ಬಪ್ಪೂರು ರಸ್ತೆ ಕಾಮಗಾರಿಗೆ ಒತ್ತುವರಿ ಸಮಸ್ಯೆ!

| ಕಾಮಗಾರಿಗೆ 4.50 ಕೋಟಿ ರೂ.ವೆಚ್ಚ ನಿಗದಿ | ಮಳೆ ನಿಂತರೂ ಪುನಾರಂಭಗೊಳ್ಳದ ಕಾಮಗಾರಿ

Team Udayavani, Nov 3, 2020, 6:44 PM IST

rc-tdy-1

ಸಿಂಧನೂರು: ನಗರದ ಮೂಲಕ ಹಾದು ಹೋಗುವ ಜಿಲ್ಲಾಮುಖ್ಯರಸ್ತೆಯ ಸುಧಾರಣೆ ಕೆಲಸಕ್ಕೆ ರಸ್ತೆ ಬಲಭಾಗದಲ್ಲಿನ ಒತ್ತುವರಿ ಸಮಸ್ಯೆ ಕಂಟಕವಾಗಿದ್ದು, ತೆರವು ಕಾರ್ಯಾಚರಣೆಯ ಹೊಣೆ ಈಗ ಕಿತ್ತಾಟಕ್ಕೆ ಕಾರಣವಾಗಿದೆ.

ಜಿಲ್ಲಾ ಮುಖ್ಯರಸ್ತೆಯಾದರೂ ಅದರ ವ್ಯಾಪ್ತಿ ಎರಡು ಇಲಾಖೆಗಳಿಗೆ ಸೇರಿರುವುದರಿಂದ ಕಾಮಗಾರಿಗೆ ತೊಡಕು ಎದುರಾಗಿದೆ. ಭರದಿಂದ ಆರಂಭಿಸಲಾದ ಕೆಲಸವನ್ನು ದಿಢೀರ್‌ ಕೈ ಬಿಡಲಾಗಿದೆ. ಕೆಲಸ ಕೈ ಬಿಡುವುದಕ್ಕೆ ಮಳೆ ಕಾರಣವೆಂದು ಪಿಡಬ್ಲ್ಯುಡಿ ಇಲಾಖೆಯ ಮೂಲಗಳು ತಿಳಿಸಿದರೆ, ಅದರ ವಾಸ್ತವ ಚಿತ್ರಣವೇ ಬೇರೆಯೆಂಬ ಸಂಗತಿ ಚರ್ಚೆಗೆ ಕಾರಣವಾಗಿದೆ.

ರಸ್ತೆಗೆ ಒತ್ತುವರಿ ಮುಳುವು: ಸಿಂಧನೂರು- ಬಪ್ಪೂರು ಮಾರ್ಗದ ಮುಖ್ಯರಸ್ತೆ 21 ಕಿಮೀನಷ್ಟಿದೆ. ಇದರಲ್ಲಿ ನಗರ ವ್ಯಾಪ್ತಿಯಿಂದ ಬಪ್ಪೂರು ಮಾರ್ಗದ ಆರಂಭಿಕ 1 ಕಿಮೀ ರಸ್ತೆ ನಗರಸಭೆಯ ವ್ಯಾಪ್ತಿಗೆ ಒಳಪಟ್ಟಿದೆ. ಬಾಬು ಜಗಜೀವನರಾಂ ವೃತ್ತದಿಂದ ನಗರ ವ್ಯಾಪ್ತಿಯಲ್ಲಿ ಈ ರಸ್ತೆ ಆರಂಭವಾಗುತ್ತಿದ್ದು, ಇದರ ಬಲಭಾಗದ ಉದ್ದಕ್ಕೂ ಕಟ್ಟಡಗಳಿವೆ. ಈ ಪೈಕಿ ಕೆಲವು ಕಡೆಗಳಲ್ಲಿರಸ್ತೆ ಒತ್ತುವರಿಯಾಗಿದೆ. ನಗರ ವ್ಯಾಪ್ತಿಗೆ ಒಳಪಟ್ಟ ಪ್ರದೇಶದಲ್ಲಿ ಅನಧಿಕೃತ ಒತ್ತುವರಿ ಇರುವುದರಿಂದ ತೆರವು ಮಾಡಿಕೊಡುವಂತೆ ನಗರಸಭೆಯ ಬೆನ್ನು ಬೀಳಲಾಗಿದೆ. ಒತ್ತುವರಿ ಗುರುತಿಸುವಿಕೆ ಹೊರತುಪಡಿಸಿದರೆ, ಮುಂದಿನ ಪ್ರಕ್ರಿಯೆ ನಡೆದಿಲ್ಲ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಗರಸಭೆಗೆ ಏ.24, 2020ರಂದು ಬರೆದ ಪತ್ರಕ್ಕೆ ಇದುವರೆಗೂ ಮೋಕ್ಷ ದೊರಕಿಲ್ಲ.

ಪ್ರಭಾವದ ಶಂಕೆ: ಕುರುಕುಂದಾ, ತಿಡಿಗೋಳ, ನಿಡಿಗೋಳ, ಚಿರತನಾಳ, ಬೊಮ್ಮನಾಳ ಸೇರಿದಂತೆ ಹಲವು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹದಗೆಟ್ಟಿದೆ. ವಾಹನ ಸಂಚಾರ ಕಷ್ಟವಾಗಿದ್ದು, ಜನ ನಿತ್ಯ ಯಾತನೆ ಅನುಭವಿಸುವಂತಾಗಿದೆ. ಲೋಕೋಪಯೋಗಿ ಇಲಾಖೆ 4.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆಗೆ ಮುಂದಾಗಿದ್ದರಿಂದ ಜನ ನಿಟ್ಟುಸಿರು ಬಿಟ್ಟಿದ್ದರು. ರಸ್ತೆಯ  ಎಡಭಾಗದಲ್ಲಿನ ಗೂಡಂಗಡಿ ಒತ್ತುವರಿಯನ್ನು ಸುಲಭವಾಗಿ ತೆರವುಗೊಳಿಸಲಾಗಿದೆ. ಜತೆಗೆ, ಕೆಲವು ಕಡೆ ಚರಂಡಿ ನಿರ್ಮಾಣ ಕೆಲಸ ಆರಂಭಿಸಲಾಗಿದೆ. ಆದರೆ, ರಸ್ತೆ ಬಲಭಾಗದಲ್ಲಿ ಮಾತ್ರ ಸಮಸ್ಯೆ ಕಾಣಿಸಿದೆ. ನಗರದ ಮುಖ್ಯರಸ್ತೆಗೆ ಹೊಂದಿಕೊಂಡೇ ಬಲಕ್ಕೆ ಕಟ್ಟಡಗಳು ಆರಂಭವಾಗಿರುವುದರಿಂದ ಕಾರ್ಯಾಚರಣೆಗೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆಂಬ ದೂರು ಕೇಳಿಬಂದಿವೆ. ಸಣ್ಣಪುಟ್ಟ ಡಬ್ಟಾಗಳನ್ನು ದಿಢೀರ್‌ ಎತ್ತಂಗಡಿ ಮಾಡಿಸುವ ಅಧಿಕಾರಿಗಳು ಬೃಹತ್‌ ಕಟ್ಟಡಗಳ ವಿಷಯದಲ್ಲಿ ಮೌನ ತಾಳಿದ್ದು ಯಾಕೆ? ಎಂಬ ಪ್ರಶ್ನೆ ಕೇಳಿಬಂದಿವೆ.

ಆರಂಭದಲ್ಲೇ ಕಳಪೆ ದೂರು: ಕೆಲಸ ಕೈಗೆತ್ತಿಕೊಂಡ ಗುತ್ತಿಗೆದಾರರು 200 ಮೀಟರ್‌ನಷ್ಟು ಚರಂಡಿ ನಿರ್ಮಿಸಿದ್ದಾರೆ. ಅಲ್ಲಲ್ಲಿ ವಿಸ್ತರಣೆ ಕೆಲಸವಾಗಿದೆ. ಕಿಮೀ 0.6ರಲ್ಲಿ ಮರಂ ಸಹ ಹಾಕಲಾಗಿದೆ. ಈ ಹಂತದಲ್ಲೇ ಗುಣಮಟ್ಟ ಕಾಯ್ದುಕೊಳ್ಳುತ್ತಿಲ್ಲವೆಂಬ ದೂರು ಸಲ್ಲಿಕೆಯಾಗಿವೆ. ಕೋಟ್ಯಂತರ ರೂ. ವೆಚ್ಚದ ಕೆಲಸವನ್ನು ಬೇಕಾಬಿಟ್ಟಿಯಾಗಿ ಕೈಗೊಂಡರೆ ಹೇಗೆ? ಎಂದು ಅಧಿಕಾರಿಗಳನ್ನು ಪ್ರಶ್ನಿಸಲಾಗಿದೆ.

ಈ ನಡುವೆ ಕಾಮಗಾರಿಯನ್ನು ತಾತ್ಕಾಲಿಕವಾಗಿ ಕೈಬಿಟ್ಟು ಅಧಿಕಾರಿಗಳು ತಟಸ್ಥ ಧೋರಣೆ ತಳೆದಿದ್ದಾರೆ. ರಸ್ತೆಯ ಬಲಭಾಗದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ ಹಾದು ಹೋಗಿದ್ದು, ಇದನ್ನು ಕೂಡ ತೆರವು ಮಾಡಬೇಕಿದೆ. ಭಾರಿ ನಿರೀಕ್ಷೆಯೊಂದಿಗೆ ಕೈಗೆತ್ತಿಕೊಳ್ಳಲಾದ ರಸ್ತೆ ಕೆಲಸಕ್ಕೆ ಆರಂಭದಲ್ಲಿಯೇ ಹಲವು ವಿಘ್ನ ಸುತ್ತಿಕೊಂಡಿದ್ದು, ಬಪ್ಪೂರು ಮಾರ್ಗದ ಹಳ್ಳಿಯ ನಿವಾಸಿಗಳು ತಗ್ಗುದಿನ್ನೆ ರಸ್ತೆಯಲ್ಲಿ ಹೊಯ್ದಾಡುತ್ತಲೇ ನಗರಕ್ಕೆ ಬರುವಂತಾಗಿದೆ.

ಕೆಲವು ಶೆಡ್‌, ಒಂದು ಕಟ್ಟಡ ಮಾತ್ರ ಒತ್ತುವರಿಯಾಗಿದೆ. ಮಾರ್ಕ್‌ ಹಾಕಿ ಕೊಟ್ಟಿದ್ದು, ಸಿಟಿ ವ್ಯಾಪ್ತಿ ಇರುವುದರಿಂದ ತೆರವುಗೊಳಿಸುವ ಅ ಧಿಕಾರ ನಗರಸಭೆಯವರಿಗೆ ಇದೆ. ಮತ್ತೂಮ್ಮೆ ಗಮನಕ್ಕೆ ತರಲಾಗುವುದು. ಮಳೆಯ ಕಾರಣಕ್ಕಷ್ಟೇ ನಿಲ್ಲಿಸಿದ್ದು, ವಾರದಲ್ಲೇ ಕಾಮಗಾರಿ ಆರಂಭಿಸಲಾಗುವುದು. – ಸಿ.ಎಸ್‌.ಪಾಟೀಲ್‌, ಎಇಇ, ಲೋಕೋಪಯೋಗಿ ಇಲಾಖೆ.

 

-ಯಮನಪ್ಪ ಪವಾರ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.