ಟಿಕೆಟ್ ನೀಡುವುದು ಒಬ್ಬರ ನಿರ್ಧಾರವಲ್ಲ: ಡಿಕೆಶಿ ಹೇಳಿಕೆಗೆ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ
Team Udayavani, Sep 18, 2022, 3:30 PM IST
ರಾಯಚೂರು: ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದು, ಕೆಲಸ ಮಾಡದವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನಲು ಅವರಿಗೆ ಅಧಿಕಾರವಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅಭಿಪ್ರಾಯ ಪಟ್ಟರು.
ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಸಾರ್ವತ್ರಿಕ ಚುವಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಲ್ಲ. ಅಧ್ಯಕ್ಷರಾಗಿ ಡಿಕೆಶಿವಕುಮಾರ್ ಗೆ ಅಧಿಕಾರವಿದ್ದು, ಅವರ ಹೇಳಿಕೆ ತಪ್ಪೇನಿಲ್ಲ. ಸಿಎಲ್ ಪಿ ನಾಯಕರಿದ್ದಾರೆ, ಎಲೆಕ್ಷನ್ ಕಮಿಟಿ ಟಿಕೆಟ್ ನೀಡುವ ನಿರ್ಧಾರ ಮಾಡುತ್ತದೆ. ಇಲ್ಲಿ ಒಬ್ಬರ ನಿರ್ಧಾರ ಅಂತಿಮವಲ್ಲ. ಎಲ್ಲರೂ ಒಟ್ಟಿಗೆ ಕುಳಿತು ನಿರ್ಧಾರ ಮಾಡುತ್ತಾರೆ ಎಂದರು.
ಇದನ್ನೂ ಓದಿ:ವಿಶ್ವಕಪ್ ನಲ್ಲಿ ಕೊಹ್ಲಿ ಓಪನಿಂಗ್ ; ರಾಹುಲ್ ಸ್ಥಾನಕ್ಕೆ ಕುತ್ತು ತಂದ ನಾಯಕ ರೋಹಿತ್ ಹೇಳಿಕೆ
ಸಿದ್ದರಾಮಯ್ಯ ಮಾತನಾಡುವ ರೀತಿ ಬೇರೆ, ಡಿಕೆಶಿ ಮಾತನಾಡುವ ರೀತಿ ಬೇರೆ. ಡಿಕೆಶಿಯವರು ಜೊರಾಗಿ ಮಾತನಾಡುತ್ತಾರೆ. ಅದು ಅವರ ಶೈಲಿ ಅಷ್ಟೇ. ಸಿದ್ದರಾಮೊತ್ಸವ ಯಶಸ್ವಿಯಾಯ್ತು ಆದ್ರೆ ಟ್ರಾಫಿಕ್ ನಿರ್ವಹಣೆ ಆಗಲಿಲ್ಲ ಎಂದು ಸಹಜವಾಗಿ ಹೇಳಿದ್ದಾರೆ. ಅದಕ್ಕೇ ನಾವು ಏನು ಮಾಡಲು ಸಾಧ್ಯ. ಹೆಚ್ಚು ಜನ ಬಂದಿದ್ದಕ್ಕೆ ಪೊಲೀಸರಿಗೂ ಏನೂ ಮಾಡಲು ಆಗಲಿಲ್ಲ. ಅದಕ್ಕೆ ಡಿಕೆಶಿಯವರು ಟ್ರಾಫಿಕ್ ಮ್ಯಾನೇಜ್ ಮಾಡುವಲ್ಲಿ ಸೋತಿದ್ದೇವೆ ಎಂದಿದ್ದಾರೆ ವಿನಃ ಕಾರ್ಯಕ್ರಮ ವಿಫಲವಾಗಿದೆ ಎಂದಲ್ಲ ಎಂದು ರಾಯರೆಡ್ಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ