕ್ಷಕರೊಬ್ಬರು ಶಾಲೆಗೆ ಬಂದೆ ಇಲ್ಲ. ಇನ್ನು ಮುಖ್ಯ ಶಿಕ್ಷಕರು ಕಚೇರಿ ಕೆಲಸ ಎಂದು ವಾರದಲ್ಲಿ ಎರಡು ದಿನ ಬರುವುದಿಲ್ಲ. ಅತಿಥಿ ಶಿಕ್ಷಕರು ಇನ್ನೂ ನೇಮಕವಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ನಿತ್ಯ ಪಾಠ ಬೋಧನೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಒಂದು ವರ್ಷದಿಂದ ಶಾಲೆಗೆ ಸಹ ಶಿಕ್ಷಕ ಬಾರದಿದ್ದರೂ ಕೂಡ ಪ್ರತಿ ತಿಂಗಳು ವೇತನ ಪಡೆಯುತ್ತಾರೆ. ಹೆಚ್ಚುವರಿ ಶಿಕ್ಷಕರನ್ನು ನೇಮಿಸುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದರೆ ಈಗಾಗಲೆ ನಿಮ್ಮ ಶಾಲೆಗೆ ಮೂರು ಜನ ಶಿಕ್ಷಕರಿದ್ದಾರೆ ಎಂಬ ಉತ್ತರ ನೀಡುತ್ತಾರೆ. ಶಿಕ್ಷಕರು ಬಾರದ್ದರಿಂದ ಮಕ್ಕಳ ಭವಿಷ್ಯ ಡೋಲಾಯಮಾನವಾಗುತ್ತಿದೆ ಎಂದು ಪಾಲಕರಾದ ಮಾನಪ್ಪ ಭಜಂತ್ರಿ, ಲಕ್ಷ್ಮಣ ದೊಡ್ಡಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಒಬ್ಬ ಶಿಕ್ಷಕರು ಶಾಲೆಗೆ ಬಾರದ್ದರಿಂದ ಮತ್ತು ಇರುವ ಶಿಕ್ಷಕರು ಸರಿಯಾಗಿ ಶಾಲೆ ಆಗಮಿಸದ್ದರಿಂದ ನಿತ್ಯ ಮಕ್ಕಳು ತಮ್ಮಷ್ಟಕ್ಕೆ ತಾವು ಅಭ್ಯಾಸ ಮಾಡುತ್ತ ಶಾಲಾ ಆವರಣದಲ್ಲಿ ಕೂಡುತ್ತಾರೆ. ಇದರ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಶಿಕ್ಷಕರನ್ನು ನೇಮಿಸುವಂತೆ ಒತ್ತಾಯಿಸುತ್ತ ಬರುತಿದ್ದರೂ ನೇಮಕ ಮಾಡುತ್ತಿಲ್ಲ. ಅಲ್ಲದೆ ಸಹ ಶಿಕ್ಷಕರಿಗೆ ಶಾಲೆಗೆ ಹಾಜರಾಗುವಂತೆ ಮನವಿ ಮಾಡಿದರೆ ಪಾಲಕರಿಗೆ ಬಾಯಿಗೆ ಬಂದಂತೆ ಮಾತನಾಡುತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಶಾಲೆಗೆ ಚಕ್ಕರ್‌ ಹಾಕುತ್ತಿರುವ ಶಿಕ್ಷರನ್ನು ಅಮಾನತು ಮಾಡಬೇಕು. ಉತ್ತಮ ಶಿಕ್ಷಕರನ್ನು ನೇಮಿಸಬೇಕು. ಇಲ್ಲದಿದ್ದರೆ ಶಾಲೆಗೆ ಶಾಶ್ವತ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರಾದ ಅಂಬಣ್ಣ, ಮೌನೇಶ ತಲೆಕಟ್, ರೆಡ್ಡೆಪ್ಪ ತುರಡಗಿ ಇತರರು ಎಚ್ಚರಿಸಿದ್ದಾರೆ.

 

•ದೇವಪ್ಪ ರಾಠೊಡ

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.