ಮಸ್ಕಿ ಗೆಲ್ಲಲು ಗಡಿಯಲ್ಲೇ ಕಾರ್ಯತಂತ್ರ!

ಸಿದ್ದರಾಮಯ್ಯ-ವಿಜಯೇಂದ್ರ ಒಂದೇ ಕಡೆ ವಾಸ್ತವ್ಯ ! ­ಕೊಡುಕೊಳ್ಳುವಿಕೆ ತಂತ್ರಗಾರಿಕೆಗೆ ನೆರೆ-ಹೊರೆ ಕ್ಷೇತ್ರದ ಆಸರೆ

Team Udayavani, Apr 5, 2021, 7:39 PM IST

jkgut

ಮಸ್ಕಿ: ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದರೂ ನೆರೆ-ಹೊರೆ ಕ್ಷೇತ್ರದಲ್ಲೇ ಸದ್ದು-ಗದ್ದಲ ಜೋರಾಗಿದೆ. ವಿಶೇಷವಾಗಿ ಮಸ್ಕಿ ಗಡಿಗೆ ಹೊಂದಿಕೊಂಡ ಪಟ್ಟಣ, ಹಳ್ಳಿಗಳಲ್ಲೇ ರಾಜಕೀಯ ತಂತ್ರ-ಪತ್ರಿತಂತ್ರ ಸೂತ್ರ ಸಿದ್ಧವಾಗುತ್ತಿವೆ!.

ಮಸ್ಕಿ ಉಪಚುನಾವಣೆ ಗೆಲ್ಲಲು ಪಣತೊಟ್ಟು ಉಸ್ತುವಾರಿಗಳಾಗಿ ಆಗಮಿಸಿದ ಕಾಂಗ್ರೆಸ್‌ ಮತ್ತು ಬಿಜೆಪಿ ವರಿಷ್ಠರ ವಾಸ್ತವ್ಯ ಮತ್ತು ದಿನಚರಿಗಳು ಆರಂಭವೇ ಮಸ್ಕಿ ಗಡಿ ಪ್ರದೇಶದಲ್ಲಾಗುತ್ತಿರುವುದರಿಂದ ಮಸ್ಕಿ ಮಾತ್ರವಲ್ಲದೇ ನೆರೆ-ಹೊರೆ ಕ್ಷೇತ್ರಗಳಲ್ಲೂ ಚುನಾವಣೆ ನಡೆಯುತ್ತಿದೆಯಾ? ಎನ್ನುವ ಚಿತ್ರಣಗಳು ಕಾಣ ಸಿಗುತ್ತಿವೆ.

ವಿಶೇಷವಾಗಿ ಸುತ್ತಲೂ ಮಸ್ಕಿ ಕ್ಷೇತ್ರಕ್ಕೆ ಹೊಂದಿಕೊಂಡ ಸಿಂಧನೂರು, ಲಿಂಗಸುಗೂರು, ಕುಷ್ಟಗಿ, ಕನಕಗಿರಿ, ಮಾನ್ವಿ ಕ್ಷೇತ್ರಗಳಲ್ಲೂ ರಾಜಕೀಯ ಗೌಜು-ಗದ್ದಲ ಜೋರಾಗಿವೆ. ಗಡಿಯಲ್ಲೇ ಕಾರ್ಯತಂತ್ರ: ಬಿಜೆಪಿಯಲ್ಲಿ ಚುನಾವಣೆ ಉಸ್ತುವಾರಿ ಹೊತ್ತ ಸಚಿವ ಬಿ.ಶ್ರೀರಾಮುಲು, ಬಿ.ವೈ. ವಿಜಯೇಂದ್ರ, ಎನ್‌.ರವಿಕುಮಾರ್‌ ಸೇರಿ ಇತರೆ ಹಾಲಿ-ಮಾಜಿ ಶಾಸಕರು ಈಗಾಗಲೇ ಮಸ್ಕಿ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ.

ವಿಶೇಷವೆಂದರೆ ಸಚಿವ ಬಿ. ಶ್ರೀರಾಮುಲು ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಪಕ್ಕದ ಸಿಂಧನೂರು ನಗರದಲ್ಲಿ ವಾಸ್ತವ್ಯ ಹೂಡಿದ್ದರೆ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುದಗಲ್‌ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದಾರೆ. ಇವರ ರಾಜಕೀಯ ಕಾರ್ಯತಂತ್ರಗಳು ಇಲ್ಲಿಂದಲೇ ಆರಂಭವಾಗುತ್ತಿವೆ. ಕಾರ್ಯಕರ್ತರ ಸಭೆ, ಪಕ್ಷದ ಪ್ರಮುಖರು, ಜಾತಿವಾರು ಮುಖಂಡರು ಸೇರಿ ಎಲ್ಲರನ್ನೂ ಕರೆದು ಗಡಿಯಲ್ಲೇ ಚರ್ಚೆ ಮಾಡಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಇಲ್ಲಿಂದಲೇ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ.

ಇನ್ನು ಚುನಾವಣೆ ಪ್ರಚಾರಕ್ಕೂ ಗಡಿ ಪ್ರದೇಶದಿಂದಲೇ ಮೊದಲುಗೊಂಡು ಮಸ್ಕಿ ಪಟ್ಟಣಕ್ಕೆ ಅಂತ್ಯವಾಗುತ್ತಿವೆ. ಇಲ್ಲೂ ಅದೇ ವ್ಯವಸ್ಥೆ: ಕೇವಲ ಬಿಜೆಪಿ ಮಾತ್ರವಲ್ಲ, ಕಾಂಗ್ರೆಸ್‌ನಲ್ಲೂ ಅದೇ ಸ್ಥಿತಿ ಇದೆ. ಈಗಾಗಲೇ ಚುನಾವಣೆ ಅಖಾಡಕ್ಕೆ ಇಳಿದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಎಂಎಲ್ಸಿಗಳಾದ ಅಲ್ಲಂವೀರಭದ್ರ, ಎನ್‌.ಎಸ್‌. ಬೋಸರಾಜು, ಶಾಸಕ ಅಮರೇಗೌಡ ಬಯ್ನಾಪೂರ ಸೇರಿ ಇತರರು ನೆರೆಯ ಸಿಂಧನೂರು, ಮಾನ್ವಿ, ಲಿಂಗಸುಗೂರಲ್ಲಿ ವಾಸ್ತವ್ಯ ಹೂಡಿದ್ದಾರೆ.

ಇನ್ನು ಏ.5 ಮತ್ತು 6ರಂದು ಆಗಮಿಸುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ನೆರೆಯ ಸಿಂಧನೂರು ಮತ್ತು ಮುದಗಲ್‌ ಪಟ್ಟಣಗಳನ್ನೇ ವಾಸ್ತವ್ಯಕ್ಕೆ ಆಯ್ದುಕೊಂಡಿದ್ದಾರೆ. ಗಮನಾರ್ಹವೆಂದರೆ ಕಾಂಗ್ರೆಸ್‌ ವರಿಷ್ಠರು ಆಗಮಿಸುವ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ಒಂದು ಕಡೆಯಾದರೆ, ಪ್ರಚಾರದ ಮಾರ್ಗ ಮತ್ತೂಂದು. ಪ್ರವಾಸದ ಎರಡು ದಿನವೂ ವಾಸ್ತವ್ಯದ ಜಾಗಗಳನ್ನು ಕಾಂಗ್ರೆಸ್‌ನ ವರಿಷ್ಠರು ಪ್ರತ್ಯೇಕ ಎರಡು ಕಡೆ ಆಯ್ದುಕೊಂಡಿರುವುದು ವಿಶೇಷ.

ಮಸ್ಕಿ ಪ್ರವಾಸ ಮೊದಲ ದಿನ ಏ.5ರಂದು ಡಿಕೆ ಶಿವಕುಮಾರ ಮತ್ತು ಸಿದ್ದರಾಮಯ್ಯ ಸಿಂಧನೂರಿನಲ್ಲಿ ವಾಸ್ತವ್ಯ ಹೂಡಲಿದ್ದರೆ, ಏ.6ರಂದು ಮುದಗಲ್‌ ಪಟ್ಟಣದಲ್ಲಿ ವಾಸ್ತವ್ಯಕ್ಕೆ ಆಯ್ದುಕೊಂಡಿದ್ದಾರೆ. ಇನ್ನು ಇವರಿಬ್ಬರನ್ನು ಪ್ರಚಾರಕ್ಕಾಗಿ ಹೊತ್ತು ತರುವ ಹೆಲಿಕಾಪ್ಟರ್‌ ಮಾತ್ರ ಕುಷ್ಟಗಿಯಲ್ಲಿ ಲ್ಯಾಂಡ್‌ ಆಗಲಿದೆ. ಒಟ್ಟಿನಲ್ಲಿ ಮಸ್ಕಿ ಉಪಚುನಾವಣೆಯ ಪ್ರಚಾರಕ್ಕಾಗಿಯೇ ಎಲ್ಲ ಪಕ್ಷದ ನೇತಾರರು ಆಗಮಿಸುತ್ತಾರೆ. ಆದರೆ ಗಡಿ ಪ್ರದೇಶದಿಂದಲೇ ರಾಜಕೀಯ ಚಟುವಟಿಕೆ ಆರಂಭಿಸಲಾಗುತ್ತಿದೆ.

ಮಲ್ಲಿಕಾರ್ಜುನ ಚಿಲ್ಕರಾಗಿ 

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.